Traffic Advisory: ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ ಇರಲ್ಲ!
Traffic Advisory: ಗೌರಿ - ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಸಂಚಾರ ಬದಲಾವಣೆ ಹಾಗೂ ಪಾರ್ಕಿಂಗ್ ನಿಷೇಧ ಮಾಡಲಾಗಿದೆ. ಹೀಗಾಗಿ ಇಂದು - ನಾಳೆ ನೀವು ಈ ಮಾರ್ಗಗಳಲ್ಲಿ ಪ್ರಯಾಣಿಸುವುದಿದ್ದರೆ, ಮೊದಲೇ ನೋಡಿಕೊಳ್ಳಿ. ಗಣೇಶ ಮೂರ್ತಿ ಪ್ರತಿಷ್ಠಾಪನೆ, ಮೆರವಣಿಗೆ ಹಾಗೂ ಗಣೇಶ ಮೂರ್ತಿ ವಿಸರ್ಜನೆ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಲವು ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದರಿಂದ ಬೆಂಗಳೂರು ಟ್ರಾಫಿಕ್ ಪೊಲೀಸರು ಮಾರ್ಗಸೂಚಿ ಪ್ರಕಟಿಸಿದ್ದಾರೆ.
ಸಂಚಾರ ಮಾರ್ಗ ಬದಲಾವಣೆಯ ಜೊತೆಗೆ ನಗರದ ಪ್ರಮುಖ ಭಾಗದಲ್ಲಿ ಪಾರ್ಕಿಂಗ್ ವ್ಯವಸ್ಥೆಯಲ್ಲೂ ಕೆಲವು ಸಣ್ಣಪುಟ್ಟ ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆ. ಹಲಸೂರು ಕೆರೆಯ ಮುಖ್ಯದ್ವಾರ, ಕೆನ್ಸಿಂಗ್ಟನ್ ರಸ್ತೆ, ಅಣ್ಣಸ್ವಾಮಿ ಮೊದಲಿಯಾರ್ ರಸ್ತೆ ಹಾಗೂ ಟ್ಯಾಂಕ್ ರಸ್ತೆಗಳಲ್ಲಿ ಸೆಪ್ಟೆಂಬರ್ 7ರಿಂದ ಸೆಪ್ಟೆಂಬರ್ 9 ವರೆಗೆ ಪಾರ್ಕಿಂಗ್ ನಿಷೇಧಿಸಲಾಗಿದೆ. ಅಲ್ಲದೇ ಈ ರಸ್ತೆಗಳಲ್ಲಿ ಎಲ್ಲಾ ಮಾದರಿಯ ವಾಹನಗಳ ಪಾರ್ಕಿಂಗ್ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವುದಾಗಿ ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರಿನ ಈ ಮಾರ್ಗದಲ್ಲಿ ಸಂಚಾರ ನಿರ್ಬಂಧ
Traffic diversion in Bengaluru: ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಇರಲಿದೆ. ಅದರಲ್ಲಿ ಮುಖ್ಯವಾಗಿ ಕೆನ್ಸಿಂಗ್ಟನ್ ಮತ್ತು ಮರ್ಫೀ ರಸ್ತೆ ಜಂಕ್ಷನ್ ಮಾರ್ಗವಾಗಿ ಎಂ.ಇ.ಜಿಯಿಂದ - ಹಲಸೂರು ಕೆರೆಯ ಕಡೆಗೆ ಹಾಗೂ ಕೆನ್ಸಿಂಗ್ಟನ್ ರಸ್ತೆಗಳಲ್ಲಿ ದ್ವಿಮುಖ ಟ್ರಾಫಿಕ್ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಹೀಗಾಗಿ, ಎಂಇಜಿ ಮಾರ್ಗವಾಗಿ ಕನ್ನಿಂಗ್ಟನ್-ಮರ್ಫೀ ರಸ್ತೆ ಜಂಕ್ಷನ್ ಕಡೆಗೆ ಏಕಮುಖ ಸಂಚಾರಕ್ಕೆ ಮಾತ್ರ ಅವಕಾಶ ಇರಲಿದೆ.
ತಿರುವಳ್ಳವರ್ ಪ್ರತಿಮೆ ಜಂಕ್ಷನ್-ಅಣ್ಣಸ್ವಾಮಿ ಮೊದಲಿಯಾರ್ ರಸ್ತೆ ಮಾರ್ಗವಾಗಿ ಆರ್.ಬಿ.ಐ ಜಂಕ್ಷನ್ ಮೂಲಕ ಹಲಸೂರು ಲೇಕ್ ಕಡೆಗೆ ಅಣ್ಣಸ್ವಾಮಿ ಮೊದಲಿಯಾರ್ ರಸ್ತೆ ಮಾರ್ಗದಲ್ಲಿ ದ್ವಿಮುಖ ಪ್ರಯಾಣವನ್ನು (ಸಂಚಾರ) ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಹಲಸೂರು ಕೆರೆಯ ಮಾರ್ಗವಾಗಿ ತಿರುವಳ್ಳವರ್ ಪ್ರತಿಮೆ ಜಂಕ್ಷನ್ ಕಡೆಗೆ ವಿಮುಖ ಸಂಚಾರಕ್ಕೆ ಅವಕಾಶ ಇರಲಿದೆ.
ಈ ರಸ್ತೆಗಳಲ್ಲಿ ಮಾರ್ಗ ಬದಲಾವಣೆ
ಬೆಂಗಳೂರಿನ ಪ್ರಮುಖ ಭಾಗದಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಿರುವುದಾಗಿ ಟ್ರಾಫಿಕ್ ಪೊಲೀಸರು ಸೋಷಿಯಲ್ ಮೀಡಿಯಾ ಎಕ್ಸ್ನ ಮೂಲಕ ತಿಳಿಸಿದ್ದಾರೆ. ಕೆನ್ಸಿಂಗ್ಟನ್ ರಸ್ತೆ ಮಾರ್ಗವಾಗಿ ಎಂ.ಇ.ಜಿ ಮೂಲಕ-ಹಲಸೂರು ಕೆರೆಯ ಕಡೆಗೆ ಹೋಗುವ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಇದರ ಬದಲಾಗಿ ಕೆನ್ಸಿಂಗ್ಟನ್ನಿಂದ ಗುರದ್ವಾರ ಜಂಕ್ಷನ್ ಬಲ ತಿರುವು - ಗಂಗಾಧರ ಚೆಟ್ಟಿ ರಸ್ತೆ ಡಿಕನ್ಸನ್ ರಸ್ತೆ ಬಲ ತಿರುವು- ಸೆಂಟ್ ಜಾನ್ಸ್ ರಸ್ತೆ - ಶ್ರೀ ಸರ್ಕಲ್ ಲಾವಣ್ಯ ಚಿತ್ರಮಂದಿರ ಜಂಕ್ಷನ್- ನಾಗಾ ಜಂಕ್ಷನ್ ಮೂಲಕ ಪುಲಕೇಶಿನಗರ - ಪ್ರಾಮಿನೇಡ್ ರಸ್ತೆ-ವೀರ ರಸ್ತೆ ಇಲ್ಲವೇ ಹಲಸೂರು ಕೆರೆ ಮಾರ್ಗವಾಗಿ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.
#ಸಂಚಾರಸಲಹೆ#TrafficAdvisory @DgpKarnataka @KarnatakaCops @CPBlr @Jointcptraffic @BlrCityPolice @blrcitytraffic @acpeasttraffic @acpwfieldtrf @DCPTrNorthBCP @DCPTrWestBCP @ftowntrfps @kghallitrfps @bwaditrafficps @snagartrps pic.twitter.com/ObtW1AnwW5
— DCP Traffic East ಉಪ ಪೊಲೀಸ್ ಆಯುಕ್ತರು ಸಂಚಾರ ಪೂರ್ವ (@DCPTrEastBCP) September 5, 2024
ಇನ್ನು ತಿರುವಳ್ಳವರ್ ಪ್ರತಿಮೆ ಜಂಕ್ಷನ್-ಅಣ್ಣಸ್ವಾಮಿ ಮೊದಾಲಿಯಾರ್ ರಸ್ತೆ ಮಾರ್ಗವಾಗಿ ಹಲಸೂರು ಲೇಕ್ ಮಾರ್ಗವಾಗಿ ಸಂಚಾರ ಮಾಡುವ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಈ ಮಾರ್ಗವಾಗಿ ಸಾಗುವ ವಾಹನಗಳು ಗಂಗಾಧರ್ ಚೆಟ್ಟಿ ರಸ್ತೆಯ ಮಾರ್ಗವಾಗಿ ಸಾಗಿ ಮುಂದೆ ಆರ್.ಬಿ.ಎನ್.ಎಂ.ಎಸ್ ಬಳಿ ಎಡತಿರುವು ತೆಗೆದುಕೊಳ್ಳಬೇಕಾಗುತ್ತದೆ. ಇನ್ನು ಡಿಕೆ ರಸ್ತೆಯ ಮೂಲಕ ಸೇಂಟ್ ಜಾನ್ಸ್ ರಸ್ತೆ ತಲುಪಿ ಸೇಟ್ ಚಾನ್ಸ್ ರಸ್ತೆ - ಶ್ರೀ ಸರ್ಕಲ್ - ಲಾವಣ್ಯ ಚಿತ್ರಮಂದಿರ ಜಂಕ್ಷನ್- ನಾಗಾ ಜಂಕ್ಷನ್ ಮಾರ್ಗವಾಗಿ ಪುಲಕೇಶಿನಗರ, ಮಿಲ್ಲರ ರಸ್ತೆ ಮಾರ್ಗ ಇಲ್ಲವೇ ಹಲಸೂರು ಕೆರೆ ಡೈವರ್ಶನ್ ತೆಗೆದುಕೊಳ್ಳಬಹುದಾಗಿದೆ.
40 ಸಾವಿರಕ್ಕೂ ಹೆಚ್ಚು ಗಣೇಶ ಮೂರ್ತಿ ವಿಸರ್ಜನೆ
ಪುಲಕೇಶಿನಗರದ ಹಲಸೂರು ಕೆರೆಯ ಕಲ್ಯಾಣಿಯಲ್ಲಿ ಸೆಪ್ಟೆಂಬರ್ 7ರಿಂದ ಸೆಪ್ಟೆಂಬರ್ 9ರ ವರೆಗೆ ಬೆಂಗಳೂರಿನ ವಿವಿಧ ಭಾಗದಲ್ಲಿ ಅಂದಾಜು 40,000 ಸಾವಿರಕ್ಕೂ ಹೆಚ್ಚು ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಗುತ್ತದೆ. ಹೀಗಾಗಿ, ಈ ಭಾಗದಲ್ಲಿ ಟ್ರಾಫಿಕ್ ಜಾಮ್ ತಪ್ಪಿಸಲು ಹಾಗೂ ಸುಗಮ ಸಂಚಾರದ ದೃಷ್ಟಿಯಿಂದ ಹಲಸೂರು ಕೆರೆಯ ಸುತ್ತಮುತ್ತ ಸಂಜೆ 4 ಗಂಟೆಯಿಂದ ಮುಂದಿನ ದಿನದ ಮುಂಜಾನೆ 4 ಗಂಟೆಯವರೆಗೆ ಸಂಚಾರ ನಿರ್ಬಂಧಿಸಲಾಗಿರುತ್ತದೆ ಎಂದು ಬೆಂಗಳೂರು ಟ್ರಾಫಿಕ್ ಪೊಲೀಸರು ಹೇಳಿದ್ದಾರೆ.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications