Hebbal Flyover: ಹೆಬ್ಬಾಳ ಮೇಲ್ಸೇತುವೆ ವಿಸ್ತರಣೆ ಕಾಮಗಾರಿ; ದ್ವಿಚಕ್ರ ವಾಹನ ಹೊರತುಪಡಿಸಿ ಉಳಿದ ವಾಹನ ಸಂಚಾರ ನಿಷೇಧ
ಹೆಬ್ಬಾಳ ಮೇಲ್ಸೇತುವೆ ವಿಸ್ತರಣೆ ಕಾಮಗಾರಿ ಏಪ್ರಿಲ್ 17 ರಿಂದ ಶುರುವಾಗಲಿದ್ದು, ಸಂಚಾರ ಬದಲಾವಣೆ ಬಗ್ಗೆ ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಮೇಲ್ಸೇತುವೆಗಾಗಿ ಎರಡು ಹೊಸ ಲೇನ್ಗಳನ್ನು ನಿರ್ಮಿಸುವ ಕಾರಣ ಉತ್ತರ ಬೆಂಗಳೂರಿನಲ್ಲಿ ಸರಣಿ ಸಂಚಾರ ಬದಲಾವಣೆಯಾಗಲಿದೆ ಎಂದು ಪೊಲೀಸರು ಹೇಳಿದ್ದಾರೆ.

"ಬಿಡಿಎ ಹೆಬ್ಬಾಳ ಮೇಲ್ಸೇತುವೆಗೆ ಎರಡು ಹೊಸ ಹೆಚ್ಚುವರಿ ಟ್ರ್ಯಾಕ್ಗಳನ್ನು ಸೇರಿಸಲು ರಸ್ತೆ ಮೂಲಸೌಕರ್ಯ ಕಾಮಗಾರಿಗಳನ್ನು ಪ್ರಾರಂಭಿಸಿದೆ. ಈ ಕಾರಣದಿಂದ ಕೆಆರ್ ಪುರಂ ರ್ಯಾಂಪ್ ಮುಖ್ಯ ಟ್ರ್ಯಾಕ್ಗೆ ಸೇರುವ ಜಂಕ್ಷನ್ನಲ್ಲಿ ಈಗಿರುವ ಎರಡು ಸ್ಪ್ಯಾನ್ಗಳನ್ನು ಕಿತ್ತು ಹಾಕುವ ಅಗತ್ಯವಿದೆ" ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ ಮಂಗಳವಾರ ಮಾಹಿತಿ ನೀಡಿದ್ದಾರೆ.
ಬುಧವಾರದಿಂದ ಸಂಚಾರ ನಿಷೇಧ
ಕಾಮಗಾರಿ ಆರಂಭಿಸುವ ಕಾರಣ, ಹೆಬ್ಬಾಳ ಮೇಲ್ಸೇತುವೆಯ ಕೆಆರ್ ಪುರಂ ಅಪ್ ರ್ಯಾಂಪ್ನಲ್ಲಿ ದ್ವಿಚಕ್ರ ಹೊರತುಪಡಿಸಿ ಎಲ್ಲಾ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ಹೇಳಿದ್ದಾರೆ.
ಈ ಕೆಳಗಿನ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸೂಚನೆ ನೀಡಲಾಗಿದೆ.
1. ನಾಗವಾರದಿಂದ (ORR) ಮೇಖ್ರಿ ವೃತ್ತದ ಮೂಲಕ ನಗರದ ಕಡೆಗೆ ಹೋಗುವ ಪ್ರಯಾಣಿಕರು ಫ್ಲೈಓವರ್ ಕೆಳಗಿನ ಹೆಬ್ಬಾಳ ವೃತ್ತಕ್ಕೆ ಹೋಗಿ, ಕೊಡಿಗೇಹಳ್ಳಿ ಕಡೆಗೆ ಬಲಕ್ಕೆ ತೆಗೆದುಕೊಳ್ಳಬಹುದು, ನಂತರ ಸರ್ವಿಸ್ ರಸ್ತೆಯನ್ನು ಸೇರಲು ಮತ್ತು ಮುಂದೆ ಬೆಂಗಳೂರು ನಗರದ ಕಡೆಗೆ ಚಲಿಸಲು ಯು-ಟರ್ನ್ ತೆಗೆದುಕೊಳ್ಳಬಹುದು.
2. ಕೆಆರ್ ಪುರ ಕಡೆಯಿಂದ ನಗರದ ಕಡೆಗೆ ಹೋಗುವ ವಾಹನ ಸವಾರರು ನಗರವನ್ನು ಪ್ರವೇಶಿಸಲು ಪರ್ಯಾಯ ಮಾರ್ಗಗಳಾದ ಐಒಸಿ-ಮುಕುಂದ ಥಿಯೇಟರ್ ರಸ್ತೆ, ಲಿಂಗರಾಜಪುರಂ ಮೇಲ್ಸೇತುವೆ ಮಾರ್ಗ ಮತ್ತು ನಾಗವಾರ-ಟ್ಯಾನರಿ ರಸ್ತೆಯನ್ನು ಬಳಸಬಹುದು.
3. ಹೆಗ್ಡೆನಗರ-ಥಣಿಸಂದ್ರದ ಪ್ರಯಾಣಿಕರು ನಗರವನ್ನು ಪ್ರವೇಶಿಸಲು ಜಿಕೆವಿಕೆ- ಜಕ್ಕೂರು ರಸ್ತೆಯನ್ನು ಬಳಸಬಹುದು.
4. ಕೆಆರ್ ಪುರಂನಿಂದ ಯಶವಂತಪುರ ಕಡೆಗೆ ಹೋಗುವ ಪ್ರಯಾಣಿಕರು ಹೆಬ್ಬಾಳ ಮೇಲ್ಸೇತುವೆಯಿಂದ ನೇರವಾಗಿ ಬಿಇಎಲ್ (BEL) ವೃತ್ತದ ಕಡೆಗೆ ಹೋಗಬಹುದು ಮತ್ತು ಬಿಇಲ್ ವೃತ್ತದಲ್ಲಿ ಎಡ ತಿರುವು ಪಡೆದು ಸದಾಶಿವನಗರ ಪಿಎಲ್ ಜಂಕ್ಷನ್ಗೆ ತಲುಪಬಹುದು ಮತ್ತು ಬಲ ತಿರುವು ತೆಗೆದುಕೊಂಡು ಐಐಎಸ್ಸಿ (IISc) ಕಡೆಗೆ ಮತ್ತು ಯಶವಂತಪುರ ಕಡೆಗೆ ಸಾಗಬಹುದು.
5. ಕೆಆರ್ ಪುರಂ, ಹೆಣ್ಣೂರು, ಎಚ್ಆರ್ಬಿಆರ್ ಲೇಔಟ್, ಬಾಣಸವಾಡಿ, ಕೆ.ಜಿ.ಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ ಕೆಐಎಎಲ್ ವಿಮಾನ ನಿಲ್ದಾಣದ ಕಡೆಗೆ ಪ್ರಯಾಣಿಸುವ ಪ್ರಯಾಣಿಕರು ಹೆಣ್ಣೂರು-ಬಾಗಲೂರು ರಸ್ತೆಯ ಮೂಲಕ ವಿಮಾನ ನಿಲ್ದಾಣವನ್ನು ತಲುಪುವಂತೆ ಮನವಿ ಮಾಡಲಾಗಿದೆ.
ಮುಂದಿನ ಆದೇಶದವರೆಗೆ ವಾಹನ ಸಂಚಾರ ನಿಷೇಧ ಜಾರಿಯಲ್ಲಿರುತ್ತದೆ, ನಾಗರಿಕರು ಸಹಕರಿಸಬೇಕೆ ಎಂದು ಸಂಚಾರ ಪೊಲೀಸ್ ಇಲಾಖೆ ಮನವಿ ಮಾಡಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications