Bengaluru Traffic: ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಪಾರ್ಕಿಂಗ್ಗೆ ನಿರ್ಬಂಧ
ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆಯಲಿರುವ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಟ್ವೆಂಟಿ-20 ಪಂದ್ಯಕ್ಕೂ ಮುನ್ನ ಬೆಂಗಳೂರು ಟ್ರಾಫಿಕ್ ಪೊಲೀಸರು (ಬಿಟಿಪಿ) ಸೆಂಟ್ರಲ್ ಬ್ಯುಸಿನೆಸ್ ಡಿಸ್ಟ್ರಿಕ್ಟ್ (ಸಿಬಿಡಿ) ನಲ್ಲಿ ವಾಹನ ನಿಲುಗಡೆಗೆ ನಿರ್ಬಂಧ ವಿಧಿಸಿದ್ದಾರೆ.
ಕ್ವೀನ್ಸ್ ರಸ್ತೆ, ಎಂಜಿ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್, ಕಬ್ಬನ್ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರ್ಬಾ ರಸ್ತೆ, ಡಾ ಬಿಆರ್ ಅಂಬೇಡ್ಕರ್ ರಸ್ತೆ, ಲ್ಯಾವೆಲ್ಲೆ ರಸ್ತೆ, ವಿಟ್ಲ ಮಲ್ಯ ರಸ್ತೆ, ನೃಪತುಂಗ ರಸ್ತೆಯಲ್ಲಿ ವಾಹನ ನಿಲುಗಡೆಗೆ ನಿರ್ಬಂಧ ಹೇರಲಾಗಿದೆ. ಬುಧವಾರ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 11.30 ರವರೆಗೆ ಎಲ್ಲಾ ರೀತಿಯ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.

ಜನರು ಪರ್ಯಾಯವಾಗಿ ಕಿಂಗ್ಸ್ ರಸ್ತೆ, ಯುಬಿ ಸಿಟಿ ಪಾರ್ಕಿಂಗ್ ಸ್ಥಳ ಮತ್ತು ಶಿವಾಜಿನಗರದ ಬಿಎಂಟಿಸಿ ಡಿಪೋದ ಮೊದಲ ಮಹಡಿಯಲ್ಲಿ ವಾಹನ ನಿಲುಗಡೆ ಮಾಡಬಹುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕ್ರಿಕೆಟ್ ವೀಕ್ಷಣೆಗೆ ಬರುವವರನ್ನು ಹೊರತು ಪಡಿಸಿ ಉಳಿದ ಪ್ರಯಾಣಿಕರು ಕ್ರೀಡಾಂಗಣದ ಸುತ್ತ ಮುತ್ತಲಿನ ರಸ್ತೆಗಳಲ್ಲಿ ಸಂಚಾರ ತಪ್ಪಿಸುವಂತೆ ಪೊಲೀಸರು ವಿನಂತಿಸಿದ್ದಾರೆ.
ಟ್ರಾಫಿಕ್ ಕಿರಿ ಕಿರಿ ತಪ್ಪಿಸಲು ಮೆಟ್ರೋ ಬಳಸಿ
ಟ್ರಾಫಿಕ್, ಪಾರ್ಕಿಂಗ್ ಕಿರಿ ಕಿರಿ ತಪ್ಪಿಸಲು ಪಂದ್ಯವನ್ನು ನೋಡಲು ಬರುವವರು ನಮ್ಮ ಮೆಟ್ರೋ ಸೇವೆಯವನ್ನು ಬಳಸಿಕೊಳ್ಳಬಹುದು. ಪಂದ್ಯದ ದಿನ ಬಿಎಂಆರ್ ಸಿಎಲ್ ನೇರಳೆ ಹಾಗೂ ಹಸಿರು ಮಾರ್ಗದಲ್ಲಿನ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ರೈಲು ಸೇವೆಗಳನ್ನು ರಾತ್ರಿ 11.45 ಗಂಟೆಯವರೆಗೆ ವಿಸ್ತರಣೆ ಮಾಡಿದೆ.
ಕ್ರಿಕೆಟ್ ನೋಡುವವರ ಅನುಕೂಲಕ್ಕಾಗಿ ರಿಟರ್ನ್ ಜರ್ನಿ ಪೇಪರ್ ಟಿಕೆಟ್ಗಳನ್ನು ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಬುಧವಾರ ಮಧ್ಯಾಹ್ನ 2 ಗಂಟೆಯಿಂದ ಮಾರಾಟ ಮಾಡಲಾಗುತ್ತದೆ. ಈ ಟಿಕೆಟ್ಗಳು ರಾತ್ರಿ 8 ಗಂಟೆಯಿಂದ ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣದಿಂದ ಯಾವುದೇ ಇತರ ಮೆಟ್ರೋ ನಿಲ್ದಾಣಕ್ಕೆ ಒಂದು ಪ್ರಯಾಣಕ್ಕೆ ಸೀಮಿತವಾಗಿರುತ್ತವೆ. ಈ ಪೇಪರ್ ಟಿಕೆಟ್ಗೆ ₹50 ನಿಗದಿ ಮಾಡಲಾಗಿದೆ.
ಪಂದ್ಯದ ದಿನದಂದು ಕ್ಯೂಆರ್ ಕೋಡ್ ಟಿಕೆಟ್ಗಳನ್ನು ಖರೀದಿಸಿದರೆ ಇಡೀ ದಿನಕ್ಕೆ ಮಾನ್ಯವಾಗಿರುತ್ತದೆ. ವಾಟ್ಸಾಪ್, ನಮ್ಮ ಮೆಟ್ರೋ ಆಫ್, ಪೇಟಿಎಂ ಮತ್ತು ಕ್ಯೂಆರ್ಕೋಡ್ ಬಳುಸುವಂತೆ ಬಿಎಂಆರ್ ಸಿಎಲ್ ಪ್ರಯಾಣಿಕರಿಗೆ ಮನವಿ ಮಾಡಿದೆ.
-
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications