Traffic Alert: ಬೆಂಗಳೂರು ಹೊರ ವರ್ತುಲ ಸವಾರರೇ ಗಮನಿಸಿ, ರಸ್ತೆ ಸಂಚಾರ ನಿರ್ಬಂಧ
ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮದಿಂದ ಹೊರ ವರ್ತುಲ ರಸ್ತೆ ವ್ಯಾಪ್ತಿಯಲ್ಲಿ ನೀಲಿ ಮಾರ್ಗದ ಕಾಮಗಾರಿ ಬರದಿಂದ ಸಾಗುತ್ತಿದೆ. ಈ ಹಿನ್ನೆಲೆಯಲ್ಲಿ ವರ್ತೂರು ಮುಖ್ಯ ರಸ್ತೆ ಮಾರತ್ತಹಳ್ಳಿ ಸೇತುವೆಯಲ್ಲಿ ಶುಕ್ರವಾರದಿಂದ ಮೂರು ದಿನಗಳ ಕಾಲ ಮೂರು ಗಂಟೆಗಳ ಕಾಲ ವಾಹನಗಳಿಗೆ ತಾತ್ಕಾಲಿಕ ಸಂಚಾರ ನಿರ್ಬಂಧ ವಿಧಿಸಲಾಗಿದೆ ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ. ಇದರಿಂದ ಈ ಭಾಗದಲ್ಲಿ ನಿತ್ಯ ಸಂಚಾರ ಮಾಡುತ್ತಿದ್ದ ಐಟಿ ಉದ್ಯೋಗಿಗಳು ಸೇರಿದಂತೆ ಸಾರ್ವಜನಿಕರಿಗೆ ಸಾಕಷ್ಟು ತೊಂದರೆ ಉಂಟು ಮಾಡಿದೆ.
ಎಚ್ಎಎಲ್ ವಿಮಾನ ನಿಲ್ದಾಣ ಸಂಚಾರ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಇದೇ ಮಾರ್ಚ್ 27 ರಿಂದ ಮಾರ್ಚ್ 29 ರವರೆಗೆ ಬೆಳಗ್ಗೆ 12 ರಿಂದ ಬೆಳಗ್ಗೆ 3 ರವರೆಗೆ ಮೂರು ದಿನಗಳವರೆಗೆ ವಾಹನ ಸಂಚಾರವನ್ನು ಈ ಭಾಗದ ರಸ್ತೆಗಳಲ್ಲಿ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ವಾಹನ ಸವಾರರು ಮಾರತ್ತಹಳ್ಳಿ ಸೇತುವೆ ಮೂಲಕ ಎಚ್ಎಎಲ್ ಮತ್ತು ವರ್ತೂರು/ವೈಟ್ಫೀಲ್ಡ್ ನಡುವೆ ಪ್ರಯಾಣಿಸುವ ಎಲ್ಲಾ ವಾಹನಗಳಿಗೆ ಅವಕಾಶ ಇರುವುದಿಲ್ಲ. ಆದ್ದರಿಂದ ಸಂಚಾರಿ ಪೊಲೀಸರು ನೀಡಿರುವ ಪರ್ಯಾಯ ಮಾರ್ಗಗಳನ್ನು ಗಮನಿಸಿ ಓಡಾಡುವಂತೆ ಕೋರಲಾಗಿದೆ.

ಪರ್ಯಾಯ ಮಾರ್ಗಗಳು
ಎಚ್ಎಎಲ್ನಿಂದ ವರ್ತೂರು/ವೈಟ್ಫೀಲ್ಡ್ ಕಡೆಗೆ ಹೋಗುವ ವಾಹನಗಳು ದೊಡ್ಡನೆಕುಂಡಿ ಜಂಕ್ಷನ್, ಕಾರ್ತಿಕ್ ನಗರ ಜಂಕ್ಷನ್ ಮತ್ತು ಹೊರ ವರ್ತುಲ ರಸ್ತೆ ಮೂಲಕ ಸಾಗಬೇಕು. ಅಲ್ಲಿಂದ ಮುಂದೆ ಕುಂದಲಹಳ್ಳಿ ಹಾಗೂ ಗ್ರಾಫೈಟ್ ರಸ್ತೆ ಮೂಲಕ ಮತ್ತೆ ಮುಖ್ಯ ರಸ್ತೆಗೆ ಸಂಪರ್ಕಿಸಲಾಗುತ್ತದೆ. ವರ್ತೂರು/ವೈಟ್ಫೀಲ್ಡ್ನಿಂದ ಎಚ್ಎಎಲ್ ಕಡೆಗೆ ಹೋಗುವವರು ಕುಂದಲಹಳ್ಳಿ, ಆಲ್ಫೈನ್ ಇಕೋ ರಸ್ತೆ ಮತ್ತು ದೊಡ್ಡನೆಕ್ಕುಂಡಿ ಮೂಲಕ ತಿರುಗಿಸಲಾಗಿದೆ.
ಎಚ್ಎಎಲ್ ಕಡೆಗೆ ಹೋಗುವ ವಾಹನ ಸವಾರರಿಗೆ ವಿಬ್ಗಯಾರ್ ಜಂಕ್ಷನ್, ಬಳಗೆರೆ ಮುಖ್ಯ ರಸ್ತೆ ಮತ್ತು ಕಾಡುಬೀಸನಹಳ್ಳಿ ಜಂಕ್ಷನ್ ಮೂಲಕ ಹೆಚ್ಚುವರಿ ಮಾರ್ಗ ಬದಲಾವಣೆ ಮೂಲಕ ವಾಹನ ಸವಾರರು ಸಾಗಬೇಕೆಂದು ಎಚ್ಎಎಲ್ ವಿಮಾನ ನಿಲ್ದಾಣ ಸಂಚಾರ ಪೊಲೀಸರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಸೋಮವಾರ ಅಥವಾ ಮಂಗಳವಾರದಿಂದ ಎಂದಿನಂತೆ ಮಾರತ್ತಹಳ್ಳಿ, ಕಾಡು ಬೀಸನಹಳ್ಳಿ ವ್ಯಾಪ್ತಿಯಲ್ಲಿ ಸಂಚಾರ ಸುಗಮವಾಗಲಿದೆ ಎಂಬ ಭರವಸೆ ಇದೆ.
ಮುಂದಿನ ವರ್ಷ ORR ಕಿರಿಕಿರಿ ಮುಕ್ತ
ಬೆಂಗಳೂರು ಮೆಟ್ರೋ ರೈಲು ನಿಗಮ ವತಿಯಿಂದ ಸಿಲ್ಕ್ಬೋರ್ಡ್ನಿಂದ ಕೆ.ಆರ್.ಪುರಂವರೆಗೆ ಮೆಟ್ರೋ ಲೈನ್ ಕೆಲಸ ಹಗಲು ರಾತ್ರಿ ನಡೆಯುತ್ತಿದೆ. ಇದರಿಂದ ಹೊರ ವರ್ತುಲ ರಸ್ತೆ ಮುಖೇನ ಸಾಗುವ ವಾಹನ ಸವಾರರಿಗೆ ಆಗಾಗ ತೊಂದರೆ ಆಗುತ್ತಲೇ ಇದೆ. ಇನ್ನೊಂದು ವರ್ಷದವದಲ್ಲಿ ಯೋಜನೆ ಪೂರ್ಣಗೊಳ್ಳಲಿದ್ದು, ಆಗ ಇಂತಹ ಕಿರಿಕಿರಿ ದಟ್ಟಣೆ ಇರುವುದಿಲ್ಲ.
-
IPL ಪ್ರೇಕ್ಷಕರಿಗೆ ಗುಡ್ ನ್ಯೂಸ್: ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ 2026 ಪಂದ್ಯದ ಪ್ರಯುಕ್ತ ನಮ್ಮ ಮೆಟ್ರೋ ಸೇವೆ ವಿಸ್ತರಣೆ -
Viral: ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಪಾದಚಾರಿಗಳೇ ಕಾರಣವೆಂದ ಸಂಸ್ಥಾಪಕ: ಕಿಡಿಕಾರಿದ ನೆಟ್ಟಿಗರು -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು












Click it and Unblock the Notifications