ಮಾನವೀಯತೆ ಮೆರೆದ ದೊಡೇಜಾಗೆ ಅಭಿನಂದನೆ
ಬೆಂಗಳೂರು, ಮೇ 12 : ಅಪಘಾತಕ್ಕೀಡಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಪಾದಚಾರಿಯನ್ನು ತಾವೇ ಸ್ವತಃ ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮತ್ತು ಸಮಯಸ್ಫೂರ್ತಿ ಮೆರೆದ ಬೆಂಗಳೂರಿನ ನಿವಾಸಿ ಸಂದೀಪ್ ದೊಡೇಜಾ ಅವರನ್ನು ಬೆಂಗಳೂರು ಸಂಚಾರಿ ಪೊಲೀಸರು ಶ್ಲಾಷಿಸಿದ್ದಾರೆ. ಸಂದೀಪ್ ಅವರನ್ನು ಗುರುತಿಸಿ ಶ್ಲಾಘಿಸಿದ ಸಂಚಾರಿ ಪೊಲೀಸರಿಗೂ ಅಭಿನಂದನೆ.
ಮಾನವ ಜೀವವನ್ನು ಕಾಪಾಡುವ ಉದ್ದೇಶದಿಂದ ರಾತ್ರಿಯಾಗಿದ್ದನ್ನೂ ಲೆಕ್ಕಿಸದೆ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿದ ಸಂದೀಪ್ ಅವರ ಪ್ರಯತ್ನವನ್ನು ಶ್ಲಾಘಿಸಿ ಸಿಟಿ ಮಾರ್ಕೆಟ್ ಸಂಚಾರಿ ಪೊಲೀಸ್ ಅಧಿಕಾರಿ ಅವರು ಸಂದೀಪ್ ದೊಡೇಜಾ ಅವರ ನಿವಾಸಕ್ಕೆ ತೆರಳಿ ಹೂಗುಚ್ಛ ನೀಡಿ ಅಭಿನಂದಿಸಿದರು.

ಆಗಿದ್ದೇನು? : ಸಿಟಿ ಮಾರುಕಟ್ಟೆ ಸಂಚಾರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ವಿಐಎಸ್ಎಲ್ ಕಟ್ಟಡದ ಬಳಿ ಮೇ 7ರಂದು ರಾತ್ರಿ 10.45ರ ಸುಮಾರಿಗೆ ರಸ್ತೆ ದಾಟುತ್ತಿದ್ದ ಪಾದಚಾರಿಯನ್ನು ಕಪ್ಪು ಬಣ್ಣದ ಅಪರಿಚಿತ ಕಾರು ಡಿಕ್ಕಿ ಹೊಡೆದಿದೆ. ಅಡ್ಡಾದಿಡ್ಡಿಯಾಗಿ ಅಜಾರೂಕತೆಯಿಂದ ಓಡಿಸುತ್ತಿದ್ದ ಕಾರಿನ ಚಾಲಕ ವಾಹನವನ್ನು ನಿಲ್ಲಿಸದೆ ಅಲ್ಲಿಂದ ಪರಾರಿಯಾಗಿದ್ದಾನೆ.
ಆ ಕಪ್ಪು ಕಾರಿನ ಹಿಂದೆ ಬರುತ್ತಿದ್ದ ಸಾಫ್ಟ್ ವೇರ್ ಇಂಜಿನಿಯರ್ ಸಂದೀಪ್ ದೊಡೇಜಾ ಅವರು ತಕ್ಷಣ ಕಾರನ್ನು ನಿಲ್ಲಿಸಿದ್ದಾರೆ. ತಲೆಗೆ ತೀವ್ರ ಪೆಟ್ಟು ತಿಂದು ಒದ್ದಾಡುತ್ತಿದ್ದ ಪಾದಚಾರಿಯನ್ನು, ಬೇರೆ ವಿಚಾರವನ್ನು ಕೂಡ ಮಾಡದೆ ಸಂದೀಪ್ ಮತ್ತು ಅವರ ಪತ್ನಿ ತಮ್ಮ ಕಾರಿನಲ್ಲಿ ಕೂಡಿಸಿಕೊಂಡು ಹತ್ತಿರದಲ್ಲಿದ್ದ ಎಸ್ಆರ್ ನಗರದಲ್ಲಿರುವ ಸಿಂಧಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. [ಮಾನವೀಯತೆ ಮೆರೆದ ಆಟೋ ಚಾಲಕರು]
ಗಾಯಾಳುವಿನ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಸಿಂಧಿ ಆಸ್ಪತ್ರೆಯ ಸಲಹೆಯಂತೆ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಿದರು. ಆದರೆ, ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಗಾಯಾಳು ಮೇ 8ರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಅಸುನೀಗಿದ್ದಾರೆ. ಮೋಟಾರ್ ವೆಹಿಕಲ್ ಆಕ್ಟ್ ಅಡಿಯಲ್ಲಿ ಕೇಸನ್ನು ದಾಖಲಿಸಿಕೊಳ್ಳಲಾಗಿದ್ದು, ಹಿಟ್ ಅಂಡ್ ರನ್ ಮಾಡಿದ ಚಾಲಕನ ಹುಡಾಕಾಟದಲ್ಲಿದ್ದಾರೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications