ಸಂಚಾರ ಸೂಚನಾ ಫಲಕಗಳಿಗೆ ಅಡ್ಡವಾಗಿದ್ದ ಫ್ಲೆಕ್ಸ್ಗಳ ತೆರವು
ಬೆಂಗಳೂರು, ಜು.2: ರಾಜಧಾನಿ ಬೆಂಗಳೂರಲ್ಲಿ ಫ್ಲೆಕ್ಸ್ಗಳ ಹಾವಳಿ ಮಿತಿ ಮೀರಿದೆ, ಅದರಲ್ಲೂ ಟ್ರಾಫಿಕ್ ಸೂಚನಾ ಫಲಕಗಳಿಗೆ ಅಡ್ಡವಾಗಿ ಫ್ಲೆಕ್ಸ್ ಅಳವಡಿಕೆಯಿಂದ ಪ್ರಯಾಣಿಕರು ಕಿರಿಕಿರಿ ಅನುಭವಿಸುತ್ತಿದ್ದರು.
ಪ್ರಯಾಣಿಕರಿಂದ ಈ ಕುರಿತು ಹಲವು ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸಂಚಾರ ಪೊಲೀಸ್ ಈ ಫ್ಲೆಕ್ಸ್ಗಳ ತೆರವಿಗೆ ಮುಂದಾಗಿದ್ದಾರೆ. ಮೊದಲ ಹಂತವಾಗಿ ಕಬ್ಬನ್ ಪಾರ್ಕ್ ವ್ಯಾಪ್ತಿಯಲ್ಲಿ ಸಂಚಾರ ಸೂಚನಾ ಫಲಕಗಳಿಗೆ ಅಡ್ಡವಾಗಿದ್ದ ಫ್ಲೆಕ್ಸ್ಗಳನ್ನು ಪೊಲೀಸರು ತೆರವುಗೊಳಿಸಿದ್ದಾರೆ.
ಸೂಚನಾ ಫಲಕಗಳಿಗೆ ಅಡ್ಡವಾಗಿರುವ ಫ್ಲೆಕ್ಸ್ಗಳಿಂದ ಅಪಘಾತ ಪ್ರಮಾಣವೂ ಕೂಡ ಹಚ್ಚಾಗಿತ್ತು, ಇದೆಲ್ಲವನ್ನು ಅರಿತ ಸಂಚಾರ ಪೊಲೀಸರು ಫ್ಲೆಕ್ಸ್ಗಳನ್ನು ತೆರವುಗೊಳಿಸಿದ್ದಾರೆ. ಈ ಹಿಂದೆ ಬಿಬಿಎಂಪಿಯು ಅನಧಿಕೃತ ಫ್ಲೆಕ್ಸ್ಗಳ ತೆರವಿಗೆ ಗಡುವುದು ನೀಡಿತ್ತು, ಆದರೆ ಯಾವುದೇ ಪ್ರಯೋಜನವಾದಂತೆ ಕಾಣುತ್ತಿಲ್ಲ, ಶಾಂತಿನಗರ ಶಾಸಕ ಎನ್ ಎ ಹ್ಯಾರಿಸ್ಗೆ ಶುಭಕೋರುವ ಫ್ಲೆಕ್ಸ್ ಒಂದು ಟ್ರಾಫಿಕ್ ಸಿಗ್ನ್ಲ್ಗೆ ಅಡ್ಡವಾಗಿ ಹಾಕಲಾಗಿತ್ತು.

ಅದೇ ಕ್ಷೇತ್ರದ ಬಿಜೆಪಿಯ ಶ್ರೀಧರ್ ರೆಡ್ಡಿ ಅವರ ಫ್ಲೆಕ್ಸ್ಗಳು ಕೂಡ ಸಿಗಲ್ ಎದುರು ರಾರಾಜಿಸುತ್ತಿತ್ತು. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತವಾಗಿತ್ತು.

ಇದೀಗ ಸಂಚಾರ ಪೊಲೀಸರು ಎಚ್ಚೆತ್ತುಕೊಂಡಿದ್ದು, ಸಂಚಾರ ಸೂಚನಾ ಫಲಕಗಳಿಗೆ ಅಡ್ಡಲಾಗಿ ಹಾಕಿರುವ ಫ್ಲೆಕ್ಸ್ಗಳ ತೆರವಿಗೆ ಮುಂದಾಗಿದ್ದಾರೆ, ಇದರಿಂದ ಪ್ರಯಾಣಿಕರು ಸುಗಮವಾಗಿ ಸಂಚರಿಸಬಹುದಾಗಿದೆ, ಇದರಿಂದ ಅಪಘಾತ ಪ್ರಮಾಣವೂ ಕೂಡ ತಗ್ಗಲಿದೆ ಎನ್ನುವುದು ಪೊಲೀಸರ ವಿಶ್ವಾಸವಾಗಿದೆ. ನಗರದ ಎಲ್ಲಾ ಭಾಗಗಳಲ್ಲೂ ಇಂತಹ ಫ್ಲೆಕ್ಸ್ಗಳನ್ನು ತೆರವುಗೊಳಿಸುವ ಅಗತ್ಯವಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications