ಸಂಚಾರ ಸೂಚನಾ ಫಲಕಗಳಿಗೆ ಅಡ್ಡವಾಗಿದ್ದ ಫ್ಲೆಕ್ಸ್ಗಳ ತೆರವು
ಬೆಂಗಳೂರು, ಜು.2: ರಾಜಧಾನಿ ಬೆಂಗಳೂರಲ್ಲಿ ಫ್ಲೆಕ್ಸ್ಗಳ ಹಾವಳಿ ಮಿತಿ ಮೀರಿದೆ, ಅದರಲ್ಲೂ ಟ್ರಾಫಿಕ್ ಸೂಚನಾ ಫಲಕಗಳಿಗೆ ಅಡ್ಡವಾಗಿ ಫ್ಲೆಕ್ಸ್ ಅಳವಡಿಕೆಯಿಂದ ಪ್ರಯಾಣಿಕರು ಕಿರಿಕಿರಿ ಅನುಭವಿಸುತ್ತಿದ್ದರು.
ಪ್ರಯಾಣಿಕರಿಂದ ಈ ಕುರಿತು ಹಲವು ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸಂಚಾರ ಪೊಲೀಸ್ ಈ ಫ್ಲೆಕ್ಸ್ಗಳ ತೆರವಿಗೆ ಮುಂದಾಗಿದ್ದಾರೆ. ಮೊದಲ ಹಂತವಾಗಿ ಕಬ್ಬನ್ ಪಾರ್ಕ್ ವ್ಯಾಪ್ತಿಯಲ್ಲಿ ಸಂಚಾರ ಸೂಚನಾ ಫಲಕಗಳಿಗೆ ಅಡ್ಡವಾಗಿದ್ದ ಫ್ಲೆಕ್ಸ್ಗಳನ್ನು ಪೊಲೀಸರು ತೆರವುಗೊಳಿಸಿದ್ದಾರೆ.
ಸೂಚನಾ ಫಲಕಗಳಿಗೆ ಅಡ್ಡವಾಗಿರುವ ಫ್ಲೆಕ್ಸ್ಗಳಿಂದ ಅಪಘಾತ ಪ್ರಮಾಣವೂ ಕೂಡ ಹಚ್ಚಾಗಿತ್ತು, ಇದೆಲ್ಲವನ್ನು ಅರಿತ ಸಂಚಾರ ಪೊಲೀಸರು ಫ್ಲೆಕ್ಸ್ಗಳನ್ನು ತೆರವುಗೊಳಿಸಿದ್ದಾರೆ. ಈ ಹಿಂದೆ ಬಿಬಿಎಂಪಿಯು ಅನಧಿಕೃತ ಫ್ಲೆಕ್ಸ್ಗಳ ತೆರವಿಗೆ ಗಡುವುದು ನೀಡಿತ್ತು, ಆದರೆ ಯಾವುದೇ ಪ್ರಯೋಜನವಾದಂತೆ ಕಾಣುತ್ತಿಲ್ಲ, ಶಾಂತಿನಗರ ಶಾಸಕ ಎನ್ ಎ ಹ್ಯಾರಿಸ್ಗೆ ಶುಭಕೋರುವ ಫ್ಲೆಕ್ಸ್ ಒಂದು ಟ್ರಾಫಿಕ್ ಸಿಗ್ನ್ಲ್ಗೆ ಅಡ್ಡವಾಗಿ ಹಾಕಲಾಗಿತ್ತು.

ಅದೇ ಕ್ಷೇತ್ರದ ಬಿಜೆಪಿಯ ಶ್ರೀಧರ್ ರೆಡ್ಡಿ ಅವರ ಫ್ಲೆಕ್ಸ್ಗಳು ಕೂಡ ಸಿಗಲ್ ಎದುರು ರಾರಾಜಿಸುತ್ತಿತ್ತು. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತವಾಗಿತ್ತು.

ಇದೀಗ ಸಂಚಾರ ಪೊಲೀಸರು ಎಚ್ಚೆತ್ತುಕೊಂಡಿದ್ದು, ಸಂಚಾರ ಸೂಚನಾ ಫಲಕಗಳಿಗೆ ಅಡ್ಡಲಾಗಿ ಹಾಕಿರುವ ಫ್ಲೆಕ್ಸ್ಗಳ ತೆರವಿಗೆ ಮುಂದಾಗಿದ್ದಾರೆ, ಇದರಿಂದ ಪ್ರಯಾಣಿಕರು ಸುಗಮವಾಗಿ ಸಂಚರಿಸಬಹುದಾಗಿದೆ, ಇದರಿಂದ ಅಪಘಾತ ಪ್ರಮಾಣವೂ ಕೂಡ ತಗ್ಗಲಿದೆ ಎನ್ನುವುದು ಪೊಲೀಸರ ವಿಶ್ವಾಸವಾಗಿದೆ. ನಗರದ ಎಲ್ಲಾ ಭಾಗಗಳಲ್ಲೂ ಇಂತಹ ಫ್ಲೆಕ್ಸ್ಗಳನ್ನು ತೆರವುಗೊಳಿಸುವ ಅಗತ್ಯವಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ











Click it and Unblock the Notifications