Bengaluru Traffic: ಹೆಬ್ಬಾಳ ಕಡೆ ಹೋಗುವ ಪ್ರಯಾಣಿಕರೆ ಇತ್ತ ಗಮನಿಸಿ
ಬೆಂಗಳೂರು, ಮೇ. 09 : ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್ಸಿಎಲ್) ಹೆಬ್ಬಾಳ - ಕೊಡಿಗೇಹಳ್ಳಿ ಜಂಕ್ಷನ್ನಲ್ಲಿ ಮೆಟ್ರೋ ಸಂಬಂಧಿತ ಕಾಮಗಾರಿಗಳನ್ನು ಆರಂಭಿಸಲಿದೆ. ಈ ಕಾರಣದಿಂದ ಹೆಬ್ಬಾಳ ವೃತ್ತದ ಸುತ್ತಮುತ್ತ ಸಂಚರಿಸುವ ಪ್ರಯಾಣಿಕರು ಮುಂಜಾಗ್ರತೆ ವಹಿಸಬೇಕಿದೆ.
ಪ್ರಮುಖ ರಸ್ತೆಯಾದ ಹೆಬ್ಬಾಳ - ಕೊಡಿಗೇಹಳ್ಳಿ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರಿಗೆ ಬೆಂಗಳೂರು ಸಂಚಾರ ಪೊಲೀಸರು ಸಲಹೆಯನ್ನು ನೀಡಿದ್ದಾರೆ. ಸಂಚಾರ ದಟ್ಟಣೆಯನ್ನು ತಪ್ಪಿಸಲು ಪ್ರಯಾಣಿಕರು ಪರ್ಯಾಯ ಮಾರ್ಗಗಳನ್ನು ತೆಗೆದುಕೊಳ್ಳಬೇಕು ಎಂದು ಪೊಳಿಸರು ಮನವಿ ಮಾಡಿದ್ದಾರೆ.

ಬೆಂಗಳೂರು ಟ್ರಾಫಿಕ್ ಪೊಲೀಸರು ಈ ಬಗ್ಗೆ ಪ್ರಕಟಣೆ ಹೊರಡಿಸಿದ್ದಾರೆ. "ಬೆಂಗಳೂರು ಮೆಟ್ರೊ ರೈಲು ಕಾರ್ಪೊರೇಷನ್ ಲಿಮಿಟೆಡ್ ಮೇ 10 ರಿಂದ ಕೊಡಿಗೇಹಳ್ಳಿ - ಹೆಬ್ಬಾಳ ವೃತ್ತದ ಮೆಟ್ರೋ ಪಿಲ್ಲರ್ಗಳಿಗೆ ಟ್ರ್ಯಾಕ್ಗಳನ್ನು ಜೋಡಿಸುತ್ತಿದೆ. ಕೊಡಿಗೇಹಳ್ಳಿ ಜಂಕ್ಷನ್ನಿಂದ ಎಸ್ಟೀಮ್ ಮಾಲ್ಗೆ ಸರ್ವಿಸ್ ರಸ್ತೆಯಲ್ಲಿ ಎಲ್ಲಾ ವಾಹನಗಳ ಸಂಚಾರವನ್ನು ರಾತ್ರಿ 11.00 ರಿಂದ ಬೆಳಗ್ಗೆ 05.00 ರವರೆಗೆ ನಿಷೇಧಿಸಲಾಗಿದೆ" ಎಂದು ಸುತ್ತೋಲೆಯಲ್ಲಿ ತಿಳಿಸಿದೆ.
ಎಸ್ಟೀಮ್ ಮಾಲ್ಗೆ ಹೋಗಲು ಪ್ರಯಾಣಿಕರು ರನ್ನ ರಸ್ತೆಯ ಮೂಲಕ ಹೋಗಬೇಕು. ರಸ್ತೆ ಬಳಕೆದಾರರಿಗೆ ದಾಸರಹಳ್ಳಿ ಮುಖ್ಯರಸ್ತೆಯಿಂದ ಪಂಪಾ ವಿಸ್ತರಣೆ ರಸ್ತೆಗೆ ತಲುಪಲು, ರನ್ನ ರಸ್ತೆ ಮೂಲಕ ಸಾಗಿ, ಕೆಂಪಾಪುರ ಮುಖ್ಯರಸ್ತೆಯ ಮೂಲಕ ಎಸ್ಟೀಮ್ ಮಾಲ್ ತಲುಪಲು ಸೂಚಿಸಲಾಗಿದೆ. ಎಲ್ಲಾ ಎಚ್ಜಿವಿ ವಾಹನಗಳು ವಿದ್ಯಾಶಿಲ್ಪ ಜಂಕ್ಷನ್ ಬಳಸಬೇಕು ಎಂದು ಪ್ರಕಟಣೆಯಲ್ಲಿ ಸೇರಿಸಲಾಗಿದೆ.
ನಾಗವಾರ ಫ್ಲೈಓವರ್ ಅಪ್ ರಾಂಪ್ ಬಳಿಯ ಸರ್ವೀಸ್ ರಸ್ತೆಯ ಪ್ರವೇಶವನ್ನು ಶುಕ್ರವಾರದಿಂದ ಮುಚ್ಚಲಾಗುವುದು ಎಂದು ಬೆಂಗಳೂರು ಸಂಚಾರ ಪೊಲೀಸರು ಘೋಷಿಸಿದ್ದಾರೆ. ಇದು ಔಟರ್ ರಿಂಗ್ ರೋಡ್ನಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುತ್ತದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹೆಬ್ಬಾಳ ಮೇಲ್ಸೇತುವೆಗಾಗಿ ಎರಡು ಹೊಸ ಲೇನ್ಗಳನ್ನು ನಿರ್ಮಿಸಲು ಪ್ರಾರಂಭಿಸಿದೆ. ಹೀಗಾಗಿ ಕಳೆದ ತಿಂಗಳಿನಿಂದ ಕೆಲವು ತಿರುವುಗಳು ಈಗಾಗಲೇ ಜಾರಿಯಲ್ಲಿವೆ. ಇಲ್ಲಿನ ಕೆ.ಆರ್. ಹೆಬ್ಬಾಳ ಮೇಲ್ಸೇತುವೆ ಬಳಿಯಿರುವ ಪುರಂ ರ್ಯಾಂಪ್ನಲ್ಲಿ ಹೊಸ ಲೇನ್ಗಳನ್ನು ನಿರ್ಮಿಸಲು ಕಿತ್ತುಹಾಕಲಾಗಿದೆ.
-
ಬೆಂಗಳೂರು: ನಾಯಿಗಳು ಬೊಗಳುತ್ತಿವೆ, ನಿದ್ರೆ ಬರುತ್ತಿಲ್ಲವೆಂದು 112ಕ್ಕೆ ಕರೆ ಮಾಡಿದ ಮಹಿಳೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ












Click it and Unblock the Notifications