ಪೊಲೀಸರ ಮೇಲೆ ಕಾರು ಹತ್ತಿಸಲು ಹೋದರೇ ಲಿಂಬಾವಳಿ ಪುತ್ರಿ?
ಬೆಂಗಳೂರು, ಜೂನ್ 9: ಅತಿ ವೇಗದಿಂದ ಕಾರು ಚಲಾಯಿಸಿ, ಪೊಲೀಸರ ಜೊತೆ ವಾಗ್ವಾದ, ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಬಿಜೆಪಿಯ ಹಿರಿಯ ಶಾಸಕ ಅರವಿಂದ ಲಿಂಬಾವಳಿ ಪುತ್ರಿಗೆ ದಂಡ ವಿಧಿಸಿ ಸಂಚಾರಿ ಪೊಲೀಸರು ಹಾಗೆಯೇ ಬಿಟ್ಟು ಕಳುಹಿಸಿದ್ದಾರೆ. ಈ ಬಗ್ಗೆ ಖುದ್ದು ಲಿಂಬಾವಳಿ ಕ್ಷಮೆಯಾಚಿಸಿದ್ದಾರೆ.
ರಾಜಭವನದ ವ್ಯಾಪ್ತಿಯಲ್ಲಿ ಎಂದಿನಂತೆ ಟ್ರಾಫಿಕ್ ಪೊಲೀಸರು ತಪಾಸಣೆಯನ್ನು ನಡೆಸುತ್ತಿದ್ದರು. ಆ ವೇಳೆ, ಅತಿವೇಗದಿಂದ ಲಿಂಬಾವಳಿಯವರ ಪುತ್ರಿ ಕಾರು ಚಲಾಯಿಸಿಕೊಂಡು ಬಂದಿದ್ದಾರೆ. ಪೊಲೀಸರು ತಡೆಯಲು ಹೋದಾಗ, ಪೊಲೀಸರ ಮೇಲೆಯೇ ಗಾಡಿ ಹತ್ತಿಸುವಂತೆ ಕಾರು ಚಲಾಯಿಸುತ್ತಿದ್ದ ಇವರನ್ನು ಟ್ರಾಫಿಕ್ ಪೊಲೀಸರು ಹಿಂಬಾಲಿಸಿಕೊಂಡು ಹೋಗಿದ್ದಾರೆ.
ಪೊಲೀಸರು ಬರುತ್ತಿರುವುದನ್ನು ಅರಿತ ಲಿಂಬಾವಳಿ ಪುತ್ರಿ ರಾಜಭವನ ರಸ್ತೆಯಲ್ಲಿರುವ ಕ್ಯಾಪಿಟಲ್ ಹೊಟೇಲ್ ಒಳಗೆ ಹೋಗಿದ್ದಾರೆ. ಹೊಟೇಲ್ ಗೇಟಿನಲ್ಲೇ ಕಾಯುತ್ತಿದ್ದ ಪೊಲೀಸರು ಅವರು ಹೊರಬರುತ್ತಿದ್ದಂತೆಯೇ ತಡೆದಿದ್ದಾರೆ. ನಾನು ಅರವಿಂದ ಲಿಂಬಾವಳಿ ಮಗಳು ಎಂದು ದರ್ಪ ತೋರಿದಾಗ, ಪೊಲೀಸರು ದಂಡ ಪಾವತಿಸಿಕೊಂಡು ಬಿಟ್ಟು ಕಳುಹಿಸಿದ್ದಾರೆ. ಈ ಬಗ್ಗೆ ಪರಿಶೀಲನೆ ಮಾಡಿ, ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಹಿರಿಯ ಅಧಿಕಾರಿಗಳು ಸ್ಪಷ್ಟನೆಯನ್ನು ನೀಡಿದ್ದಾರೆ.

ಅತಿವೇಗದ ಚಾಲನೆ ಮಾಡಿಕೊಂಡು ಬಂದಿರುವುದು ಮತ್ತು ಸಂಚಾರೀ ಪೊಲೀಸರಿಗೆ ಆವಾಜ್ ಹಾಕಿದ ಅರವಿಂದ ಲಿಂಬಾವಳಿ ಪುತ್ರಿಗೆ ದಂಡದ ಬಿಸಿ ಮುಟ್ಟಿಸಿದ ಪೊಲೀಸರು ಹತ್ತು ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ. ದಂಡ ಕಟ್ಟಿದ ಬಳಿಕ ಪೊಲೀಸರು ಕಾರನ್ನು ಬಿಟ್ಟು ಕಳುಹಿಸಿದ್ದು, ಯಾವುದೇ ಪ್ರಕರಣ ದಾಖಲಿಸಿಕೊಳ್ಳದೆ ಕಳುಹಿಸಿದ್ದಾರೆ.
ಈ ಬಗ್ಗೆ ಕ್ಷಮೆಯಾಚಿಸುತ್ತಾ ಲಿಂಬಾವಳಿ, "ನನ್ನ ಮಗಳು ತನ್ನ ಸ್ನೇಹಿತನ ಜೊತೆ ಹೋಗುತ್ತಿದ್ದಾಗ, ಕ್ಯಾಪಿಟಲ್ ಹೋಟೆಲ್ ಬಳಿ ಪೋಲಿಸರು ತಡೆದಿದ್ದಾರೆ. ಮಾಧ್ಯಮಗಳಿಗೆ ಅವಮಾನ ಮಾಡಿದ್ದಾರೆ ಅಂತ ಆರೋಪ ಮಾಡಲಾಗುತ್ತಿದೆ. ಆದರೆ, ಅವಳು ಸರ್ ಎಂದು ಹೇಳುತ್ತಿದ್ದಳು. ಮಾಧ್ಯಮಗಳಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ"ಎಂದು ಅರವಿಂದ್ ಲಿಂಬಾವಳಿ ಹೇಳಿದ್ದಾರೆ.

"ನಮ್ಮ ಮನೆತನದ ಇತಿಹಾಸ ಹಾಗೇನೂ ಇಲ್ಲ, ಮಗಳ ಫ್ರೆಂಡ್ ತರುಣ್ ಓವರ್ ಸ್ಪೀಡ್ ಬಂದ ಎಂದು ಈಗಾಗಲೇ ಫೈನ್ ಹಾಕಿದ್ದಾರೆ. ತಪ್ಪಾಗಿದ್ದರೆ ಯಾರಿಗಾದರೂ ಶಿಕ್ಷೆ ಆಗಬೇಕು"ಎಂದು ಅರವಿಂದ್ ಲಿಂಬಾವಳಿ ನಡೆದ ಘಟನೆಗೆ ಕ್ಷಮೆಯಾಚಿಸಿದ್ದಾರೆ.
Recommended Video
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications