ಬೆಂಗಳೂರು: ಅತ್ಯಾಧುನಿಕ ಕ್ಯಾಮೆರಾಗಳಲ್ಲಿ ಪತ್ತೆಯಾಗುತ್ತಿವೆ ದಿನಕ್ಕೆ 14,000 ಸಂಚಾರ ನಿಯಮ ಉಲ್ಲಂಘನೆ ಪ್ರಕರಣ!
ಬೆಂಗಳೂರು, ಡಿ. 23: ಸಿಲಿಕಾನ್ ಸಿಟಿಯಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಇದರಿಂದ ಬಹಳಷ್ಟು ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಈ ಕ್ಯಾಮೆರಾಗಳನ್ನು ಬಳಸಿಕೊಂಡು ಬೆಂಗಳೂರು ಸಂಚಾರ ಪೊಲೀಸರು ಪ್ರತಿದಿನ ಸರಿಸುಮಾರು 14,000 ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮತ್ತು ಟ್ರಾಫಿಕ್ ವಿಶೇಷ ಪೊಲೀಸ್ ಆಯುಕ್ತ ಎಂಎ ಸಲೀಂ ಮಾಹಿತಿ ನೀಡಿದ್ದಾರೆ.
ಈ ಡಿಸೆಂಬರ್ 20 ರಂದು ಈ ಆರ್ಟಿಫಿಶಿಯಲ್ ಇಂಟೆಲಿಜೆನ್ಸ ಕ್ಯಾಮೆರಾ ಸುಮಾರು 30,000 ಪ್ರಕರಣಗಳನ್ನು ದಾಖಲಿಸಿದೆ ಎಂದು ಹೇಳಿದ್ದಾರೆ.
ಸಂಚಾರ ಪೊಲೀಸರು ನಗರದಲ್ಲಿ 50 ಜಂಕ್ಷನ್ಗಳಲ್ಲಿ 250 ಎಐ ಅಳವಡಿಸಲಾದ ಎಎನ್ಪಿಆರ್ ಕ್ಯಾಮೆರಾಗಳು ಮತ್ತು ಎಂಟು ಕೆಂಪು ದೀಪ ಉಲ್ಲಂಘನೆ ಕ್ಯಾಮೆರಾಗಳನ್ನು ಅಳವಡಿಸಿದ್ದರು.

"ನಮ್ಮ ಗಮನ ತಂತ್ರಜ್ಞಾನದ ಮೇಲಿದೆ. ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಈ ಪ್ರಕರಣಗಳಲ್ಲಿ ನೇರವಾಗಿ ಭಾಗಿಯಾಗದಂತೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ ಸಿಸಿಟಿವಿ ಕ್ಯಾಮೆರಾಗಳನ್ನು ಬಳಸಿಕೊಂಡು ಪ್ರಕರಣ ದಾಖಲು ಮಾಡಬೇಕು ಎಂದು ನಾವು ಬಯಸುತ್ತೇವೆ. ಇದು ಪ್ರಕರಣಗಳ ದಾಖಲಾಗುವಿಕೆಯಲ್ಲಿ ಸಾಕಷ್ಟು ಪಾರದರ್ಶಕತೆಯನ್ನು ತಂದಿದೆ. ನಾವು ಪ್ರತಿದಿನ ಸರಾಸರಿ 13,000 ರಿಂದ 14,000 ಪ್ರಕರಣಗಳು ದಾಖಲಾಗುತ್ತುವೆ ಎಂದು ಸಲೀಂ ಹೇಳಿದ್ದಾರೆ.
ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಮ್ (ITMS)ನ ಈ ಕ್ಯಾಮೆರಾಗಳು ಏಳು ವಿಧದ ಸಂಚಾರ ಉಲ್ಲಂಘನೆ ಪ್ರಕರಣಗಳನ್ನು ಪತ್ತೆ ಮಾಡುತ್ತವೆ. ಅವುಗಳೆಂದರೆ ಅತಿವೇಗ, ರೆಡ್ ಲೈಟ್ ಉಲ್ಲಂಘನೆ, ಸ್ಟಾಪ್ ಲೇನ್ ಉಲ್ಲಂಘನೆ, ಹೆಲ್ಮೆಟ್ ಧರಿಸದೆ ನಿಯಮ ಉಲ್ಲಂಘನೆ, ತ್ರಿಬಲ್ ರೈಡಿಂಗ್ ಮಾಡುವುದು, ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ ಮತ್ತು ಸೀಟ್ ಬೆಲ್ಟ್ ಇಲ್ಲದೆ ವಾಹನ ಚಲಾಯಿಸುವುದು ಸೇರಿವೆ.

"ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸರು ಇದ್ದಾಗ, ಜನರು ಸಂಚಾರ ನಿಯಮಗಳನ್ನು ಉಲ್ಲಂಘಿಸುವುದಿಲ್ಲ. ಆದರೆ ಟ್ರಾಫಿಕ್ ಅನ್ನು ಮೇಲ್ವಿಚಾರಣೆ ಮಾಡಲು ಯಾರೂ ಇಲ್ಲದಿದ್ದಾಗ, ಜನರು ಸಿಗ್ನಲ್ ಜಂಪ್ ಮಾಡುತ್ತಾರೆ. ಆದರೆ ಈಗ ಅವುಗಳೆಲ್ಲಾ ಕ್ಯಾಮೆರಾಗಳಲ್ಲಿ ನೋಂದಣಿಯಾಗುತ್ತಿವೆ. ಸಂಚಾರ ನಿಯಮಗಳ ಉಲ್ಲಂಘನೆಯನ್ನು ಕ್ಯಾಮೆರಾ ಸೆರೆಹಿಡಿದ ನಂತರ, ಜನರ ಮನೆಗಳಿಗೆ ನೋಟಿಸ್ ಕಳುಹಿಸಲಾಗುತ್ತದೆ" ಎಂದು ಮಾಹಿತಿ ನೀಡಿದ್ದಾರೆ.
(ಮಾಹಿತಿ ಕೃಪೆ- ಬೆಂಗಳೂರು ಮಿರರ್)
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ












Click it and Unblock the Notifications