Kadlekai Parishe: ಕಡ್ಲೆಕಾಯಿ ಪರಿಷೆ ದಿನ ಬಸವನಗುಡಿ ಸುತ್ತಮುತ್ತ ಸಂಚಾರ ನಿಷೇಧ, ಪಾರ್ಕಿಂಗ್ ವಿವರ
ಪ್ರತಿ ವರ್ಷ ನಡೆಯುವ ಬೆಂಗಳೂರಿನ ಪ್ರಸಿದ್ಧ ಬಸವನಗುಡಿ ಕಡ್ಲೆಕಾಯಿ ಪರಿಷೆ ಈ ಬಾರಿ ಡಿಸೆಂಬರ್ 8-9 ರಂದು ನಡೆಯಲಿದೆ. ವಾರಾಂತ್ಯದಲ್ಲಿ ನಡೆಯಲಿರುವ ಈ ಕಡಲೆಕಾಯಿ ಪರಿಷೆಯಲ್ಲಿ ಲಕ್ಷಾಂತರ ಮಂದಿ ಭಾಗವಹಿಸುವ ನಿರೀಕ್ಷೆ ಇದ್ದು ಮುಂಜಾಗ್ರತಾ ಕ್ರಮವಾಗಿ ಟ್ರಾಫಿಕ್ ಪೊಲೀಸರು ಸಂಚಾರ ದಟ್ಟಣೆ ತಗ್ಗಿಸಲು ಕ್ರಮ ತೆಗೆದುಕೊಂಡಿದ್ದಾರೆ.
ಬೆಂಗಳೂರಿ ದಕ್ಷಿಣ ಭಾಗದ ಬಸವನಗುಡಿಯ ಬುಲ್ ಟೆಂಪಲ್ ರಸ್ತೆಯಲ್ಲಿ ನಡೆಯುವ ಕಡ್ಲೆಕಾಯಿ ಪರಿಷೆಯಲ್ಲಿ ಸಾವಿರಾರು ಪ್ರವಾಸಿಗರಿಗೆ ಸ್ಥಳಾವಕಾಶ ಕಲ್ಪಿಸಲು ಪೊಲೀಸರು ಸಂಚಾರಿ ಸೂಚನೆ ನೀಡಿದ್ದಾರೆ.

ಹಲವು ರಸ್ತೆಗಳಲ್ಲಿ ಸಂಚಾರವನ್ನು ನಿಷೇಧಿಸಲಾಗಿದ್ದು, ವಾಹನಗಳ ಪಾರ್ಕಿಂಗ್ಗೆ ಕೂಡ ಸ್ಥಳ ನಿಗದಿ ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ಸಂಚಾರಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಸಂಚಾರ ಸಲಹೆ
ಲಾಲ್ಬಾಗ್ ಪಶ್ಚಿಮ ದ್ವಾರದಿಂದ ವಾಣಿ ವಿಲಾಸ ರಸ್ತೆ, ಚಾಮರಾಜಪೇಟೆ ಮತ್ತು ಗಾಂಧಿಬಜಾರ್ ಮುಖ್ಯರಸ್ತೆ ಮೂಲಕ ಹನುಮಂತನಗರ ಕಡೆಗೆ ಹೋಗುವ ವಾಹನಗಳು ರಾಮಕೃಷ್ಣ ಆಶ್ರಮ ವೃತ್ತದಲ್ಲಿ ಬಲ ತಿರುವು ಪಡೆದು ಹಯವದನ ರಾವ್ ರಸ್ತೆ, ಗವಿಪುರಂ 3ನೇ ಕ್ರಾಸ್ ಮೂಲಕ ಹನುಮಂತನಗರ ತಲುಪಬೇಕು.
ಆರ್ವಿ ಶಿಕ್ಷಕರ ಕಾಲೇಜು ಜಂಕ್ಷನ್ನಿಂದ ಟ್ರಿನಿಟಿ ಆಸ್ಪತ್ರೆ ರಸ್ತೆ ಕಡೆಗೆ ಹೋಗುವವರು ಬ್ಯೂಗಲ್ ರಾಕ್ ರಸ್ತೆ ಮೂಲಕ ಹನುಮಂತನಗರದ ಕಡೆಗೆ ಹೋಗುವವರು ಟ್ಯಾಗೋರ್ ವೃತ್ತದಲ್ಲಿ ಬಲ ತಿರುವು ಪಡೆದು ಗಾಂಧಿ ಬಜಾರ್ ಮುಖ್ಯರಸ್ತೆಯಲ್ಲಿ ರಾಮಕೃಷ್ಣ ಆಶ್ರಮ ವೃತ್ತ ದಾಟಿ ಗವಿಪುರಂ ವಿಸ್ತರಣೆ 3ನೇ ಕ್ರಾಸ್ ಮೂಲಕ ಮುಂದೆ ಚಲಿಸಲು ಕೋರಲಾಗಿದೆ.
ತ್ಯಾಗರಾಜನಗರ ಅಥವಾ ಬನಶಂಕರಿ ಕಡೆಯಿಂದ ಬುಲ್ ಟೆಂಪಲ್ ರಸ್ತೆ ಮೂಲಕ ಚಾಮರಾಜಪೇಟೆ ಕಡೆಗೆ ಹೋಗುವ ವಾಹನಗಳು ಕಾಮತ್ ಹೋಟೆಲ್ ಜಂಕ್ಷನ್ನಲ್ಲಿ ಎಡ ತಿರುವು ಪಡೆದು ಅಶೋಕನಗರ 2ನೇ ಕ್ರಾಸ್ ಮೂಲಕ ಕತ್ರಿಗುಪ್ಪೆ ರಸ್ತೆ ಜಂಕ್ಷನ್ನಿಂದ ಬಲಕ್ಕೆ ಸಾಗಿ 3ನೇ ಮುಖ್ಯರಸ್ತೆಯಲ್ಲಿ ನಾರಾಯಣಸ್ವಾಮಿ ವೃತ್ತ ತಲುಪಬೇಕು. ಅವರು ಕೆ.ಜಿ.ನಗರ ಮುಖ್ಯರಸ್ತೆ ಅಥವಾ ಹಯವದನ ರಾವ್ ರಸ್ತೆ ಮೂಲಕ ಚಾಮರಾಜಪೇಟೆ ಕಡೆಗೆ ಸಾಗಲು ಕೋರಲಾಗಿದೆ.
ಪಾರ್ಕಿಂಗ್ ವ್ಯವಸ್ಥೆ
ಎಪಿಎಸ್ ಕಾಲೇಜು ಮೈದಾನ, ಎನ್ ಆರ್ ಕಾಲೋನಿ, ಕೊಹಿನೂರ್ ಮೈದಾನ, ಹಯವದನ ರಾವ್ ರಸ್ತೆ, ಉದಯಭಾನು ಮೈದಾನ, ಬುಲ್ ಟೆಂಪಲ್ ರಸ್ತೆಯಲ್ಲಿ ಮಾತ್ರ ಪಾರ್ಕಿಂಗ್ಗೆ ಅವಕಾಶ ನೀಡಲಾಗಿದೆ. ಸಾರ್ವಜನಿಕರು ಸಹಕರಿಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications