ಪೊಲೀಸರಿಂದಲೇ ಸಂಚಾರ ನಿಯಮ ಉಲ್ಲಂಘನೆ, ಫೋಟೊ ವೈರಲ್: ಕ್ರಮಕ್ಕೆ ನೆಟ್ಟಿಗರ ಆಗ್ರಹ
ಬೆಂಗಳೂರು, ನವೆಂಬರ್ 23: ಬೆಂಗಳೂರಿನಲ್ಲಿ ಪೊಲೀಸ್ ಅಧಿಕಾರಿಗಳ ವಾಹನಗಳು ದುರ್ಬಳಕೆಯಾಗುತ್ತಿದ್ದು, ಈ ಬಗ್ಗೆ ಸೂಕ್ರ ಕ್ರಮ ವಹಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಹೌದು, ಬೆಂಗಳೂರಿನ ಇಂದಿರಾನಗರದಲ್ಲಿ ನವೆಂಬರ್ 22ರಂದು 'POLICE' ಎಂದು ಬರೆಸಲಾಗಿರುವ ದ್ವಿಚಕ್ರ ವಾಹನ ದಲ್ಲಿ ಹಿಂಬದಿ ಸವಾರರು ಹೆಲ್ಮೆಟ್ ಧರಿಸಿಲ್ಲ. ಪೊಲೀಸರದ್ದು ಎನ್ನಲಾಗುತ್ತಿರುವ ಈ KA03 JM 6144 ಸಂಖ್ಯೆಯ ಖಾಸಗಿ ದ್ವಿಚಕ್ರ ವಾಹನ ಇಂದಿರಾನಗರ ಮೆಟ್ರೋ ನಿಲ್ದಾಣ ಬಳಿ ಓಡಾಡಿದ ಫೋಟೊವನ್ನು ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
Hope you take action @BlrCityPolice
— ಶ್ರೀ ಹರಿ (@upittumanava) November 22, 2022
Location: indranagar metro station pic.twitter.com/NJlNjhxhwz
ಸಾರ್ವಜನಿಕರಿಗೆ ಸಂಚಾರ ನಿಯಮ ಅನುಸರಿಸುವಂತೆ ತಿಳಿಸುವ ಪೊಲೀಸರೇ ಸಂಚಾರ ನಿಯಮ ಉಲ್ಲಂಘಿಸುತ್ತಿದ್ದಾರೆ. ದ್ವಿಚಕ್ರ ವಾಹನ ಹಿಂದೆ ಹಾಗೂ ಹೆಲ್ಮೆಟ್ ಮೇಲೆ ಪೊಲೀಸ್ ಎಂದು ಬರೆದ ಇಂಗ್ಲಿಷ್ ಅಕ್ಷರ ಕಾಣಿಸುತ್ತವೆ. ಈ ದ್ವಿಚಕ್ರ ವಾಹನದಲ್ಲಿ ಸವಾರ ಕಪ್ಪು ಶ್ವೆಟರ್ ಹಾಕಿದ್ದು ಪೊಲೀಸ್ ಎಂದು ಬರೆದ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುತ್ತಿದ್ದಾರೆ. ಆದರೆ ಹಿಂಬದಿ ಸವಾರ ಹೆಲ್ಮೆಟ್ ಹಾಕದಿರುವುದು ಸ್ಪಷ್ಟವಾಗಿ ಫೋಟೊದಲ್ಲಿ ಕಾಣಿಸುತ್ತದೆ.

ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಿ
ಒಂದು ವೇಳೆ ಪೊಲೀಸ್ ಅಧಿಕಾರಿಯ ಖಾಸಗಿ ಬೈಕ್ ಅನ್ನು ಅವರ ಸಂಬಂಧಿಕರು/ ಸ್ನೇಹಿತರು ತೆಗೆದುಕೊಂಡು ಹೋಗಿದ್ದರೆ ಅಲ್ಲಿಯೂ ಸಹ ಸಂಚಾರ ನಿಯಮ ಉಲ್ಲಂಘನೆ ಆಗಿದೆ. ಪೊಲೀಸ್ ಸಂಕೇತದ ಹೆಲ್ಮೆಟ್ ಅನ್ನು ಬೇರೆಯವರು ಧರಿಸಿರುವುದು ಹಾಗೂ ಹಿಂಬದಿ ಸವಾರ ಹೆಲ್ಮೆಟ್ ಇಲ್ಲದೇ ಸವಾರಿ ಮಾಡುವುದು ನಿಯಮ ಉಲ್ಲಂಘಿಸಿದಂತಾಗುತ್ತದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಿ ಎಂದು ಬೆಂಗಳೂರು ನಗರ ಸಂಚಾರಿ ಪೊಲೀಸರನ್ನು ಟ್ಯಾಗ್ ಮಾಡಿ ಟ್ವಿಟ್ಟರ್ನಲ್ಲಿ ಪೋಸ್ಟ್ ಮಾಡಲಾಗಿದೆ.
ಇದಕ್ಕೆ ಪ್ರತಿಕ್ರಿಯಿಸಿರುವ ಬೆಂಗಳೂರು ನಗರ ಸಂಚಾರ ಪೊಲೀಸ್ ಟ್ವಿಟ್ಟರ್ ಖಾತೆ, ಸಮಯ ಹಾಗೂ ಸ್ಥಳದ ಬಗ್ಗೆ ಮಾಹಿತಿ ನೀಡಿ ಎಂದು ಕಾಮೆಂಟ್ ಮಾಡಿದೆ. ಇದೇ ವೇಳೆ ಮತ್ತೊಬ್ಬರು ಬಿಟಿಪಿ ಮೊಬೈಲ್ ಅಪ್ಲಿಕೇಷನ್ನಲ್ಲಿ ವಾಹನ ನೋಂದಣಿ ಸಂಖ್ಯೆ ನಮೂದಿಸಿ ಪರಿಶೀಲಿಸಿದ ಫೋಟೊ (ಸ್ಕೀನ್ಶಾಟ್) ಕಾಮೆಂಟ್ ಮಾಡಿದ್ದಾರೆ.

ಆ ಪೋಟೊದಲ್ಲಿ ಈ KA03 JM 6144 ಸಂಖ್ಯೆಯ ವಾಹನ ಸವಾರರು ನಿಯಮ ಉಲ್ಲಂಘಿಸಿರುವುದು ಪತ್ತೆ ಆಗಿದೆ. ಇದೇ ವರ್ಷ ಏಪ್ರಿಲ್ 24ರಂದು ಸಿಗ್ನಲ್ ಜಂಪ್ ಮಾಡಿದ್ದಕ್ಕೆ 500ರೂ. ದಂಡ. 2019ರ ಡಿಸೆಂಬರ್ ನಲ್ಲಿ ಹೆಲ್ಮೆಟ್ ಹಾಕದ್ದಕ್ಕೆ 500ರೂ. ದಂಡ ವಿಧಿಸಿರುವ ಮಾಹಿತಿ ನೆಟ್ಟಿಗರಿಗೆ ಲಭ್ಯವಾಗಿದೆ. ಸಾರ್ವಜನಿಕರಿಗೆ ದಂಡ ವಿಧಿಸುವ ಪೊಲೀಸರು ಈ ಕುರಿತು ಶೀಘ್ರವೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications