ಸಂಚಾರಿ ನಿಯಮ ಪಾಲಿಸದಿದ್ರೆ ಕೋರ್ಟ್ಗೆ ಹೋಗಿ ದಂಡ ಕಟ್ಟಿ
ಬೆಂಗಳೂರು, ಅಕ್ಟೋಬರ್ 30 : ಬೆಂಗಳೂರು ನಗರದಲ್ಲಿ ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡಿದವರು ಇನ್ನುಮುಂದೆ ಕೋರ್ಟ್ಗೆ ಹೋಗಿ ದಂಡ ಪಾವತಿ ಮಾಡಬೇಕಾಗುತ್ತದೆ. ಸಂಚಾರಿ ಪೊಲೀಸರು ಟೆಂಡರ್ ಶ್ಯೂರ್ ರಸ್ತೆಗಳಲ್ಲಿ ಈ ನಿಯಮವನ್ನು ಜಾರಿಗೆ ತಂದಿದ್ದಾರೆ.
ಹೆಲ್ಮೆಟ್ ಇಲ್ಲದೇ ಪ್ರಯಾಣ, ಪಾದಚಾರಿ ಮಾರ್ಗದಲ್ಲಿ ವಾಹನ ನಿಲುಗಡೆ ಮುಂತಾದ ನಿಯಮಗಳನ್ನು ಉಲ್ಲಂಘನೆ ಮಾಡಿದಲ್ಲಿ ಸ್ಥಳದಲ್ಲಿಯೇ ದಂಡ ವಿಧಿಸಲಾಗುತ್ತಿತ್ತು. ಆದರೆ, ಇನ್ನು ಮುಂದೆ ಸವಾರರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ. [ಕಬ್ಬನ್ ಪಾರ್ಕ್ ನಲ್ಲಿ ಶನಿವಾರವೂ ಸಂಚಾರ ಬಂದ್]

ನ್ಯಾಯಾಲಯಕ್ಕೆ ಹೋಗಿ ವಾಹನ ಸವಾರರು ದಂಡವನ್ನು ಪಾವತಿ ಮಾಡಿ, ನಂತರ ಪೊಲೀಸ್ ಠಾಣೆಗೆ ತೆರಳಿ ವಾಹನ ಮತ್ತು ಅದರ ದಾಖಲಾತಿಗಳನ್ನು ಪಡೆಯಬೇಕಾಗುತ್ತದೆ. ಈ ನಿಯಮವನ್ನು ಅಕ್ಟೋಬರ್ 29ರಿಂದಲೇ ಟೆಂಡರ್ ಶ್ಯೂರ್ ರಸ್ತೆಗಳಲ್ಲಿ ಜಾರಿಗೆ ತರಲಾಗಿದೆ. [ಟೆಂಡರ್ ಶ್ಯೂರ್ ರಸ್ತೆಯ ವಿಶೇಷತೆಗಳೇನು?]
ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಮೂವರು ಸಬ್ ಇನ್ಸ್ಪೆಕ್ಟರ್ಗಳನ್ನು ನಿಯೋಜನೆ ಮಾಡಲಾಗಿದೆ. ನಗರದ ಮೂರು ಟೆಂಡರ್ ಶ್ಯೂರ್ ರಸ್ತೆಗಳಲ್ಲಿ ಮಾತ್ರ ಈ ನಿಯಮ ಜಾರಿಯಲ್ಲಿರುತ್ತದೆ.
ಯಾವ-ಯಾವ ರಸ್ತೆಗಳು : ಈ ವಿಶೇಷ ಕಾರ್ಯಾಚರಣೆ ವಿಠಲ್ ಮಲ್ಯ, ಸೇಂಟ್ ಮಾರ್ಕ್ಸ್ ಹಾಗೂ ಕನ್ನಿಂಗ್ಹ್ಯಾಂ ರಸ್ತೆಗಳಲ್ಲಿ ಮಾತ್ರ ಜಾರಿಯಲ್ಲಿರುತ್ತದೆ ಎಂದು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಡಾ.ಎಂ.ಎ. ಸಲೀಂ ಹೇಳಿದ್ದಾರೆ.












Click it and Unblock the Notifications