ಟ್ರಾಫಿಕ್ ನಿಯಮ ಉಲ್ಲಂಘನೆ: ಬಿಎಂಟಿಸಿ ಚಾಲಕರ ಸುಧಾರಣೆ
ಬೆಂಗಳೂರು, ಜೂನ್ 29: ಬಿಎಂಟಿಸಿ ಚಾಲಕರು ಸಂಚಾರ ನಿಯಮ ಉಲ್ಲಂಘನೆಯನ್ನು ಕಡಿಮೆ ಮಾಡಿದ್ದಾರೆ, ಇದರಿಂದ ಅಧಿಕಾರಿಗಳು ಕೊಂಚ ನಿರಾಳರಾಗಿದ್ದಾರೆ.
ಬಿಎಂಟಿಸಿಯು ಸಂಚಾರ ನಿಯಮ ಉಲ್ಲಂಘಿಸುವಲ್ಲಿ ಮುಂಚೂಣಿಯಲ್ಲಿತ್ತು, ಇದು ಅಧಿಕಾರಿಗಳಿಗೆ ದೊಡ್ಡ ತಲೆನೋವಾಯಿ ಪರಿಣಮಿಸಿತ್ತು, ಸಂಚಾರ ನಿಯಮ ಕುರಿತು ಎಷ್ಟೇ ಹೇಳಿದರು ಚಾಲಕರು ನಿಯಮ ಉಲ್ಲಂಘಿಸುವುದನ್ನು ಮಾತ್ರ ಬಿಟ್ಟಿರಲಿಲ್ಲ.ಸಿಗ್ನಲ್ ಜಂಪಿಂಗ್, ನೋ ಪಾರ್ಕಿಂಗ್ ಪ್ರದೇಶದಲ್ಲಿ ನಿಲುಗಡೆ, ಅತಿ ವೇಗದ ಚಾಲನೆ ಹೀಗೆ ಅನೇಕ ನಿಯಮವನ್ನು ಉಲ್ಲಂಘಿಸುತ್ತಿದ್ದರು.
ಬಿಎಂಟಿಸಿ ಮತ್ತು ಟ್ರಾಫಿಕ್ ಪೊಲೀಸರು ಕೈಗೊಂಡ ಜಾಗೃತಿಯಿಂದಾಗಿ ಉಲ್ಲಂಘನೆ ಪ್ರಕರಣದಲ್ಲಿ ಇಳಿಕೆಯಾಗಿದೆ. 2017-18ರಲ್ಲಿ 4,939 ಪ್ರಕರಣಗಳು ದಾಖಲಾಗಿತ್ತು. 2011-12 ರಿಂದ 2017-18ರವರೆಗೆ ಬಿಎಂಟಿಸಿಯು ಸಂಚಾರ ಪೊಲೀಸ್ ಇಲಾಖೆಯಿಂದ 1,24,457 ಉಲ್ಲಂಘನೆ ಪ್ರಕರಣ ವರದಿಯಾಗಿತ್ತು.

ಉದ್ದೇಶಪೂರ್ವಕವಾಗಿ ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿಲ್ಲ, ನಮಗೆ ಕೊಟ್ಟಿರುವ ಟ್ರಿಪ್ ಅನ್ನು ಸರಿಯಾದ ಸಮಯದಲ್ಲಿ ಪೂರ್ಣಗೊಳಿಸುವ ಆತುರದಲ್ಲಿ ಹೀಗಾಗುತ್ತದೆ, ಇಲ್ಲದೇ ಹೋದಲ್ಲಿ ಮೇಲಧಿಕಾರಿಗಳಿಗೆ ನಾವು ವಿವರಣೆ ನೀಡಬೇಕಾಗುತ್ತದೆ ಹೀಗಾಗಿ ಕೆಲವೊಮ್ಮೆ ಸಂಚಾರ ನಿಯಮ ಉಲ್ಲಂಘಿಸುವುದು ಅನಿವಾರ್ಯವಾಗುತ್ತದೆ ಎಂದು ಚಾಲಕರೊಬ್ಬರು ತಿಳಿಸಿದ್ದಾರೆ.
ನಗರದಲ್ಲಿ ಪ್ರತಿ ಅರ್ಧ ಕಿ.ಮೀಗೆ ಒಂದರಂತೆ ಟ್ರಾಫಿಕ್ ಸಿಗ್ನಲ್ಗಳಿವೆ ಇದರಿಂದಾಗಿ ನಿಗದಿತ ಅವಧಿಯಲ್ಲಿ ಟ್ರಿಪ್ ಪೂರ್ಣಗೊಳಿಸುವುದು ಸಾಧ್ಯವಾಗುತ್ತಿಲ್ಲ, ಟ್ರಾಫಿಕ್ ಜಾಮ್ ಕೂಡ ಸಮಸ್ಯೆ ಉಂಟು ಮಾಡುತ್ತಿದೆ. ಕೆಲವೊಮ್ಮೆ ಗಂಟೆಗಟ್ಟಲೆ ಅಲ್ಲೇ ಬಸ್ ಬಾಕಿಯಾಗುತ್ತದೆ ಎಂದು ವಿವರಿಸಿದರು.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ












Click it and Unblock the Notifications