ಟ್ರಾಫಿಕ್ ನಿಯಮ ಉಲ್ಲಂಘನೆ: ಬಿಎಂಟಿಸಿ ಚಾಲಕರ ಸುಧಾರಣೆ
ಬೆಂಗಳೂರು, ಜೂನ್ 29: ಬಿಎಂಟಿಸಿ ಚಾಲಕರು ಸಂಚಾರ ನಿಯಮ ಉಲ್ಲಂಘನೆಯನ್ನು ಕಡಿಮೆ ಮಾಡಿದ್ದಾರೆ, ಇದರಿಂದ ಅಧಿಕಾರಿಗಳು ಕೊಂಚ ನಿರಾಳರಾಗಿದ್ದಾರೆ.
ಬಿಎಂಟಿಸಿಯು ಸಂಚಾರ ನಿಯಮ ಉಲ್ಲಂಘಿಸುವಲ್ಲಿ ಮುಂಚೂಣಿಯಲ್ಲಿತ್ತು, ಇದು ಅಧಿಕಾರಿಗಳಿಗೆ ದೊಡ್ಡ ತಲೆನೋವಾಯಿ ಪರಿಣಮಿಸಿತ್ತು, ಸಂಚಾರ ನಿಯಮ ಕುರಿತು ಎಷ್ಟೇ ಹೇಳಿದರು ಚಾಲಕರು ನಿಯಮ ಉಲ್ಲಂಘಿಸುವುದನ್ನು ಮಾತ್ರ ಬಿಟ್ಟಿರಲಿಲ್ಲ.ಸಿಗ್ನಲ್ ಜಂಪಿಂಗ್, ನೋ ಪಾರ್ಕಿಂಗ್ ಪ್ರದೇಶದಲ್ಲಿ ನಿಲುಗಡೆ, ಅತಿ ವೇಗದ ಚಾಲನೆ ಹೀಗೆ ಅನೇಕ ನಿಯಮವನ್ನು ಉಲ್ಲಂಘಿಸುತ್ತಿದ್ದರು.
ಬಿಎಂಟಿಸಿ ಮತ್ತು ಟ್ರಾಫಿಕ್ ಪೊಲೀಸರು ಕೈಗೊಂಡ ಜಾಗೃತಿಯಿಂದಾಗಿ ಉಲ್ಲಂಘನೆ ಪ್ರಕರಣದಲ್ಲಿ ಇಳಿಕೆಯಾಗಿದೆ. 2017-18ರಲ್ಲಿ 4,939 ಪ್ರಕರಣಗಳು ದಾಖಲಾಗಿತ್ತು. 2011-12 ರಿಂದ 2017-18ರವರೆಗೆ ಬಿಎಂಟಿಸಿಯು ಸಂಚಾರ ಪೊಲೀಸ್ ಇಲಾಖೆಯಿಂದ 1,24,457 ಉಲ್ಲಂಘನೆ ಪ್ರಕರಣ ವರದಿಯಾಗಿತ್ತು.

ಉದ್ದೇಶಪೂರ್ವಕವಾಗಿ ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿಲ್ಲ, ನಮಗೆ ಕೊಟ್ಟಿರುವ ಟ್ರಿಪ್ ಅನ್ನು ಸರಿಯಾದ ಸಮಯದಲ್ಲಿ ಪೂರ್ಣಗೊಳಿಸುವ ಆತುರದಲ್ಲಿ ಹೀಗಾಗುತ್ತದೆ, ಇಲ್ಲದೇ ಹೋದಲ್ಲಿ ಮೇಲಧಿಕಾರಿಗಳಿಗೆ ನಾವು ವಿವರಣೆ ನೀಡಬೇಕಾಗುತ್ತದೆ ಹೀಗಾಗಿ ಕೆಲವೊಮ್ಮೆ ಸಂಚಾರ ನಿಯಮ ಉಲ್ಲಂಘಿಸುವುದು ಅನಿವಾರ್ಯವಾಗುತ್ತದೆ ಎಂದು ಚಾಲಕರೊಬ್ಬರು ತಿಳಿಸಿದ್ದಾರೆ.
ನಗರದಲ್ಲಿ ಪ್ರತಿ ಅರ್ಧ ಕಿ.ಮೀಗೆ ಒಂದರಂತೆ ಟ್ರಾಫಿಕ್ ಸಿಗ್ನಲ್ಗಳಿವೆ ಇದರಿಂದಾಗಿ ನಿಗದಿತ ಅವಧಿಯಲ್ಲಿ ಟ್ರಿಪ್ ಪೂರ್ಣಗೊಳಿಸುವುದು ಸಾಧ್ಯವಾಗುತ್ತಿಲ್ಲ, ಟ್ರಾಫಿಕ್ ಜಾಮ್ ಕೂಡ ಸಮಸ್ಯೆ ಉಂಟು ಮಾಡುತ್ತಿದೆ. ಕೆಲವೊಮ್ಮೆ ಗಂಟೆಗಟ್ಟಲೆ ಅಲ್ಲೇ ಬಸ್ ಬಾಕಿಯಾಗುತ್ತದೆ ಎಂದು ವಿವರಿಸಿದರು.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ












Click it and Unblock the Notifications