SWR: ಬೆಂಗಳೂರು ರೈಲು ನಿಲ್ದಾಣದಲ್ಲಿ FOB ಕೆಲಸ: ರೈಲುಗಳ ನಿಲುಗಡೆ ಕ್ಯಾನ್ಸಲ್, ಮಾರ್ಗ ಬದಲಾವಣೆ
ಬೆಂಗಳೂರು, ಜೂನ್ 17: ಬೆಂಗಳೂರಲ್ಲಿ ಯಶವಂತಪುರ ರೈಲು ನಿಲ್ದಾಣ ಪುನರ್ ಅಭಿವೃದ್ಧಿ ಹಿನ್ನೆಲೆ ಇತ್ತೀಚೆಗೆ ರೈಲು ನಿಲುಗಡೆಯಲ್ಲಿ ಬದಲಾವಣೆ ಆಗಿತ್ತು. ಇದೀಗ ನಗರದ ಕಂಟೋನ್ಮೆಂಟ್ ರೈಲು ನಿಲ್ದಾಣದಲ್ಲಿ ಪುನರಾಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಇಲ್ಲಿ ಪಾದಚಾರಿ ಮೇಲೇತುವೆ (FOB) 03 ರ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಕೆಳಗಿನ ಕೆಲವು ರೈಲು ಮಾರ್ಗಗಳನ್ನು ಬದಲಾಯಿಸಲಾಗಿದೆ. ಸಮಯ ಬದಲಾವಣೆ ಆಗಿದೆ.
ಕಂಟೋನ್ಮೆಂಟ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಉತ್ತಮ ಪಾದಚಾರಿ ವ್ಯವಸ್ಥೆ ಮಾಡಲು, ಓಡಾಟಕ್ಕೆ ಅನುಕೂಲವಾಗುವಂತೆ ಎಪ್ಓಬಿ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಈ ಕಾರಣದಿಂದ ತಾತ್ಕಲಿಕವಾಗಿ ರೈಲು ಮಾರ್ಗ ಬದಲಾಯಿಸಿದ್ದು, ಈ ನಿಲ್ದಾಣದಲ್ಲಿ ರೈಲುಗಳು ನಿಲುಗಡೆ ಇಲ್ಲ ಎಂದು ನೈಋತ್ಯ ರೈಲ್ವೆ ವಲಯದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅವುಗಳ ಪಟ್ಟಿ ಮುಂದಿದೆ ನೋಡಿ..

ಮಾರ್ಗ ಬದಲಾವಣೆ ಪಟ್ಟಿ ಹೀಗಿದೆ
* 06269 ಸಂಖ್ಯೆಯ ಮೈಸೂರು -ಎಸ್.ಎಂ.ವಿ.ಟಿ ಬೆಂಗಳೂರು ದೈನಂದಿನ ಪ್ಯಾಸೆಂಜರ್ ವಿಶೇಷ ರೈಲು ಜೂನ್ 23, 25 ಮತ್ತು 26 ಹೊರಡಲಿದೆ. ಈ ರೈಲು ಕೆ.ಎಸ್.ಆರ್ ಬೆಂಗಳೂರು, ಯಶವಂತಪುರ, ಹೆಬ್ಬಾಳ, ಬಾಣಸವಾಡಿ, ಮತ್ತು ಎಸ್.ಎಂ.ವಿ.ಟಿ ಬೆಂಗಳೂರು ಮಾರ್ಗವಾಗಿ ಸಂಚರಿಸಲಿದೆ. ಇದು ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣದಲ್ಲಿ ನಿಲುಗಡೆ ನೀಡುವುದಿಲ್ಲ.
* ಕೆಎಸ್ಆರ್ ಬೆಂಗಳೂರು - ನಾಂದೇಡ್ ದೈನಂದಿನ ಎಕ್ಸ್ಪ್ರೆಸ್ ರೈಲು (16593) ಇದೇ ಜೂನ್ 23, 25 ಮತ್ತು 26 ರಂದು ಸಂಚಾರ ಪ್ರಾರಂಭಿಸಲಿದೆ. ಇದು ಕೆ.ಎಸ್.ಆರ್ ಬೆಂಗಳೂರಿನಿಂದ 45 ನಿಮಿಷಗಳ ಕಾಲ ವಿಳಂಬವಾಗಿ ಹೊರಡಲಿದೆ. ಅಲ್ಲದೆ, ಇದು ಕೆ.ಎಸ್.ಆರ್ ಬೆಂಗಳೂರು, ಯಶವಂತಪುರ, ಯಲಹಂಕ, ಮತ್ತು ಧರ್ಮಾವರಂ ಮಾರ್ಗವಾಗಿ ಸಂಚರಿಸಲಿದೆ. ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣದಲ್ಲಿ ಈ ರೈಲಿಗೆ ನಿಲುಗಡೆ ಇರುವುದಿಲ್ಲ. ಪ್ರಯಾಣಿಕರು ಗಮನಿಸಬೇಕು ಮತ್ತು ಪರ್ಯಾಯ ನಿಲ್ದಾಣ ಅವಲಂಬಿಸಬೇಕಿದೆ.
* ರೈಲು (16022) ಮೈಸೂರು-ಡಾ. ಎಂ.ಜಿ.ಆರ್ ಚೆನ್ನೈ ಸೆಂಟ್ರಲ್ ದೈನಂದಿನ ಎಕ್ಸ್ಪ್ರೆಸ್ ಇದೇ ಜೂನ್ 23, 25 ಮತ್ತು 26 ರಂದು ಪ್ರಾರಂಭವಾಗಲಿದ್ದು, ಬೆಂಗಳೂರು, ಯಶವಂತಪುರ, ಹೆಬ್ಬಾಳ, ಬಾಣಸವಾಡಿ, ಬೈಯಪ್ಪನಹಳ್ಳಿ, ಮತ್ತು ಕೃಷ್ಣರಾಜಪುರಂ (ಕೆ.ಆರ್.ಪುರಂ) ಮಾರ್ಗವಾಗಿ ಸಂಚರಿಸಲಿದೆ. ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣದಲ್ಲಿ ಈ ರೈಲು ನಿಲುಗಡೆ ತಾತ್ಕಾಲಿಕವಾಗಿ ರದ್ದಾಗಿದೆ.
* ಎಸ್.ಎಂ.ವಿ.ಟಿ ಬೆಂಗಳೂರು-ಮೈಸೂರು ದೈನಂದಿನ ಪ್ಯಾಸೆಂಜರ್ ವಿಶೇಷ ರೈಲು (06270) ಜೂನ್ 23, 25 ಮತ್ತು 26ರಂದು ಸಂಚರಿಸಲಿದೆ. ಈ ರೈಲು ಎಸ್.ಎಂ.ವಿ.ಟಿ ಬೆಂಗಳೂರು, ಬಾಣಸವಾಡಿ, ಯಶವಂತಪುರ, ಮತ್ತು ಕೆ.ಎಸ್.ಆರ್ ಬೆಂಗಳೂರು ಮಾರ್ಗವಾಗಿ ಸಂಚರಿಸಲಿದೆ. ಈ ರೈಲು ಸಹ ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣದಲ್ಲಿ ನಿಲ್ಲುವುದಿಲ್ಲ. ಆದ್ದರಿಂದ ಪ್ರಯಾಣಿಕರು ಸಹಕರಿಸಬೇಕು. ರೈಲು ಏರುವ ನಿಲ್ದಾಣವನ್ನು ಪ್ಲಾನ್ ಮಾಡಿಕೊಳ್ಳುವಂತೆ ನೈಋತ್ಯ ರೈಲ್ವೆ ವಲಯದ ಮುಖ್ಯ ಸಂಪರ್ಕಾಧಿಕಾರಿ ಮಂಜುನಾಥ ಕನಮಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ












Click it and Unblock the Notifications