ಸಿಇಒ ತಾಯಿಯನ್ನೇ ಒತ್ತೆಯಾಳಾಗಿರಿಸಿಕೊಂಡು ಪ್ರತಿಭಟನೆ
ಬೆಂಗಳೂರು, ಡಿ.4: ತಮ್ಮಿಂದ ಪಡೆದ ಹಣವನ್ನು ಕಂಪನಿ ಹಿಂದಕ್ಕೆ ನೀಡಿಲ್ಲವೆಂದು ಆರೋಪಿಸಿದ ಟ್ರೈನಿ ಉದ್ಯೋಗಿಗಳು ಕಂಪನಿಯ ಸಿಇಒ ತಾಯಿಯನ್ನೇ ಒತ್ತೆಯಾಳನ್ನಾಗಿರಿಸಿಕೊಂಡು ಪ್ರತಿಭಟನೆ ನಡೆಸಿದ್ದಾರೆ.
ನಗರದ ಹೊರವಲಯದ ಬನ್ನೇರುಘಟ್ಟ ರಸ್ತೆಯಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ. ಕಂಪನಿಯ ಆಡಳಿತ ಮಂಡಳಿ ಭದ್ರತಾ ಹಣ ಎಂದು ಪ್ರತಿಯೊಬ್ಬರಿಂದ ಪಡೆದಿದ್ದ 30 ಸಾವಿರ ರೂಪಾಯಿಗಳನ್ನು ಹಿಂದಕ್ಕೆ ನೀಡಿಲ್ಲ ಎಂದು ಆರೋಪಿಸಿದ್ದಾರೆ.[ಅಡ್ಡಾದಿಡ್ಡಿ ಭವಿಷ್ಯ ಹೇಳುವವರ ವಿರುದ್ಧ ಭುಗಿಲೆದ್ದ ಕಿಡಿ]

ಜಾವಾ ಡೆವಲಪರ್ಸ್ ಉದ್ದೇಶಕ್ಕೆ ಖಾಸಗಿ ಕಂಪನಿಯೊಂದು 300 ಜನರನ್ನು ತರಬೇತಿ ಆಧಾರದಲ್ಲಿ ನೇಮಕ ಮಾಡಿಕೊಂಡಿತ್ತು. ಇದು ನಾಲ್ಕು ತಿಂಗಳ ತರಬೇತಿ ಅವಧಿ ಎಂದು ಹೇಳಿತ್ತು. ಪ್ರತಿ ತಿಂಗಳು 7 ಸಾವಿರ ರೂ. ಸ್ಟೈಫಂಡ್ ಸಹ ನೀಡಲಾಗುವುದು. ತರಬೇತಿ ಮುಗಿದ ನಂತರ 12,500 ಸಾವಿರ ರೂ ಸಂಬಳದ ಆಧಾರದಲ್ಲಿ ಕಾಯಂ ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದ ಕಂಪನಿ ಯಾವ ಹಣವನ್ನು ನೀಡಿಲ್ಲ ಎಂದು ಹೆಸರು ಹೇಳಲು ಬಯಸದ ಮಹಿಳಾ ಟ್ರೈನಿಯೊಬ್ಬರು ಆರೋಪಿಸಿದ್ದಾರೆ.
ಈ ಎಲ್ಲ ಘಟನೆಗಳಿಂದ ಕೆರಳಿದ 15 ಕ್ಕೂ ಹೆಚ್ಚು ತರಬೇತಿ ಕೆಲಸಗಾರರು ಕಂಪನಿಯ ಸಿಇಒ ಮನೆಗೆ ತೆರಳಿದ್ದಾರೆ. ಆದರೆ ಸಿಇಒ ಮನೆಯಲ್ಲಿರಲಿಲ್ಲ. ಸಿಇಒ ಸಹೋದರ ಆತನನನ್ನು ಕರೆದುಕೊಂಡು ಬರುವುದಾಗಿ ಹೇಳಿ ಹೋದವ ಎಷ್ಟು ಸಮಯ ಕಳೆದರೂ ಮನೆಗೆ ಹಿಂದಿರುಗಿಲ್ಲ. ಪರಿಣಾಮ ಮನೆಯಲ್ಲಿದ್ದ ಸಿಇಒ ತಾಯಿಯನ್ನೇ ತರಬೇತಿ ಕೆಲಸಗಾರರು ತಮ್ಮ ಜತೆ ಇರಿಸಿಕೊಳ್ಳುತ್ತಾರೆ. ಅಲ್ಲದೇ ಕಂಪನಿಯ ಎದುರಿಗೆ ಪ್ರತಿಭಟನೆ ನಡೆಸಲು ಮುಂದಾಗುತ್ತಾರೆ.[ಚಳವಳಿಗೆ ಮುಂದಾದ ಅಂಗವಿಕಲರಿಗೆ ಲಾಠಿ ಏಟು]
ಸಿಇಒ ಮತ್ತು ಆತನ ಕುಟುಂಬ ಈ ತಿಂಗಳ ಅಂತ್ಯಕ್ಕೆ ಮನೆ ಬದಲಾಯಿಸುವ ಯೋಚನೆಯನ್ನು ಮಾಡಿತ್ತು. ಈ ಬಗ್ಗೆ ಸಿಇಒ ವಾಸವಿರುವ ಅಪಾರ್ಟ್ ಮೆಂಟ್ ಮಾಲೀಕ ಮಾಹಿತಿ ನೀಡಿದ್ದಾರೆ. ನಮ್ಮ ಹಣಕ್ಕೆ ಯಾರು ಜವಾಬ್ದಾರಿ? ಎಂದು ಇನ್ನೊಬ್ಬ ತರಬೇತಿ ಸಿಬ್ಬಂದಿ ಪ್ರಶ್ನಿಸಿದ್ದಾರೆ.
ಸಿಇಒ ತಾಯಿಯನ್ನು ತಮ್ಮ ಜತೆಗೆ ಜಯನಗರ ಪೊಲೀಸ್ ಉಪ ಕಮಿಷನರ್ ಕಚೇರಿಗೆ ಕರೆದೊಯ್ದ ಸಿಬ್ಬಂದಿ ಕಂಪನಿ ವಿರುದ್ಧ ದೂರು ದಾಖಲಿಸಲು ಮುಂದಾಗಿದ್ದಾರೆ. ಆದರೆ ಇದು ಮೈಕೋ ಲೇಔಟ್ ಠಾಣಾ ವ್ಯಾಪ್ತಿಗೆ ಸೇರುತ್ತಿದ್ದು ಅಲ್ಲಿಗೆ ತೆರಳಲು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮೈಕೋ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications