ಮಾಧ್ಯಮ ಸಂಸ್ಥೆ ವಿರುದ್ಧ ಲಿಂಗ ಅಲ್ಪಸಂಖ್ಯಾತರ ಆಕ್ರೋಶ
ಬೆಂಗಳೂರು, ಅಕ್ಟೋಬರ್, 20: ಲಿಂಗ ಅಲ್ಪ ಸಂಖ್ಯಾತರ ಕುರಿತು ಖಾಸಗಿ ಸುದ್ದಿವಾಹಿನಿಯೊಂದು ರಹಸ್ಯ ಕಾರ್ಯಚರಣೆ ನಡೆಸಿ ಸಂವೇದನಾರಹಿತವಾಗಿ ನಡೆದುಕೊಂಡಿವೆ ಎಂದು ಕರ್ನಾಟಕ ಲಿಂಗ ಅಲ್ಪಸಂಖ್ಯಾತ ಸಂಘಟನೆ ಸದಸ್ಯರು ಪತ್ರಿಕಾಗೋಷ್ಠಿ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ ಸೆಪ್ಟೆಂಬರ್ ಖಾಸಗಿ ಕನ್ನಡ ಮಾಧ್ಯಮವೊಂದು ನಡೆಸಿದ ರಹಸ್ಯ ಕಾರ್ಯಚರಣೆಯಿಂದ ಲಿಂಗ ಅಲ್ಪಸಂಖ್ಯಾತರ ಸಮುದಾಯದ ಸ್ವಾಂತಂತ್ರ್ಯ ಮತ್ತು ಭಾವನೆಗಳಿಗೆ ಧಕ್ಕೆಯಾಗಿದೆ ಎಂದೆ ಸದಸ್ಯರು ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ರಹಸ್ಯ ಕಾರ್ಯಚರಣೆಯಿಂದ 5 ಮಂದಿ ಲಿಂಗ ಅಲ್ಪಸಂಖ್ಯಾತರನ್ನು ಪೊಲೀಸರು ಬಂಧಿಸಿದ್ದಾರೆ. ಸಾಲದೆಂಬಂತೆ ಒಬ್ಬರನ್ನು ಪುರುಷರ ಜೈಲು ಕೋಣೆಯಲ್ಲಿ ಕೂಡಿ ಹಾಕಲಾಗಿದೆ. ಇದು ನಮ್ಮ ಸಮುದಾಯದ ಭಾವನೆಗಳನ್ನು ಕೆರಳಿಸಿದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
ಅಕ್ರಮವಾಗಿ ಲಿಂಗ ಅಲ್ಪಸಂಖ್ಯಾತರಾಗಿ ಪರಿವರ್ತಿಸುವ ಶಸ್ತ್ರ ಚಿಕಿತ್ಸೆ ಕುರಿತು ಸೆ.25ರಂದು ಕನ್ನಡ ಸುದ್ದಿ ವಾಹಿನಿಯೊಂದು ಸ್ಟಿಂಗ್ ಅಪರೇಷನ್ ನಡೆಸಿತ್ತು.
ಘಟನಗೆ ಪೂರಕವೆಂಬತೆ, ತಮ್ಮ ಅಪ್ರಾಪ್ತ ಮಗನನ್ನು ಬಲವಂತವಾಗಿ ಲಿಂಗ ಪರಿವರ್ತನೆಗೆ ಒಳಪಡಿಸಲಾಗುತ್ತಿದೆ ಎಂದು ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಐದು ಮಂದಿ ಲಿಂಗ ಅಲ್ಪಸಂಖ್ಯಾತರನ್ನು ಪೊಲೀಸರು ಬಂಧಿಸಿದ್ದರು.
ರಹಸ್ಯ ಕಾರ್ಯಚರಣೆ ಬಳಿಕ ಪೊಲೀಸರು ಬಂಧಿಸಿರುವ ಲಿಂಗ ಅಲ್ಪಸಂಖ್ಯಾತರ ಮೇಲೆ 9 ಪ್ರಕರಣಗಳನ್ನು ದಾಖಲಿಸಿದ್ದಾರೆ. ಸಾಲದೆಂಬಂತೆ ಅಪಹರಣ ಮತ್ತು ಕೊಲೆ ಕೇಸ್ ಕೇಸ್ ಗಳನ್ನು ದಾಖಲು ಮಾಡಿದ್ದಾರೆ ಎಂದು ಸಮುದಾಯದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
'ಆಪರೇಷನ್ ಆನಂದಿ' ಹೆಸರಿನಲ್ಲಿ ಸುದ್ದಿವಾಹಿನಿ ನಡೆಸಿರುವ ರಹಸ್ಯ ಕಾರ್ಯಚರಣೆ ತೀರ ತುಚ್ಛಮಟ್ಟದಾಗಿದ್ದು, ಇದು ಲಿಂಗ ಅಲ್ಪ ಸಂಖ್ಯಾತರ ಭಾವನೆಗಳಿಗೆ ಮತ್ತು ಸ್ವಾತಂತ್ರ್ಯಕ್ಕೆ ಧಕ್ಕೆ ತಂದಿದೆ ಎಂದು ಸದಸ್ಯರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
'ಲಿಂಗ ಅಲ್ಪ ಸಂಖ್ಯಾತರನ್ನು ಪುರುಷರ ಜೈಲಿನಲ್ಲಿ ಬಂಧಿಸಿ ಮಾನವ ಹಕ್ಕುಗಳ ಉಲ್ಲಂಘನೆ ಮಾಡಲಾಗಿದೆ. ಇದರಿಂದ ಅವರು ಲೈಂಗಿಕ ಕಿರುಕುಳಕ್ಕೆ ಒಳಗಾಗುವ ಸಾಧ್ಯತೆ ಇದೆ' ಎಂದು ಸಮುದಾಯದ ಸದಸ್ಯೆ ಅಕೈ ಪದ್ಮಶಾಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಅವರನ್ನೂ ಕೂಡಲೇ ಮಹಿಳಾ ಜೈಲಿಗೆ ಅಥವಾ ಪ್ರತ್ಯೇಕ ಜೈಲಿಗೆ ಬದಲಾಯಿಸುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಮತ್ತು ಅವರಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಸಮುದಾಯದ ಸದಸ್ಯರು ಒತ್ತಾಯಿಸಿದ್ದಾರೆ.
ಘಟನೆಯನ್ನು ವಿರೋಧಿಸಿ ಅಕ್ಟೋಬರ್ 21ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸಮುದಾಯದ ಸದಸ್ಯರು ತಿಳಿಸಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications