ರಸ್ತೆ ಅಪಘಾತದಲ್ಲಿ ಸಾವನ್ನಪ್ಪುವವರಲ್ಲಿ ಯುವಜನಾಂಗವೇ ಅಧಿಕ
ಬೆಂಗಳೂರು ಫೆಬ್ರವರಿ 16: ದೇಶದಲ್ಲಿ ಆಗುತ್ತಿರುವ ರಸ್ತೆ ಅಪಘಾತಗಳಲ್ಲಿ ಶೇಕಡಾ 70 ರಷ್ಟು ಯುವಜನಾಂಗದವರಾಗಿರುವುದು ಬಹಳ ವಿಷಾದನೀಯ ಸಂಗತಿಯಾಗಿದ್ದು, ಸೂಕ್ತ ಜಾಗೃತಿಯನ್ನು ಮೂಡಿಸುವ ಮೂಲಕ ಇದನ್ನ ತಡೆಗಟ್ಟಬೇಕಾಗಿದೆ ಎಂದು ಸಾರಿಗೆ ಆಯುಕ್ತ ಶಿವಕುಮಾರ್ ಹೇಳಿದರು.
ಮೈಸೂರು ರಸ್ತೆಯಲ್ಲಿರುವ ಅರವಿಂದ್ ಲಿಮಿಟೆಡ್ ನ ಮಿಲ್ ನ ಆವರಣದಲ್ಲಿ ಇಂದು ಜ್ಞಾನಭಾರತಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ವತಿಯಿಂದ 32 ನೇ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ರಸ್ತೆ ಅಪಘಾತಗಳ ಪರಿಣಾಮದಿಂದ ಅವರ ಕುಟುಂಬದವರು ಜೀವನ ಪೂರ್ತಿ ತೊಂದರೆಯನ್ನು ಅನುಭವಿಸುತ್ತಾರೆ. ತಾವು ತೀವ್ರ ನೋವನ್ನು ಅನುಭವಿಸುವುದಕ್ಕಿಂತ ರಸ್ತೆ ಸುರಕ್ಷತಾ ಕ್ರಮಗಳನ್ನು ಅನುಸರಿಸುವ ಮೂಲಕ ಅಪಘಾತಗಳು ಆಗುವುದನ್ನು ತಡೆಗಟ್ಟಬೇಕು ಎಂದು ಹೇಳಿದರು.

ದೇಶದಲ್ಲಿ ನಡೆಯುತ್ತಿರುವ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುವವರಲ್ಲಿ ಶೇಕಡಾ 70 ರಷ್ಟು ಯುವಜನಾಂಗದವರಾಗಿದ್ದಾರೆ. ಇದು ಬಹಳ ಆಘಾತಕಾರಿ ಅಂಶವಾಗಿದೆ. ಕುಟುಂಬದ ಯುವ ಸದಸ್ಯರನ್ನು ಕಳೆದುಕೊಂಡು ಜನರು ಜೀವನಪೂರ್ತಿ ತೊಂಧರೆಯನ್ನು ಅನುಭವಿಸುತ್ತಾರೆ. ಈ ಹಿನ್ನಲೆಯಲ್ಲಿ ಜನರು ರಸ್ತೆ ಸುರಕ್ಷತಾ ಕ್ರಮಗಳನ್ನು ಪಾಲಿಸುವುದನ್ನು ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು.

Recommended Video
ಕಾರ್ಯಕ್ರಮದಲ್ಲಿ ಆರ್ ಟಿ ಒ ಕೆ.ಎಸ್ ಸೌಂದರ್ಯ, ಸಹಾಯಕ ಆರ್ ಟಿ ಓ ರಾಜಣ್ಣ ಹೆಚ್, ಅರವಿಂದ್ ಲಿಮಿಟೆಡ್ ಸಿ ಓ ಓ ಪ್ರಕಾಶ್ ಪೊನ್ನುಸ್ವಾಮಿ ಭಾಗವಹಿಸಿದ್ದರು. ಜಾಗೃತಿ ಗೀತೆಗಳು, ಬೀದಿ ನಾಟಕಗಳ ಮೂಲಕ ಜನರಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸಲಾಯಿತು.
-
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ












Click it and Unblock the Notifications