ವಾಹನಗಳಿಗೆ ಜಿಪಿಎಸ್ ಕಡ್ಡಾಯ: ಸಾರಿಗೆ ಇಲಾಖೆ ನಿರಾಸಕ್ತಿ
ಬೆಂಗಳೂರು, ಏಪ್ರಿಲ್ 16:ಮಹಿಳಾ ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಏ.1ರಿಂದ ದೇಶಾದ್ಯಂತ ಆಟೋ ಹೊರತುಪಡಿಸಿ ಎಲ್ಲ ರೀತಿಯ ಪ್ಯಾಸೆಂಜರ್ ವಾಹನಗಳಿಗೆ ವೆಹಿಕಲ್ ಟ್ರ್ಯಾಕಿಂಗ್ ಯುನಿಟ್ ಮತ್ತು ಪ್ಯಾನಿಕ್ ಬಟನ್ ಕಡ್ಡಾಯ ಎಂಬ ಆದೇಶವಿದೆ.
ಆದರೆ, ಆದೇಶ ಅನುಷ್ಠಾನ ಮಾಡುವಲ್ಲಿ ಕರ್ನಾಟಕ ವಿಫಲವಾಗಿದೆ. ಕಂಟ್ರೋಲ್ ರೂಂ ಸ್ಥಾಪನೆ ಸೇರಿ ಹಲವು ಕಾರಣಗಳಿಂದ ಈ ಆದೇಶ ಕಾಗದದಲ್ಲೇ ಉಳಿದಿದೆ.
ನಿರ್ಭಯಾ ಪ್ರಕರಣ ನಂತರ ಮಹಿಳಾ ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ 23 ಸೀಟಿಗಿಂತ ಅಧಿಕವಿರುವ ಬಸ್ ಗಳಲ್ಲಿ ಸಿಸಿ ಕ್ಯಾಮರಾ ಕಡ್ಡಾಯ ಆದೇಶವನ್ನು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹೊರಡಿಸಿತ್ತು. ಇದಾದ ನಂತರ ಪ್ಯಾಸೆಂಜರ್ ವಾಹನಗಳ ಮೇಲೆ ನಿಗಾ ಇಡಲು ಸಿಸಿ ಕ್ಯಾಮರಾ ಜತೆಗೆ 2018 ಏ.1ರಿಂದ ವಿಟಿಯು ಮತ್ತು ಪ್ಯಾನಿಕ್ ಬಟನ್ ಕಡ್ಡಾಯ ಆದೇಶವನ್ನು 2016-2017ರಲ್ಲಿ ಸಚಿವಾಲಯ ಮಾಡಿದೆ.

ಪೂರ್ವ ಸಿದ್ಧತೆ ಇಲ್ಲ: ಕೇಂದ್ರದ ಆದೇಶದಂತೆ ನೋಂದಣಿಯಾಗುವ ಎಲ್ಲ ಪ್ಯಾಸೆಂಜರ್ ವಾಹನ ಮತ್ತು ಅರ್ಹತಾ ಪತ್ರ ಪಡೆಯಲು ಆಗಮಿಸುವ ವಾಹನಗಳಲ್ಲೂ ಇದನ್ನು ಪರಿಶೀಲಿಸಲು ಸಾರಿಗೆ ಆಯುಕ್ತರು ಮಾರ್ಚ್ ಅಂತ್ಯದಲ್ಲಿ ಸೂಚಿಸಿದ್ದರು. ಆದರೆ, ರಾಜ್ಯ ಸಾರಿಗೆ ಇಲಾಖೆ ಪೂರ್ವಸಿದ್ಧತೆ ಇಲ್ಲದೆ ಈ ಆದೇಶ ಅನುಷ್ಠಾನಕ್ಕೆ ಮುಂದಾಗಿತ್ತು. ರಾಜ್ಯದಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ಪ್ಯಾಸೆಂಜರ್ ವಾಹನಗಳು ಈ ಆದೇಶ ಪಾಲಿಸಿವೆಯೇ ಎನ್ನುವುದನ್ನು ಪರಿಶೀಲಿಸಲು ಅಧಿಕಾರಿಗಳಿಗೆ ಸಮಯವಿಲ್ಲ, ಎಲ್ಲರೂ ಚುನಾವಣಾ ಕೆಲಸಗಳಲ್ಲೇ ತಲ್ಲೀನರಾಗಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications