ಸಾರಿಗೆ ನೌಕರರ ಮುಷ್ಕರ: ಬಸ್ಗಳಿಗೆ ಕಲ್ಲೇಟು ನೀಡಿದ ಚಾಲಕರ ಕೈಗೆ ಬೇಡಿ
ಬೆಂಗಳೂರು, ಏಪ್ರಿಲ್ 19: ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್ಗಳಿಗೆ ಕಲ್ಲು ಬೀಸಿ ಜಖಂಗೊಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಮೂವರು ನೌಕರರನ್ನು ಪಶ್ಚಿಮ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಆಂಧ್ರಹಳ್ಳಿ ಡಿಪೋನ ಚಾಲಕ ಸೀತೇಗೌಡ, ಚಾಲಕ ಕಂ ನಿರ್ವಾಹಕ ತಿಮ್ಮೇಗೌಡ, ಹೆಗ್ಗನಹಳ್ಳಿ ಕ್ರಾಸ್ ನಿವಾಸಿ ಜೀವನ್ ಬಂಧಿತ ಆರೋಪಿಗಳು. ಇವರ ವಿರುದ್ಧ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ ಆರೋಪ ಹೊರಿಸಲಾಗಿದೆ. ಆರನೇ ವೇತನ ಆಯೋಗದ ಶಿಫಾರಸಿನಂತೆ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ಹಮ್ಮಿಕೊಂಡಿದ್ದರು.
ಬಸ್ಗೆ ಕಲ್ಲು ಹೊಡೆಯುವ ಮೂಲಕ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ್ದರು. ಕೆಲ ದಿನಗಳ ಹಿಂದೆ ಬಿಎಂಟಿಸಿ ಬಸ್ಗೆ ಕಲ್ಲು ತೂರಿ ಜಖಂಗೊಳಿಸಿದ್ದ ಆರೋಪ ಸಂಬಂಧ ಮೂವರನ್ನು ಬಂಧಿಸಲಾಗಿದೆ. ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ , ಹಿಂಸಾತ್ಮಕ ಪ್ರತಿಭಟನೆಗೆ ಪ್ರಚೋದನೆ ನೀಡಿದ ಆರೋಪದಡಿ ಇವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ ಎಂ. ಪಾಟೀಲ್ ತಿಳಿಸಿದ್ದಾರೆ.

ಮುಂದುವರೆದ ಹೋರಾಟ: ಒಂದಡೆ ಸರ್ಕಾರದ ಹಠಮಾರಿತನ ಧೋರಣೆ. ಮತ್ತೊಂದಡೆ ಮುಷ್ಕರ ನಿರತ ಸಾರಿಗೆ ನೌಕರರ ದೌಲತ್ತು. ಅಂತೂ ಸಾರಿಗೆ ನೌಕರರು ಮುಷ್ಕರ ಆರಂಭಿಸಿ ಹದಿಮೂರು ದಿನ ಕಳೆದಿವೆ. ಇಡೀ ಸಾರಿಗೆ ವ್ಯವಸ್ಥೆಯನ್ನು ಖಾಸಗಿಯವರ ಕೈಯಲ್ಲಿಟ್ಟು ಸಾರಿಗೆ ಇಲಾಖೆ ಕೈತೊಳೆದುಕೊಂಡಿದೆ. ಇನ್ನೊಂದಡೆ ನಮ್ಮ ಬೇಡಿಕೆ ಈಡೇರುವ ವರೆಗೂ ಮುಷ್ಕರ ಕೈ ಬಿಡುವುದಿಲ್ಲ ಎಂದು ಪಟ್ಟು ಹಿಡಿದು ಕೂತಿದ್ದಾರೆ.
ಇದೀಗ ಅಮರಣಾಂತರ ಉಪವಾಸ ಸತ್ಯಾಗ್ರಹ ಆರಂಭಿಸಲು ತಯಾರಿ ನಡೆಸಿದ್ದಾರೆ. ಬಿಎಂಟಿಸಿ ನೌಕರರ ಸಂಧಾನ ಕುರಿತ ಮಾತುಕತೆಗಳು ಸದ್ಯದ ಮಟ್ಟಿಗೆ ಫಲಪ್ರದ ನೀಡುವ ಹಾಗೆ ಕಾಣುತ್ತಿಲ್ಲ. ಸಾರಿಗೆ ನೌಕರರ ಹೋರಾಟದ ನಾಯಕನಾಗಲು ಹೋಗಿ ಕೋಡಿಹಳ್ಳಿ ಚಂದ್ರಶೇಖರ್ ಇದೀಗ ಸಾರಿಗೆ ನೌಕರರಿಗೆ ಉತ್ತರ ನೀಡಲಾಗದ ಸ್ಥಿತಿಗೆ ಬಂದು ನಿಂತಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ












Click it and Unblock the Notifications