ನ್ಯಾಯಬೆಲೆ ಅಂಗಡಿಗಳಲ್ಲಿ ಬಸ್,ರೈಲು,ವಿಮಾನ ಸಂಚಾರಕ್ಕೆ ಟಿಕೇಟು ಲಭ್ಯ!
ಬೆಂಗಳೂರು, ಜನವರಿ 03 : ರಾಜ್ಯಾದ್ಯಂತ ಹಂತ ಹಂತವಾಗಿ ಎಲ್ಲ ನ್ಯಾಯಬೆಲೆ ಅಂಗಡಿಗಳು ಸೇವಾ ಸಿಂಧು ಕೇಂದ್ರಗಳಾಗಿ ಕಾರ್ಯ ನಿರ್ವಹಿಸಲಿದ್ದು ಜನರಿಗೆ ಅನುಕೂಲವಾಗುವಂತೆ ಬಸ್ಸು,ರೈಲು ಹಾಗೂ ವಿಮಾನದ ಟಿಕೆಟ್ ಗಳನ್ನು ಒದಗಿಸಲಿವೆ ಎಂದು ಆಹಾರ ಖಾತೆ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ಈ ಕುರಿತು ಸಂಬಂಧಪಟ್ಟವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದು ನ್ಯಾಯಬೆಲೆ ಅಂಗಡಿಗಳು ಹದಿನೈದು ದಿನಗಳಲ್ಲಿ ಗ್ರಾಹಕರಿಗೆ ಪಡಿತರ ಒದಗಿಸುವುದರ ಜತೆ ಸೇವಾ ಕೇಂದ್ರಗಳಾಗಿಯೂ ಕೆಲಸ ನಿರ್ವಹಿಸಬಹುದು. ಇದರಿಂದ ನ್ಯಾಯಬೆಲೆ ಅಂಗಡಿಯವರು ಪ್ರತಿ ತಿಂಗಳು ಹೆಚ್ಚುವರಿಯಾಗಿ ಹದಿನೈದರಿಂದ ಇಪ್ಪತ್ತು ಸಾವಿರ ರೂ ದುಡಿಯಲು ಸಾಧ್ಯವಾಗುತ್ತದೆ ಎಂದು ಇದೇ ಸಂದರ್ಭದಲ್ಲಿ ಅವರು ವಿವರಿಸಿದರು.

ರಾಜ್ಯದಲ್ಲಿ ಬಿಪಿಎಲ್ ಹಾಗೂ ಎಪಿಎಲ್ ಪದ್ಧತಿಯನ್ನು ತೆಗೆದುಹಾಕಲಾಗಿದ್ದು ವಾರ್ಷಿಕ 1.20 ಲಕ್ಷ ರೂ ಆದಾಯ ಇರುವವರು ಆದ್ಯತಾ ವಲಯಕ್ಕೆ,ಇದಕ್ಕೂ ಹೆಚ್ಚಿನ ಆದಾಯ ಇರುವವರು ಆದ್ಯತಾ ವಲಯದ ಹೊರಗಿರುತ್ತಾರೆ. ಇದುವರೆಗೆ ಬಿಪಿಎಲ್ ಪದ್ದತಿಯಡಿ ಇರುವವರು ಇನ್ನು ಮುಂದೆ ವಾರ್ಷಿಕ ಒಂದು ಲಕ್ಷ ಇಪ್ಪತ್ತು ಸಾವಿರ ರೂ ಆದಾಯದ ಮಿತಿಯಲ್ಲಿರುತ್ತಾರೆ.ಹೆಚ್ಚುವರಿ ಆದಾಯವಿದ್ದವರು ಇದುವರೆಗೂ ಇದ್ದ ಎಪಿಎಲ್ ವಲಯಕ್ಕೆ ವಲಯಕ್ಕೆ ಬರುತ್ತಾರೆ ಎಂದರು.
ಪಡಿತರ ಚೀಟಿಗಳಿಗೆ ಶೇಕಡಾ ನೂರಕ್ಕೆ ನೂರು ಆಧಾರ್ ಕಾರ್ಡ್ ಲಿಂಕ್ ಮಾಡಿದ ದೇಶದ ಮೊಟ್ಟ ಮೊದಲ ರಾಜ್ಯ ಕರ್ನಾಟಕ ಎಂದ ಅವರು, ಆ ಮೂಲಕ ಪಡಿತರ ಪದ್ಧತಿಯಡಿ ಯಾವುದೇ ಬಗೆಯ ಸೋರಿಕೆ ಇಲ್ಲದಂತೆ ಮಾಡಲಾಗಿದೆ ಎಂದರು.
ಹೀಗೆ ಸೋರಿಕೆ ತಡೆಗಟ್ಟಿದ್ದರಿಂದ ಮಾಸಿಕ ಐವತ್ತು ಕೋಟಿ ರೂಗಳಷ್ಟು ಹಣ ಉಳಿತಾಯವಾಗುತ್ತಿದೆ ಎಂದ ಅವರು, ಈಗ ನೀಡಿರುವ ಹೊಸ ಪಡಿತರ ಚೀಟಿಗಳು ಸೇರಿದಂತೆ ಆದ್ಯತಾ ವಲಯದೊಳಗೆ ಪಡಿತರ ಚೀಟಿ ಪಡೆದ ಕುಟುಂಬಗಳ ಸಂಖ್ಯೆ 1.10 ಕೋಟಿಗಳಷ್ಟಾಗಿದೆ ಎಂದು ಹೇಳಿದರು.
-
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications