ವೈಟ್ ಫೀಲ್ಡ್ ಸೀತಾರಾಮಪಾಳ್ಯ ಕೆರೆಗೆ ಹಸಿರು ಹೊದಿಕೆ
ಬೆಂಗಳೂರು, ಜು.23: ವೈಟ್ ಫೀಲ್ಡ್ ನಲ್ಲಿರುವ ಸೀತಾರಾಮಪಾಳ್ಯ ಕೆರೆ ಇಂದು ಹಸಿರು ಹೊದಿಕೆಯನ್ನು ಪಡೆಯಿತು. ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಯಾಗಿರುವ ಬ್ರಿಗೇಡ್ ಗ್ರೂಪ್ ಈ ಮಹತ್ಕಾರ್ಯಕ್ಕೆ ಮುನ್ನುಡಿ ಬರೆದಿದೆ.
ಕರ್ನಾಟಕ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಡಾ.ಎ. ರವೀಂದ್ರ, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ.ವಾಮನ್ ಆಚಾರ್ಯ, ಬ್ರಿಗೇಡ್ ಗ್ರೂಪ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಎಂ.ಆರ್. ಜೈಶಂಕರ್, ಟ್ರಾಪಿಕಲ್ ರೀಸರ್ಚ್ ಡೆವಲಪ್ ಮೆಂಟ್ ಸೆಂಟರ್ ನಿರ್ದೇಶಕ ಡಾ. ಅನಿಲ್ ಅಭಿ ಅವರ ಸಮ್ಮುಖದಲ್ಲಿ ಸಸಿ ನೆಡುವ ಕಾರ್ಯಕ್ಕೆ ಚಾಲನೆ ದೊರೆಯಿತು.
ಬ್ರಿಗೇಡ್ ಗ್ರೂಪ್ ಸಂಸ್ಥೆಯು ಸ್ವಯಂ ಸಂಸ್ಥೆಯಾದ ಟ್ರಾಪಿಕಲ್ ರೀಸರ್ಚ್ ಡೆವಲಪ್ ಮೆಂಟ್ ಸೆಂಟರ್ ಜತೆ ಸೇರಿ ವೈಟ್ ಫೀಲ್ಡ್ ನ ಈ ಸೀತಾರಾಮಪಾಳ್ಯ ಕೆರೆಯನ್ನು ಪುನರುಜ್ಜೀವನಗೊಳಿಸಿದ್ದು, ಇದೀಗ ಕೆರೆ ತನ್ನ ಹಿಂದಿನ ಗತವೈಭವವನ್ನು ಸಾರಿ ಹೇಳುವಂತಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಮಾಲಿನ್ಯ ನಿಯಾಂತ್ರಣ ಮಂಡಳಿ ಅಧ್ಯಕ್ಷರಾದ ಡಾ.ವಾಮನ್ ಆಚಾರ್ಯರವರು, "ಕೆರೆಗಳಿಂದ ನಗರವು ಸುಂದರವಾಗುತ್ತದೆ. ಆದರೆ ಈಗ ಕೆರೆಗಳನ್ನು ಆಕ್ರಮಿಸಲಾಗುತ್ತಿದೆ. ಇದನ್ನು ತಡೆಯಬೇಕು. ಕೆರೆಗಳಿಗೆ ಹೋಗುವ ಕಲುಷಿತ ನೀರನ್ನು ಸ್ವಚ್ಚಗೊಳಿಸಿ ಕೆರೆಗೆ ಬಿಡುವ ಕಾರ್ಯವಾಗ ಬೇಕು" ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಬ್ರಿಗೇಡ್ ಗ್ರೂಪ್ ಸಿಎಂಡಿ ಎಂ.ಆರ್.ಜೈಶಂಕರ್, "ಕೆರೆಯ ಒಂದಷ್ಟು ಭಾಗದಲ್ಲಿ ಗಿಡಗಳನ್ನು ನೆಡಲಾಗಿದ್ದು, ಹಚ್ಚ ಹಸಿರಿನ ಪುಟ್ಟ ಕಾಡು ಬೆಳೆಯುವಂತೆ ಮಾಡಲಾಗಿದೆ. ಈ ಮೂಲಕ ಕೆರೆ ಸದ್ಯದಲ್ಲೇ ಪಕ್ಷಿ ಪ್ರಿಯರ ಸ್ವರ್ಗ ಎನಿಸಲಿದೆ" ಎಂದರು. [ವೈಟ್ ಫೀಲ್ಡ್ ಸೀತಾರಾಮಪಾಳ್ಯ ಕೆರೆಗೆ ಪುನರ್ಜನ್ಮ]
ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಡಾ.ಎ. ರವೀಂದನವರು, "ಬ್ರಿಗೇಡ್ ಗ್ರೂಪ್ ನವರು ಕೆರೆ ಅಭಿವೃದ್ಧಿ ಮಾಡುತ್ತಿರುವುದು ಪ್ರಶಂಸನೀಯಾವಾಗಿದೆ ಎಂದರು. ಕೆರೆಗಳ ನಗರವಾಗಿದ್ದ ಬೆಂಗಳೂರಿನಲ್ಲಿ ಇಂದು ಕೆರೆಗಳು ಮಾಯವಾಗಿವೆ. ಇರುವ ಕೆರೆಗಳನ್ನು ಅಭಿವೃದ್ಧಿ ಪಡಿಸಿ ಮತ್ತು ಅದರ ನಿರ್ವಹಣೆ ಮಾಡಿದರೆ ಬೆಂಗಳೂರನ್ನು ಪುನಃ ಹಸಿರು ಬೆಂಗಳೂರನ್ನಾಗಿ ಮಾಡಬಹುದು" ಎಂದರು.
23.37 ಎಕರೆ ವಿಸ್ತೀರ್ಣದ ಈ ಕೆರೆಯನ್ನು ನಿರ್ಲಕ್ಷ್ಯ ಮಾಡಿದ್ದರ ಪರಿಣಾಮ ಇಲ್ಲಿ ಅಂತರ್ಜಲ ಮಟ್ಟ ಕುಸಿದಿತ್ತು. ನೀರಿಲ್ಲದೇ ಮರಗಳು ಒಣಗಿ ಹೋಗುತ್ತಿದ್ದವು. ಕೊಳಚೆ ನೀರು ಹರಿದು ಬರುತ್ತಿತ್ತು. ಅಲ್ಲದೇ, ಹಳೆ ಕಟ್ಟಡಗಳ ಅವಶೇಷಗಳನ್ನು ರಾಶಿ ಹಾಕಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಬ್ರಿಗೇಡ್ ಗ್ರೂಪ್ ಈ ಕೆರೆಯನ್ನು ಪುನರುಜ್ಜೀವನಗೊಳಿಸಿ ಮತ್ತೆ ಹಿಂದಿನ ಸ್ಥಿತಿಗೆ ತರುವ ಸಂಕಲ್ಪ ಮಾಡಿತು.
ಕೆರೆಯ ಸುತ್ತ ಹಚ್ಚಹಸಿರಿನ ಮರಗಳು ಬೆಳೆಯಲಿದ್ದು, ಇದರ ಪರಿಣಾಮ ಅಂತರ್ಜಲ ಮಟ್ಟ ಹೆಚ್ಚಳ ಆಗಲಿದೆ ಎಂದು ಬ್ರಿಗೇಡ್ ಗ್ರೂಪ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮಂಜುನಾಥ್ ಪ್ರಸಾದ್ ಮಾಹಿತಿ ನೀಡಿದರು. ಇದಲ್ಲದೇ, ಕೆರೆಯ ಏರಿಯಲ್ಲಿ 1500 ರಿಂದ 2000 ಸಾವಿರ ಅಲಂಕಾರಿಕಾ ಮರಗಳನ್ನು ಬೆಳೆಸುವ ಉದ್ದೇಶವಿದೆ.

ಸದ್ಯದಲ್ಲಿ ಕೆರೆಯಲ್ಲಿ ತುಂಬಿರುವ ಕಟ್ಟಡಗಳ ಅವಶೇಷಗಳನ್ನು ತೆರವುಗೊಳಿಸಲಾಗುತ್ತಿದೆ. ಕೊಳಚೆ ನೀರು ಹರಿದು ಬರುತ್ತಿರುವ ಕಾಲುವೆಗಳನ್ನು ಸ್ಥಗಿತಗೊಳಿಸಬೇಕಿದೆ. ಒಟ್ಟಾರೆ ಕೆರೆಯನ್ನು ಸ್ವಚ್ಛಗೊಳಿಸಿ ಸುಂದರವಾದ ಪಾದಚಾರಿ ಮಾರ್ಗ ನಿರ್ಮಾಣ, ಮಕ್ಕಳ ಉದ್ಯಾನ ಮಾಡಲಾಗುತ್ತದೆ ಎಂದೂ ತಿಳಿಸಿದರು.
ಲೋಕಾಯುಕ್ತರು ಕೆರೆಯನ್ನು ಪುನರುಜ್ಜೀವನಗೊಳಿಸಲೆಂದು ರಚಿಸಲಾಗಿದ್ದ ಯೋಜನಾ ವರದಿಗೆ ಅನುಮೋದನೆ ನೀಡಿದ್ದು, ಪುನರುಜ್ಜೀವನ ಕಾರ್ಯ 9 ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಇದಕ್ಕಾಗಿ ಬ್ರಿಗೇಡ್ ಗ್ರೂಪ್ 1 ಕೋಟಿ ರೂಪಾಯಿಯನ್ನು ಖರ್ಚು ಮಾಡಲಿದೆ.
ಕಾಮಗಾರಿ ಪೂರ್ಣದ ನಂತರ 23.37 ಎಕರೆ ಸುಂದರವಾಗಿ ಕಾಣಲಿದ್ದು, ಸುಮಾರು 13,692 ದಶಲಕ್ಷ ಲೀಟರ್ ನೀರು ಸಂಗ್ರಹವಾಗಲಿದೆ. ಮಕ್ಕಳಿಗೆ ಆಟಕ್ಕೆಂದು ಜಾಗ ಸೇರಿದಂತೆ 300 ರಿಂದ 400 ಮೀಟರ್ ವರೆಗೆ ಜಾಗಿಂಗ್/ವಾಕಿಂಗ್ ಪಾತ್ ನಿರ್ಮಾಣ ಮಾಡಲಾಗುತ್ತದೆ.
ಸುತ್ತಮುತ್ತಲಿನ ಸುಮಾರು 3 ಲಕ್ಷ ಜನರಿಗೆ ಈ ಕೆರೆ ಅಭಿವೃದ್ಧಿ ನಂತರ ಮನೋರಂಜನೆಯ ತಾಣವಾಗಲಿದೆ. ಅಂತರ್ಜಲ ಹೆಚ್ಚಿದರೆ ಹಚ್ಚಹಸಿರು ನಳನಳಿಸಲಿದ್ದು, ಸುತ್ತಮುತ್ತಲಿನ ವಾತಾವರಣ ಆಹ್ಲಾದಕರವಾಗಿರಲಿದೆ. ಪುನರುಜ್ಜೀವನದ ಕಾಮಗಾರಿ ಆರಂಭಿಕ ಹಂತದಲ್ಲಿರುವಾಗಲೇ ಪರ್ಪಲ್ ಮತ್ತು ಗ್ರೇ ಹೆರಾನ್ಸ್ ಮತ್ತು ಇಂಡಿಯನ್ ಕಾರ್ಮೊರೆಂಟ್ಸ್ ಹಕ್ಕಿಗಳು ಇಲ್ಲಿಗೆ ವಲಸೆ ಬರಲು ಆರಂಭಿಸಿರುವುದು ಸಂತಸದ ವಿಚಾರವಾಗಿದೆ. (ಒನ್ಇಂಡಿಯಾ ಕನ್ನಡ)
-
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications