Bengaluru Rain: ಸುಡುವ ಸೂರ್ಯ ಉರುಳಿಸುವ ವರುಣ- ಪ್ರಾಣಕ್ಕೆ ಕುತ್ತು ತಂದ ಬೆಂಗಳೂರು ಮರಗಳು
ಬೆಂಗಳೂರು ಮೇ 6: ಬೆಂಗಳೂರಿನಲ್ಲಿ ಮರಗಳು ಮಳೆ ಬಂದರೆ ಸಾಕು ನೆಲಕ್ಕಚ್ಚುತ್ತಿವೆ. ಮಳೆ ಸಂದರ್ಭದಲ್ಲಿ ಏಕಾಏಕಿ ಬೀಸುವ ಗಾಳಿಗೆ ಮರಗಳು ಧರೆಗುರುಳುತ್ತಿವೆ. ಇದರಿಂದ ಸಾಕಷ್ಟು ಹಾನಿಯನ್ನು ಎದುರಿಸುವಂತಾಗುತ್ತಿದೆ. ಪಾಲಿಕೆ ನಿರ್ಲಕ್ಷ್ಯಕ್ಕೆ ಜನ ಹಿಡಿ ಶಾಪ ಹಾಕುತ್ತಿದ್ದಾರೆ.
ಬಿಬಿಎಂಪಿ ಕಾಲ ಕಾಲಕ್ಕೆ ಮರಗಳ ಪರಿಸ್ಥಿತಿ ನೋಡಿ ಅವುಗಳನ್ನು ಕತ್ತರಿಸಬೇಕು. ಆದರೆ ಪಾಲಿಕೆ ನಿರ್ಲಕ್ಷ್ಯ ಜನರನ್ನು ಆತಂಕಕ್ಕೆ ದೂಡಿದೆ. ಹೌದು... ಪಾಲಿಕೆ ನಿರ್ಲಕ್ಷ್ಯ ಜನಸಾಮಾನ್ಯರ ಪ್ರಾಣಕ್ಕೆ ಕುತ್ತು ತಂದಿದೆ. ಕಳೆದ ಹದಿನೈದು ದಿನಗಳಲ್ಲಿ ಬೃಹತ್ ಮರಗಳು ಉರುಳುವ ಎರಡನೇ ಘಟನೆ ನಡೆದಿದ್ದು, ಪ್ರಾಣ ಹೋಗುವವರೆಗೂ ಅಧಿಕಾರಿಗಳು ಅಲರ್ಟ್ ಆಗುವ ಲಕ್ಷಣವೇ ಕಾಣಿಸುತ್ತಿಲ್ಲ.

ಮೊನ್ನೆ ಮಧ್ಯಾಹ್ನದ ಹೊತ್ತು ಮಳೆ ಸುರಿದಾಗ ಹೋಂಡಾ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದಿತ್ತು. ಕಾರು ಸಂಪೂರ್ಣ ಜಖಂ ಆಗಿತ್ತು. ಅದೃಷ್ಟವಶಾತ್ ಕಾರಿನಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಗಳೂರಿನಲ್ಲಿ ಜೀವನ್ಭೀಮನಗರದಲ್ಲಿ ನಿಂತಿದ್ದ ಕಾರಿನ ಮೇಲೆ ಒಣಗಿದ ಗಿಡವೊಂದು ಬಿದ್ದಿದೆ. ಒಂದು ವೇಳೆ ಇದೇ ಮರ ಕಾರು ಚಲಿಸುತ್ತಿದ್ದಾಗ ಬಿದ್ದಿದ್ದರೆ ದೊಡ್ಡ ಅಪಾಯವೇ ಎದುರಿಸಬೇಕಾಗುತ್ತಿತ್ತು.
ಮಳೆ ಗಾಳಿಯಿಂದ ಮರಗಳು ಧರಗೆ ಉರುಳಿ ಬೀಳುವ ಮುನ್ನ ರೆಂಬೆ ಕೊಂಬೆಗಳನ್ನು ಪಾಲಿಕೆ ಪರಿಶೀಲನೆ ಮಾಡಿ ಕತ್ತರಿಸಬೇಕು. ಆದರೆ ಇದಕ್ಕೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸುತ್ತಾರೆ. ಬಿಸಿಲಿನಿಂದ ರಕ್ಷಣೆಗೆ ಇರುವ ಮರಗಳನ್ನು ಕತ್ತರಿಸಲು ಜನ ಅನುಮತಿಸುವುದಿಲ್ಲ. ಅದಾಗ್ಯೂ ನಾವು ಕೆಲ ಅಪಾಯಕಾರಿ ಮರಗಳ ರೆಂಬೆ ಕೊಂಬೆಗಳನ್ನು ಕತ್ತರಿಸುತ್ತೇವೆ ಎನ್ನುತ್ತಾರೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್.
ಈ ಬಗ್ಗೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಅಮರೇಶ್, 'ಏಪ್ರಿಲ್, ಮೇ ಬಂದರೆ, ಒಣಗಿದ ಮರಗಳ ಬಗ್ಗೆ ಪರಿಶೀಲನೆ ಮಾಡಬೇಕು. ಆದರೆ ಇದನ್ನು ಮಾಡುವುದಿಲ್ಲ. ಜನಪ್ರಾಣಗಳಿಗೆ ಬೆಲೆ ಇಲ್ಲ. ತುಂಬಾ ಕೆಟ್ಟ ವ್ಯವಸ್ಥೆ ಬಿಬಿಎಂಪಿಯಲ್ಲಿ ಇದೆ' ಎಂದು ದೂರಿದರು.

ನಗರದ ಪ್ರಮುಖ ರಸ್ತೆಗಳಲ್ಲಿ ಮರಗಳು ಸೊರಗಿ ಧರೆಗೆ ಉರುಳುವ ಹಂತವನ್ನು ತಲುಪಿವೆ. ಶೀಘ್ರವೇ ಪಾಲಿಕೆ ಎಚ್ಚೆತ್ತುಕೊಂಡು ಅವುಗಳನ್ನು ತೆರವುಗೊಳಿಸುವ ಕೆಲಸ ಮಾಡಬೇಕಿದೆ. ಇಲ್ಲವಾದಲ್ಲಿ ಮಳೆಗಾಲದಲ್ಲಿ ಅಪಾಯ ಮಾತ್ರ ಕಟ್ಟಿಟ್ಟ ಬುತ್ತಿ.
ಕರ್ನಾಟಕದಲ್ಲಿ ಇಂದು ಮತ್ತು ನಾಳೆಯಾಗುವ ಮುನ್ಸೂಚನೆ
ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೇಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಮೇ 7 ರಿಂದ 2 ವಾರ ಕಾಲ ಅಂದರೆ ಮೇ 19ರ ವರೆಗೆ ಸಾಧಾರಣದಿಂದ ಭಾರೀ ಮಳೆಯನ್ನು ನಿರೀಕ್ಷಿಸಬಹುದಾಗಿದೆ. ಕೆಲವೆಡೆ ಇಂದು ಮಳೆಯಾಗಲಿದೆ. ಶುಕ್ರವಾರ ಸುರಿದ ಮಳೆ ಬೆಂಗಳೂರಿನಲ್ಲಿ ಹೊಸ ವಾತಾವರಣ ಮೂಡುವಂತೆ ಮಾಡಿದೆ.

ಉಷ್ಣಾಂಶ 2 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಿದೆ. ರಾಜಧಾನಿ ಅಷ್ಟೇ ಅಲ್ಲ, ದಕ್ಷಿಣ ಒಳನಾಡು ಹಾಗೂ ಕರಾವಳಿಯ ಹಲವೆಡೆ ಮುಂದಿನ 2 ದಿನಗಳ ಕಾಲ ಮಳೆ ಸುರಿಯುವ ಸಾಧ್ಯತೆ ಇದೆ.ಈಗಾಗಲೇ ದಕ್ಷಿಣ ಒಳನಾಡು ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗಿದೆ. ಆದರೆ, ಕರಾವಳಿಯ ಬಹುತೇಕ ಕಡೆಗಳಲ್ಲಿ ಮಳೆಯಾಗಿಲ್ಲ.ಮೇ 6 ರಂದು ಚಾಮರಾಜನಗರ, ಮೈಸೂರು ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ.
-
Karnataka Highways: 1846 ಕಿಮೀ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ 5000 ಕೋಟಿ ರೂ ಘೋಷಣೆ -
ಬೆಂಗಳೂರು, ವಿದ್ಯಾಕಾಶಿ ಧಾರವಾಡದಲ್ಲಿ "ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್" ಆರಂಭ: ಬಜೆಟ್ನಲ್ಲಿ ಘೋಷಣೆ -
ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಇದು ನಿಜಕ್ಕೂ ಕಾರ್ಯಸಾಧುವೆ? ತಜ್ಞರು ಹೇಳುವುದೇನು? -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ












Click it and Unblock the Notifications