ಟಿವಿ ವಾಹಿನಿಗಳು ಕನ್ನಡದ ಕೊಲೆ ಮಾಡಬಾರದು ಎಂದ ನಾಗಾಭರಣ
ಬೆಂಗಳೂರು, ಏಪ್ರಿಲ್ 28: ಕೊರೊನಾ ಸಂದರ್ಭದಲ್ಲಿ ಕನ್ನಡ ಟಿವಿ ವಾಹಿನಿಗಳು ಹೆಚ್ಚು ಕನ್ನಡ ಪದಗಳನ್ನು ಬಳಸದೇ, ಅನವಶ್ಯಕವಾಗಿ ಆಂಗ್ಲ ಪದಗಳನ್ನು ಬಳಸಿ, ಕನ್ನಡ ಭಾಷಾ ಬೆಳವಣಿಗೆಗೆ ಕುಂದುಂಟು ಮಾಡುತ್ತಿದ್ದಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ ಎಸ್ ನಾಗಾಭರಣ ಆರೋಪಿಸಿದ್ದಾರೆ.
Recommended Video
ಅವರು ಮಾಧ್ಯಮ ಸಂಸ್ಥೆಗಳಿಗೆ ಕನ್ನಡ ಭಾಷೆ ಬಳಕೆಯ ನಿಘಂಟನ್ನು ನೀಡಿ, ಕನ್ನಡ ಪದಗಳನ್ನೇ ಕಡ್ಡಾಯವಾಗಿ ಬಳಸುವಂತೆ ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತು ಮಂಗಳವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರಸ್ತುತ ರಾಜ್ಯ ಎದುರಿಸುತ್ತಿರುವ ಕೊರೊನಾ ಸಾಂಕ್ರಾಮಿಕ ರೋಗದ ಸನ್ನಿವೇಶದಲ್ಲಿ ಮಾಧ್ಯಮಗಳು ಅದರಲ್ಲೂ ವಿಶೇಷವಾಗಿ ವಿದ್ಯುನ್ಮಾನ ಮಾಧ್ಯಮಗಳು ಸಾರ್ವಜನಿಕರಿಗೆ ಮಾಹಿತಿ ತಲುಪಿಸುವಲ್ಲಿ ಅರ್ಥಪೂರ್ಣ ಕೆಲಸ ಮಾಡುತ್ತಿರುವುದು ಅಭಿನಂದನೀಯ. ಆದರೆ, ಇದೇ ಹೊತ್ತಿನಲ್ಲಿ ಪ್ರಸಾರ / ಮುದ್ರಣದಲ್ಲಿ ಬಳಸುವ ಕನ್ನಡ ಭಾಷೆಯ ಬಗ್ಗೆಯೂ ಅಷ್ಟೇ ಕಾಳಜಿ ವಹಿಸಿದರೆ ತಾವು ಇನ್ನೂ ಹೆಚ್ಚಿನ ಜನರನ್ನು ತಲುಪುವಂತಾಗುತ್ತಿತ್ತು ಎಂದಿದ್ದಾರೆ.

ಅನಗತ್ಯವಾಗಿ ಆಂಗ್ಲ ಪದಗಳನ್ನು ಬಳಸುವುದು ಕನ್ನಡ ಭಾಷಾ ಬೆಳವಣಿಗೆಗೆ ಮಾರಕವಾಗುತ್ತದೆ. ಸಮೂಹ ಮಾಧ್ಯಮವನ್ನೇ ಹೆಚ್ಚಾಗಿ ನಂಬಿರುವ ಜನರು ಮಾಹಿತಿಯ ಜೊತೆಗೆ ಭಾಷೆಯನ್ನು ಕಲಿಯುತ್ತಾರೆ ಎನ್ನುವುದನ್ನು ತಾವು ಅರ್ಥಮಾಡಿಕೊಳ್ಳುವಿರಾಗಿ ಭಾವಿಸುತ್ತೇನೆ ಎಂದಿದ್ದಾರೆ.
ವಿದ್ಯುನ್ಮಾನ ಮಾಧ್ಯಮಗಳು ಬಳಸುವ ಭಾಷೆಯ ಬಗ್ಗೆ ಬಳಸುವ ಪದಪುಂಜಗಳ ಬಗ್ಗೆ ಸಾರ್ವಜನಿಕರಿಂದ ಬಹಳಷ್ಟು ಸಲಹೆಗಳನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಧ್ಯಮಗಳ ಪರವಾಗಿ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿಯೇ ಗ್ರಾಹಕರನ್ನು ಕೇಳಿ ಮಾಧ್ಯಮಗಳಲ್ಲಿ ಬಳಸಬಹುದಾದ ಕನ್ನಡ ಸದಭಿರುಚಿಯ ಪದಗಳನ್ನು ಸಂಗ್ರಹಿಸಲಾಗಿದ್ದು ತಮಗೆ ಕಳುಹಿಸಿ ಕೊಡಲಾಗುತ್ತಿದ್ದು ಈ ಪದಗಳನ್ನು ಮುದ್ರಣ / ವಿದ್ಯುನ್ಮಾನ ಮಾಧ್ಯಮಗಳಲ್ಲಿ ಬಳಸುವ ಮೂಲಕ ಕನ್ನಡ ಭಾಷಾ ಬೆಳವಣಿಗೆ, ಕನ್ನಡದ ಅಸ್ಮಿತೆ ಉಳಿಸಿಕೊಳ್ಳಲು ಸಹಕಾರ ನೀಡಬೇಕು ಎಂದು ನಾಗಾಭರಣ ಮನವಿ ಮಾಡಿಕೊಂಡಿದ್ದಾರೆ.
-
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ












Click it and Unblock the Notifications