Tunnel Road: ಟನಲ್ ರಸ್ತೆಯಿಂದ ಹಾನಿ: ಮೆಟ್ರೋ ಸಾರಿಗೆಯನ್ನೇ ಉತ್ತೇಜಿಸಿ: ಆರ್.ಅಶೋಕ್
ಬೆಂಗಳೂರು, ನವೆಂಬರ್ 15: ಬೆಂಗಳೂರಿನಲ್ಲಿ ಟನಲ್ ರಸ್ತೆ ಯೋಜನೆಯು ಮುಂದಿನ ವರ್ಷ ಆರಂಭಿಸಲು ರಾಜ್ಯ ಸರ್ಕಾರ ಪ್ಲಾನ್ ಮಾಡಿಕೊಂಡಿದೆ. ರಾಜ್ಯ ಸರ್ಕಾರ ಸುರಂಗ ರಸ್ತೆ ನಿರ್ಮಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಪರಿಸರವನ್ನು ಹಾಳುಗೆಡವುತ್ತಿದೆ. ಅದರಿಂದ ಹಾನಿಯೇ ಹೆಚ್ಚು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದರು.
ಭಾನುವಾರ ಸ್ಯಾಂಕಿ ಕೆರೆ ಬಳಿ ನಡೆದ ಸಹಿ ಸಂಗ್ರಹ ಹಾಗೂ ಪರಿಶೀಲನೆ ಕಾರ್ಯದ ವೇಳೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸುರಂಗ ರಸ್ತೆಗಾಗಿ ಸ್ಯಾಂಕಿ ಕೆರೆಗೆ ಧಕ್ಕೆ ತರಲಾಗುತ್ತಿದೆ. ನಾವ್ಯಾರೂ ಅಭಿವೃದ್ಧಿಯ ವಿರೋಧಿಗಳಲ್ಲ. ಆದರೆ ಯಾವುದೇ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ತಂದರೂ ಪರಿಸರವನ್ನು ಹಾಳು ಮಾಡುತ್ತದೆ. ಪರಿಸರ ಇಲಾಖೆ, ಪುರಾತತ್ವ ಇಲಾಖೆ, ಅರಣ್ಯ ಇಲಾಖೆ ಸೇರಿದಂತೆ ಯಾವುದೇ ಇಲಾಖೆಗಳ ಅನುಮತಿಯನ್ನೂ ಸಹ ಪಡೆದಿಲ್ಲ ಎಂದು ವಿವರಿಸಿದರು.

ನಮ್ಮ ಮೆಟ್ರೋ ಸಾರಿಗೆಯಿಂದಾಗಿ ಬೆಂಗಳೂರಿನಲ್ಲಿ ಟ್ರಾಫಿಕ್ ಕಡಿಮೆ ಆಗಿದೆ. ಲಕ್ಷಾಂತರ ಜನರು ನಿತ್ಯ ಇದೇ ಮೆಟ್ರೋ ಸಾರಿಗೆ ಬಳಸುತ್ತಿದ್ದಾರೆ. ಇದನ್ನೇ ಸುಧಾರಣೆ ಮಾಡಿ ಬೇಗ ಯೋಜನೆ ಪೂರ್ಣಗೊಳಿಸಿದರೆ ಜನರಿಗೆ ಮತ್ತಷ್ಟು ಅನುಕೂಲವಾಗುತ್ತದೆ. ಟ್ರಾಫಿಕ್ ಇಳಿಕೆಗೆ ಕೊಡುಗೆ ನೀಡಿದಂತೆ. ಸುರಂಗ ಕೊರೆದರೆ ಉಂಟಾಗುವ ಹೂಳನ್ನು ಎಲ್ಲಿಗೆ ಸಾಗಿಸುತ್ತಾರೆ ಎಂಬ ಬಗ್ಗೆ ಇವರಿಗೆ ಸ್ಪಷ್ಟತೆ ಇಲ್ಲ. ಇದೊಂದು ಹಣ ಲೂಟಿಯ ಯೋಜನೆ. ಈಗಾಗಲೇ ಬಿಹಾರ ಚುನಾವಣೆಗೆ ಹಣ ಕಳುಹಿಸಿದ್ದಾರೆ. ಈ ರೀತಿ ಹಣ ಮಾಡಲು ಯೋಜನೆ ಮಾಡಬಾರದು ಎಂದು ಅವರು ಆಗ್ರಹಿಸಿದರು.
ಬೆಂಗಳೂರಿನ ಜನರು ತೆರಿಗೆಗಳ ಭಾರದಿಂದ ಹಿಂಸೆ ಅನುಭವಿಸುತ್ತಿದ್ದಾರೆ. ತ್ಯಾಜ್ಯ, ನೀರು ಎಲ್ಲ ದರ ಏರಿಕೆಯಾಗಿದೆ. ಸುರಂಗ ರಸ್ತೆ ನಿರ್ಮಾಣವಾದರೆ ಅದಕ್ಕೆ 20 ಸಾವಿರ ರೂ. ನಷ್ಟು ಟೋಲ್ ಪಾವತಿಸಬೇಕಾಗುತ್ತದೆ. ಸರ್ಕಾರ ಈ ಬಗ್ಗೆ ಚಿಂತನೆ ಮಾಡಬೇಕು ಎಂದು ಸಲಹೆ ನೀಡಿದರು.
ಬಿಹಾರ ಮತದಾರರಿಗೆ ಕಾಂಗ್ರೆಸ್ ಅಪಮಾನ
ಕಾಂಗ್ರೆಸ್ ತಾನು ಸೋತಾಗಲೆಲ್ಲ ಮತಗಳ್ಳತನ ಹಾಗೂ ಇವಿಎಂ ಸರಿ ಇಲ್ಲ ಎಂಬ ಆರೋಪ ಮಾಡುತ್ತದೆ. ಬಿಹಾರದಲ್ಲೇ ವೋಟ್ ಚೋರಿ ಬಗ್ಗೆ ಅಭಿಯಾನ ಮಾಡಲಾಗಿತ್ತು. ಅದನ್ನು ಮತದಾರರು ತಿರಸ್ಕರಿಸಿದ್ದಾರೆ. ಮತಪಟ್ಟಿ ಪರಿಷ್ಕರಣೆ ವೇಳೆ ಅನ್ಯದೇಶಗಳ ಜನರ ಹೆಸರು, ಸತ್ತವರ ಹೆಸರು ರದ್ದಾಗಿದೆ. ವಿಶೇಷ ಪರಿಷ್ಕರಣೆ ಸರಿ ಇಲ್ಲ ಎಂದರೆ ಯಾರೂ ನಂಬಲ್ಲ. ಕಾಂಗ್ರೆಸ್ ಎಲ್ಲ ರಾಜ್ಯಗಳಲ್ಲಿ ಮಕಾಡೆ ಮಲಗಿದ್ದು, ಕರ್ನಾಟಕದಲ್ಲೂ ಆಡಳಿತ ಕೊನೆಯಾಗಲಿದೆ. ವೋಟ್ ಚೋರಿ ಎಂದು ಹೇಳಿ ಬಿಹಾರದ ಜನತೆಗೆ ಅಪಮಾನ ಮಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಜನರ ಮುಂದೆ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.
ಬಿಹಾರದ ಚುನಾವಣೆಯಲ್ಲಿ ಗೆದ್ದಿದ್ದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಅವಕಾಶ ಬರುತ್ತಿತ್ತು. ಈಗ ಸಿಎಂ ಸಿದ್ದರಾಮಯ್ಯ ಬಲಿಷ್ಠವಾಗಿದ್ದಾರೆ. ರಾಹುಲ್ ಗಾಂಧಿಯ ಮಾತನ್ನು ಇನ್ನು ಯಾರೂ ಕೇಳುವುದಿಲ್ಲ. ಸಿದ್ದರಾಮಯ್ಯನವರ ಮಾತನ್ನು ರಾಹುಲ್ ಗಾಂಧಿ ಕೇಳಬೇಕಾಗುತ್ತದೆ ಎಂದು ಲೇವಡಿ ಮಾಡಿದರು.
-
Traffic Alert: ಬೆಂಗಳೂರು ಹೊರ ವರ್ತುಲ ಸವಾರರೇ ಗಮನಿಸಿ, ರಸ್ತೆ ಸಂಚಾರ ನಿರ್ಬಂಧ -
RCB: ಆರ್ ಸಿಬಿ ತಂಡದ ಅಧಿಕೃತ ಪೇಮೆಂಟ್ಸ್ ಪಾಲುದಾರ ನವಿ ಯುಪಿಐ, ಫ್ಯಾನ್ಸ್ ಗಮನಿಸಿ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು












Click it and Unblock the Notifications