ರಾಜ್ಯ ಸರ್ಕಾರಕ್ಕೆ 3 ಸಾವಿರ ಪಿಪಿಇ ಕಿಟ್ ನೀಡಿದ ಟಿವಿಎಸ್ ಮೋಟರ್ಸ್
ಬೆಂಗಳೂರು, ಏಪ್ರಿಲ್ 22: ಕೋವಿಡ್-19 ವಿರುದ್ಧ ನಿರ್ಣಾಯಕ ಹೋರಾಟ ನಡೆಸಿರುವ ಕರ್ನಾಟಕ ಸರ್ಕಾರದ ಜೊತೆಗೆ ಟಿವಿಎಸ್ ಮೋಟರ್ಸ್ ಕೈಜೋಡಿಸಿದೆ. ಸರ್ಕಾರದ ಕ್ರಮಗಳನ್ನು ಬೆಂಬಲಿಸುವುದರ ಜೊತೆಗೆ ಕೊರೊನಾ ವಾರಿಯರ್ಸ್ ಗೆ ಅಗತ್ಯವಾಗಿ ಬೇಕಿರುವ ವೈದ್ಯಕೀಯ ಸಾಧನಗಳನ್ನು ಟಿವಿಎಸ್ ಮೋಟರ್ಸ್ ಸಂಸ್ಥೆ ನೀಡಿದೆ.
ಟಿ.ವಿ.ಎಸ್ ಕಂಪನಿಯು ಸುಮಾರು 3,000 ಪಿಪಿಇ (ಪರ್ಸನಲ್ ಪ್ರೊಟೆಕ್ಟಿವ್ ಈಕ್ವಿಪ್ಮೆಂಟ್) ಮತ್ತು 10,000 ಎನ್95 ಮಾಸ್ಕ್ ಗಳನ್ನು ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಂದು ಹಸ್ತಾಂತರಿಸಿತು. ಕಂಪನಿಯು ಇದರ ಜೊತೆಗೆ ನಿಯಮಿತವಾಗಿ ಮಾಸ್ಕ್ ಗಳು, ಗ್ಲೌಸ್ಗಳು, ಸಿದ್ಧ ಆಹಾರದ ಪ್ಯಾಕೆಟ್ಗಳು, ಅಗತ್ಯ ವಸ್ತುಗಳನ್ನು ಪೊಲೀಸ್ ಸಿಬ್ಬಂದಿ, ಆರೋಗ್ಯ ಸೇವೆಯ ಕಾರ್ಯಕರ್ತರು ಮತ್ತು ವಲಸೆ ಜನರಿಗೆ ವಿತರಿಸುತ್ತಿದೆ. ಟಿ.ವಿ.ಎಸ್ ಮೋಟಾರ್ ಇದರ ಜೊತೆಗೆ ಸೋಂಕು ನಿವಾರಕಗಳ ಸಿಂಪಡೆಣೆಗೆ ಬೆಂಗಳೂರಿನ ಹೊರವಲಯದಲ್ಲಿ ವಿವಿಧ ವಾಹನಗಳನ್ನು ಸಹಾ ನಿಯೋಜಿಸಿದೆ.

ಶ್ರೀನಿವಾಸನ್ ಸರ್ವೀಸಸ್ ಟ್ರಸ್ಟ್ (ಎಸ್ಎಸ್ಟಿ) ಎಂಬುದು ಟಿ.ವಿ.ಎಸ್ ಮೋಟಾರ್ ಕಂಪನಿಯ ಸಾಮಾಜಿಕ ಸೇವಾ ವಿಭಾಗವಾಗಿದ್ದು, ಇಂದು ಸುಮಾರು 10,000ಕ್ಕೂ ಅಧಿಕ ಮಾಸ್ಕ್ ಗಳನ್ನು ಮತ್ತು 3,000ಕ್ಕೂ ಅಧಿಕ ಗ್ಲೌಸ್ಗಳನ್ನು ಈ ಮುಂಚೆ ಮೈಸೂರಿನ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಆರ್. ವೆಂಕಟೇಶ್ ಅವರಿಗೆ ಹಸ್ತಾಂತರಿಸಿದೆ.
10 ಲಕ್ಷ ಮಾಸ್ಕ್ ಗಳನ್ನು ಅಗತ್ಯ ಸೇವಾ ಕ್ಷೇತ್ರದ ಕಾರ್ಯಕರ್ತರು, ಆರೋಗ್ಯ ಸೇವಾ ಸಿಬ್ಬಂದಿ, ಪೊಲೀಸರಿಗೆ ವಿತರಿಸಲು ಉದ್ದೇಶಿಸಲಾಗಿದೆ. ಕೋವಿಡ್-19 ರೋಗ ಹಬ್ಬದಂತೆ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಸಂಸ್ಥೆ ವಿವಿಧ ಕಾರ್ಯಗಳನ್ನು ಹಮ್ಮಿಕೊಂಡಿದೆ.
{quiz_44}
-
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್












Click it and Unblock the Notifications