ಅವಳಿ ಹೆಣ್ಣು ಮಕ್ಕಳ ಅನುಮಾನಾಸ್ಪದ ಸಾವು
ಬೆಂಗಳೂರು, ಡಿಸೆಂಬರ್, 05: ಡಿಪಿಟಿ ಇಂಜೆಕ್ಷನ್ ಹಾಕಿಸಿಕೊಂಡು ಮನೆಗೆ ಬಂದ ಮರು ದಿನವೇ ಎರಡು ಅವಳಿ ಹೆಣ್ಣು ಮಕ್ಕಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಡಿಸೆಂಬರ್ 4ರ ಶುಕ್ರವಾರ ನಡೆದಿದ್ದು, ಪೋಷಕರು ಆಸ್ಪತ್ರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜಸ್ತಾನ ಮೂಲದ ಲುನೇಶ್ ಮತ್ತು ಹೇಮಲತಾ ದಂಪತಿಯ ಸಾನ್ವಿ ಮತ್ತು ದಿಶಾ ಸಾವನ್ನಪ್ಪಿದ ಎರಡು ಮುದ್ದಾದ ಅವಳಿ ಮಕ್ಕಳು. ಈ ಪ್ರಕರಣ ಗಿರಿನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.[ಇನ್ಮುಂದೆ ಮಕ್ಕಳಿಗೆ ಪೋಲಿಯೋ ಹನಿ ಜೊತೆ ಇಂಜೆಕ್ಷನ್]

ಬಾಪೂಜಿ ನಗರದ ಬಿಬಿಎಂಪಿ ಆರೋಗ್ಯ ಕೇಂದ್ರಕ್ಕೆ ದಂಪತಿ ಡಿಪಿಟಿ ಇಂಜೆಕ್ಷನ್ ಹಾಕಿಸಲು ತಮ್ಮ ಅವಳಿ ಮಕ್ಕಳನ್ನು ಡಿಸೆಂಬರ್ 3ರ ಗುರುವಾರ ಕರೆದುಕೊಂಡು ಹೋಗಿದ್ದಾರೆ. ಲಸಿಕೆ ಹಾಕಿಸಿಕೊಂಡು ಬಳಿಕ ಮನೆಗೆ ವಾಪಸ್ ಆಗಿದ್ದಾರೆ.
ರಾತ್ರಿಯಿಡೀ ಅಳುತ್ತಾ ನಿದ್ದೆಗೆಟ್ಟ ಮಕ್ಕಳು ಬೆಳಿಗ್ಗೆ ಹಾಲು ಕುಡಿದು ಮಲಗಿದ್ದಾರೆ. ಎಷ್ಟೇ ಹೊತ್ತಾದರೂ ಎದ್ದೇಳದ ಮಕ್ಕಳ ಬಗ್ಗೆ ಅನುಮಾನಗೊಂಡ ತಾಯಿ ಮಕ್ಕಳನ್ನು ಎಬ್ಬಿಸಿದ್ದಾರೆ. ಮಕ್ಕಳಿಂದ ಯಾವುದೇ ಪ್ರತಿಕ್ರಿಯೆ ಬಾರದಿರುವುದನ್ನು ಕಂಡ ತಾಯಿ ಕಂಗಾಲಾಗಿ ತಕ್ಷಣ ಸಮೀಪದ ಕ್ಲಿನಿಕ್ ಗೆ ಕರೆದುಕೊಂಡು ಹೋಗಿದ್ದಾರೆ.[ಎಲಿವೇಟರ್ ಬಾಗಿಲಿಗೆ ತಲೆಸಿಕ್ಕಿ ಬಾಲಕಿ ಸಾವು]
ಎಚ್ಚರಗೊಳ್ಳದ ಅವಳಿ ಮಕ್ಕಳನ್ನು ಪರೀಕ್ಷಿಸಿದ ವೈದ್ಯರು ಮಕ್ಕಳು ಸಾವನ್ನಪ್ಪಿರುವುದಾಗಿ ಹೇಳಿದ್ದಾರೆ. ಇದರಿಂದ ಆಕ್ರೋಶಗೊಂಡ ಪೊಲೀಸರು ಬಾಪೂಜಿ ನಗರದ ಬಿಬಿಎಂಪಿ ಆರೋಗ್ಯದ ಮೇಲೆ ಕಿಡಿಕಾರಿದ್ದು ಗಿರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ಐಪಿಸಿ ಸೆಕ್ಷನ್ 174 ಸಿ ಅಡಿ ಪ್ರಕರಣ ದಾಖಲಾಗಿದೆ.
ಈ ಅವಳಿ ಮಕ್ಕಳ ಸಾವು ಹಲವಾರು ಸಂಶಯಗಳಿಗೆ ಎಡೆಮಾಡಿಕೊಟ್ಟಿದ್ದು, ತಂದೆ ಲುನೇಶ್ ಗಂಡು ಮಕ್ಕಳ ಆಸೆಗಾಗಿ ಉಸಿರುಗಟ್ಟಿ ಸಾಯಿಸಿರಬಹುದೆಂಬ ಅನುಮಾನ ಮೂಡಿದೆ. ಮರಣೋತ್ತರ ಪರೀಕ್ಷೆಗೆ ಮೃತದೇಹಗಳನ್ನು ನೀಡಲು ಕುಟುಂಬದವರು ನಿರಾಕರಿಸಿರುವುದು ಈ ಶಂಕೆಗೆ ಕಾರಣವಾಗಿದೆ. ಅಲ್ಲದೇ ಡಿಪಿಟಿ ಇಂಜೆಕ್ಷನ್ ತೆಗೆದುಕೊಂಡ ಮಕ್ಕಳು ಸಾವನ್ನಪ್ಪಿರುವ ಉದಾಹರಣೆಯೇ ಇಲ್ಲ ಎಂದು ವೈದ್ಯರು ಸ್ಪಷ್ಟ ಪಡಿಸಿದ್ದಾರೆ.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications