ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್
ಬೆಂಗಳೂರು, ನವೆಂಬರ್ 20 : ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಗಣಪತಿ ಅವರದ್ದು ಆತ್ಮಹತ್ಯೆಯೊ ಅಥವಾ ಕೊಲೆಯೊ ಎಂಬ ಬಗ್ಗೆ ಅನುಮಾನಗಳು ಏಳತೊಡಗಿವೆ.
ಗಣಪತಿ ಅವರ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯೆ ಡಾ.ಶೈಲಜಾ ಅವರು ಸಿಬಿಐ ಅಧಿಕಾರಿಗಳ ಎದುರು ಸ್ಪೋಟಕ ಮಾಹಿತಿ ಹೊರಹಾಕಿದ್ದು, ಗಣಪತಿ ಅವರ ಆತ್ಮಹತ್ಯೆಯ ಹಿಂದೆ ಕಾಣದ ಕೈಗಳು ಕೆಲಸ ಮಾಡಿರುವ ಅನುಮಾನವನ್ನು ದಟ್ಟವಾಗಿಸಿವೆ.

'ಗಣಪತಿ ಅವರ ಮರಣೋತ್ತರ ಪರೀಕ್ಷೆ ನಡೆಸಿದಾಗ ಆತ್ಮಹತ್ಯೆ ಪ್ರಕರಣವೆಂದು ವರದಿ ನೀಡುವಂತೆ ಒತ್ತಡ ಇತ್ತು' ಎಂದು ಶೈಲಜಾ ಅವರು ಸಿಬಿಐ ಮುಂದೆ ಹೇಳಿಕೆ ನೀಡಿದ್ದಾರೆ.
ಶೈಲಜಾ ಅವರ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ಒತ್ತಡ ತಂದಿದ್ದ ಕಾಣದ ಕೈ ಕೆ.ಜೆ.ಜಾರ್ಜ್ ಇರಬಹುದೇ ಎಂದು ಊಹಿಸಲಾಗುತ್ತಿದೆ. ಸಿಬಿಐ ಜಾರ್ಜ್ ಅವರ ಮೇಲೆ ಎಫ್ಐಆರ್ ಕೂಡ ಹಾಕಿರುವುದು ಊಹೆಗೆ ಇನ್ನಷ್ಟು ಪುಷ್ಠಿ ನೀಡಿದೆ.
ಅಧಿವೇಶನದಲ್ಲಿ ಪ್ರತಿಧ್ವನಿ
ಭೋಜನ ವಿರಾಮದ ನಂತರ ಕಲಾಪ ಆರಂಭವಾದ ಕೂಡಲೇ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು ಡಿವೈಎಸ್ಪಿ ಆತ್ಮಹತ್ಯೆ ಪ್ರಕರಣ ತನಿಖೆಯಲ್ಲಾದ ಬೆಳವಣಿಗೆಯನ್ನು ಪ್ರಸ್ತಾಪಿಸಿ ಗದ್ದಲ ಎಬ್ಬಿಸಿದರು.
"ನಾವು ಪದೇ ಪದೇ ಹೇಳುತ್ತಿದ್ದೆವು ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಆದರೆ ಸರ್ಕಾರ ಸಮರ್ಥನೆ ಮಾಡುತ್ತಲೇ ಬಂದಿತು' ಎಂದು ಅವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಈ ಕೂಡಲೇ ಮುಖ್ಯಮಂತ್ರಿಗಳು ರಾಜಿನಾಮೆ ಕೊಡಬೇಕು ಇದರಲ್ಲಿ ಮುಖ್ಯಮಂತ್ರಿಗಳದ್ದೂ ಪಾಲಿದೆ ಎಂದು ಜಗದೀಶ್ ಶೆಟ್ಟರ್ ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಗೃಹಮಂತ್ರ ರಾಮಲಿಂಗಾ ರೆಡ್ಡಿ 'ಮಾಧ್ಯಮಗಳಲ್ಲಿ ಬಂದ ಮಾತ್ರಕ್ಕೆ ನಿಜ ಅಲ್ಲ. ತನಿಖೆ ನಡೆಯುತ್ತಿದೆ, ತನಿಖೆ ಮುಗಿಯಲಿ' ಎಂದರು. ಆದರೆ ಪಟ್ಟು ಸಡಿಲಿಸದ ವಿಪಕ್ಷ ಸದನದ ಬಾವಿಗಿಳಿದು ಪ್ರತಿಭಟನೆ ಪ್ರಾರಂಭಿಸಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications