ಬೆಂಗಳೂರು-ಹೊಸಪೇಟೆ ನಡುವೆ ಇಂಟರ್ಸಿಟಿ ರೈಲಿಗೆ ಒತ್ತಾಯ
ಬೆಂಗಳೂರು, ಜು.23: ವಿಶ್ವದ ಪ್ರಸಿದ್ಧ ತಾಣವಾದ ಹಂಪಿಯನ್ನು ಸಂಪರ್ಕಿಸುವ ಹೊಸಪೇಟೆಯಿಂದ ಬೆಂಗಳೂರಿನ ಮಧ್ಯೆ ರೈಲು ಸಂಚಾರ ಆರಂಭಿಸುವಂತೆ ಕರ್ನಾಟಕ ರೈಲ್ವೆ ಬಳಕೆದಾರರ ವೇದಿಕೆ ಟ್ವಿಟ್ಟರ್ ಮೂಲಕ ಮನವಿ ಮಾಡಿದೆ.
ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ, ಕೇಂದ್ರ ಸಚಿವ ಅನಂತಕುಮಾರ್, ಸಚಿವ ಡಿವಿ ಸದಾನಂದಗೌಡ, ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಮತ್ತು ಈ ಭಾಗದ ಕೆಲವು ಪ್ರತಿನಿಧಿಗಳನ್ನು ಟ್ಯಾಗ್ ಮಾಡಿ ಮನವಿ ಸಲ್ಲಿಸಿದ್ದಾರೆ.

ಹೊಸಪೇಟೆಯಿಂದ ಬಳ್ಳಾರಿ ಮಾರ್ಗವಾಗಿ ರಾಯದುರ್ಗ, ಚಳ್ಳಕೆರೆ, ಚಿತ್ರದುರ್ಗ, ಚಿಕ್ಕಜಾಜೂರು, ಬೀರೂರು, ಕಡೂರು ಅರಸೀಕೆರೆ ಹಾಗೂ ತುಮಕೂರು ಮೂಲಕ ಬೆಂಗಳೂರನ್ನು ಸಂಪರ್ಕಿಸಲು ನಿತ್ಯ ರೈಲು ಸಂಪರ್ಕ ಆರಂಭಿಸಬೇಕು. ಇದರಿಂದ ವಿಶ್ವವಿಖ್ಯಾತ ತಾಣವಾದ ಹಂಪಿಗೆ ಪ್ರವಾಸಕ್ಕೆ ಬರುವವರಿಗೆ ಅನುಕೂಲವಾಗಲಿದೆ.
ಮಾನ್ಯರೇ, ಹೊಸಪೇಟೆ ಬೆಂಗಳೂರು ನಡುವೆ ಹಗಲಿನಲ್ಲಿ ಸಂಚರಿಸುವ ಒಂದು ರೈಲು ಕೂಡ ಇಂದಿಗೂ ಇಲ್ಲ ದಯವಿಟ್ಟು ಒಂದು ಹೊಸ ರೈಲನ್ನು ಕೊಡಿಸಿ.@AnanthKumar_BJP @sriramulubjp @CMofKarnataka @JoshiPralhad @DVSBJP @BSYBJP @ShobhaBJP @BJP4India @BJP4Karnataka @INCKarnataka #Hospete #Ballari #Bengaluru #Karnataka pic.twitter.com/s7XePqavR5
— Karnataka Rail Users (@KARailway) July 23, 2018
ದೇಶವಿದೇಶಗಳಿಂದ ನಿತ್ಯ ಸಹಸ್ರಾರು ಜನರು ಹಂಪಿಗೆ ಭೇಟಿ ನೀಡುತ್ತಿದ್ದು, ರಾಜಧಾನಿ ಬೆಂಗಳೂರಿನಿಂದ ಸರಿಯಾದ ರೈಲು ಸಂಪರ್ಕವಿಲ್ಲ ಹೀಗಾಗಿ ನಿತ್ಯ ಇಂಟರ್ಸಿಟಿ ರೈಲು ಆರಂಭಿಸಿದರೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹಂಪಿ ಅಭಿವೃದ್ಧಿಗೆ ಮತ್ತಷ್ಟು ನೆರವಾಗಲಿದೆ. ಹಾಗೂ ಈ ಭಾಗದ ಪ್ರಯಾಣಿಕರಿಗೂ ಅನುಕೂಲವಾಗಲಿದೆ ಎಂದು ರೈಲ್ವೆ ಬಳಕೆದಾರರ ವೇದಿಕೆ ತಿಳಿಸಿದೆ.
ಹೊಸ ಪೇಟೆ ಹಾಗೂ ಬೆಂಗಳೂರು ನಡುವೆ ಹಗಲಿನಲ್ಲಿ ಸಂಚರಿಸುವ ಒಂದೂ ರೈಲೂ ಕೂಡ ಇಲ್ಲ, ಈ ಮಾರ್ಗದಲ್ಲಿ ಒಂದು ರೈಲಾದರೂ ಸಂಚರಿಸುವಂತೆ ಮಾಡಿ ಎಂದು ಮನವಿ ಮಾಡಿದ್ದಾರೆ.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications