ರಾಹುಲ್ ಹಣಿಯಲು ಜಯಂತಿ ಪತ್ರ ಸಾಕು : ಸ್ವಾಮಿ ಟ್ವೀಟ್
ಬೆಂಗಳೂರು, ಜ.30: ಗಾಂಧಿ ಕುಟುಂಬದ ಸಮೀಪವರ್ತಿ,ಪಕ್ಷದ ನಿಷ್ಠಾವಂತೆ ಮತ್ತು ಕೇಂದ್ರದ ಮಾಜಿ ಸಚಿವೆ ಜಯಂತಿ ನಟರಾಜನ್ ಪಕ್ಷ ತೊರೆಯುವುದಕ್ಕೆ ಹೇಗೆ ಪ್ರತಿಕ್ರಿಯಿಸಬೇಕು ಎಂದು ತಿಳಿಯದೆ ಕಾಂಗ್ರೆಸ್ ನಾಯಕರು ನಗೆ ಪಾಟಲಿಗೆ ಗುರಿಯಾಗಿದ್ದಾರೆ. ಈ ಬೆಳವಣಿಗೆ ಕಾಂಗ್ರೆಸ್ಗೆ ಭಾರೀ ಮುಜುಗರ ಸೃಷ್ಟಿಸಿದ್ದರೆ, ಸಾಮಾಜಿಕ ಜಾಲ ತಾಣ ಟ್ವಿಟ್ಟರ್ ನಲ್ಲಿ ಭಾರಿ ಚರ್ಚೆಗೊಳಪಟ್ಟಿದೆ.
ಯುಪಿಎ-2ರ ಅವಧಿಯಲ್ಲಿ ಕೇಂದ್ರ ಪರಿಸರ ಮತ್ತು ಅರಣ್ಯ ಖಾತೆಯ ಸಚಿವರಾಗಿದ್ದ ಜಯಂತಿ ನಟರಾಜನ್ ಗಾಂಧಿ ಕುಟುಂಬದ ಅತ್ಯಂತ ನಿಷ್ಠಾವಂತೆಯಾಗಿದ್ದ ಕಾರಣಕ್ಕೆ ಸಚಿಸ್ಥಾನ ಸಿಕ್ಕಿತ್ತು.[ರಾಹುಲ್ ವಿರುದ್ಧ ಕಿಡಿಕಾರಿ ಕಾಂಗ್ರೆಸ್ ತೊರೆದ ಜಯಂತಿ]
ಅದರೆ, ಕಾರ್ಪೊರೇಟ್ ಕಂಪನಿಗಳ ಪರ ನಿಲ್ಲದೆ ಪರಿಸರವಾದಿಯಂತೆ ರಾಹುಲ್ ವಿರುದ್ಧ ತಿರುಗಿಬಿದ್ದಿದ್ದರು. ಸುಮಾರು ಐದು ಪುಟಗಳ ಪತ್ರದಲ್ಲಿ ಕಳೆದ 11 ತಿಂಗಳಿನಿಂದ ತಾವು ಅನುಭವಿಸುತ್ತಿರುವ ನೋವು, ಸಂಕಟ, ಪಕ್ಷದಲ್ಲಿ ಉಂಟಾಗುತ್ತಿರುವ ಅವಮಾನ, ಮುಜುಗರ ಸೇರಿದಂತೆ ಪ್ರತಿಯೊಂದು ಘಟನೆಗಳನ್ನು ಬಿಡಿಸಿಟ್ಟಿದ್ದರು. [ಜಯಂತಿ ನಟರಾಜನ್ ಯಾರು?]
ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಭೇಟಿ ಸಾಧ್ಯವಾಗದ ಹಿನ್ನೆಲೆಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಪಕ್ಷ ತೊರೆಯುವುದಾಗಿ ಘೋಷಿಸಿದರು. ಈ ಎಲ್ಲಾ ಘಟನೆ ನಂತರವೂ ಕಾಂಗ್ರೆಸ್ ಹಿರಿಯ ನಾಯಕರನ್ನು ಸಮರ್ಥಿಸಿಕೊಳ್ಳುತ್ತಿರುವ ಮೋಯ್ಲಿ, ದಿಗ್ವಿಜಯ್ ಸಿಂಗ್ ರಂಥ ನಾಯಕರಿಗೆ ಸಾರ್ವಜನಿಕರು ಟ್ವಿಟ್ಟರ್ ನಲ್ಲಿ ಛೀಮಾರಿ ಹಾಕಿದ್ದಾರೆ.ರಾಜಕೀಯ ಮುಖಂಡರು, ಸಾರ್ವಜನಿಕರ ಪ್ರತಿಕ್ರಿಯೆಗಳ ಸಂಗ್ರಹ ಇಲ್ಲಿದೆ...

ಸೋನಿಯಾಗಾಂಧಿಗೆ ಬರೆದ ಪತ್ರ ಸಾಕು
ಕಾರ್ಪೋರೇಟ್ ವಿರುದ್ಧ ಲಾಬಿ ನಡೆಸಿರುವ ರಾಹುಲ್ ಗಾಂಧಿ ಅವರ ನಿಜ ಬಣ್ಣ ಬಯಲು ಮಾಡಲು ಅವರ ಜಯಂತಿ ಪತ್ರ ಸಾಕು ಎಂದು ಬಿಜೆಪಿ ನಾಯಕ ಸುಬ್ರಮಣ್ಯ ಸ್ವಾಮಿ ಎಎನ್ ಐ ಜೊತೆ ಮಾತನಾಡುತ್ತಾ ಹೇಳಿದ್ದಾರೆ.
|
ಕಾಂಗ್ರೆಸ್ ಭ್ರಷ್ಟಾಚಾರದ ಬಣ್ಣ ಬಯಲು
ಕಾಂಗ್ರೆಸ್ ಭ್ರಷ್ಟಾಚಾರದ ಬಣ್ಣ ಬಯಲು ಮಾಡಲು ಸುಜಾತಾ ಅವರ ನೆರವು ಬೇಕಾದರೆ ಪಡೆದುಕೊಳ್ಳುವೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಕೇಸು ದಾಖಲಿಸಲು ಸುಜಾತಾ ಅವರು ರಾಹುಲ್ ವಿರುದ್ಧ ಬರೆದಿರುವ ಪತ್ರ ನೆರವಾಗಲಿದೆ ಎಂದು ಸುಬ್ರಮಣ್ಯ ಸ್ವಾಮಿ ಹೇಳಿದ್ದಾರೆ.
| Array |
ಮಾಜಿ ಸಚಿವ ವೀರಪ್ಪ ಮೊಯ್ಲಿರಿಂದ ಸಮರ್ಥನೆ
ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ಎಂದಿಗೂ ಯಾರಿಗೂ ಕೇಡು ಬಯಸಿಲ್ಲ. ಸುಜಾತಾ ಅವರು ನಿಭಾಯಿಸುತ್ತಿದ್ದ ಪರಿಸರ ಖಾತೆಯಲ್ಲಿ ಮೂಗು ತೂರಿಸಿಲ್ಲ ಎಂದು ಮೋಯ್ಲಿ ಸಮರ್ಥನೆ ನೀಡಿದ್ದಾರೆ.
| Array |
ಮೊಯ್ಲಿ ಸಮರ್ಥನೆಗೆ ಸಾರ್ವಜನಿಕರ ಪ್ರತಿಕ್ರಿಯೆ
ಮೊಯ್ಲಿ ಸಮರ್ಥನೆಗೆ ಸಾರ್ವಜನಿಕರ ಪ್ರತಿಕ್ರಿಯೆ ಹರಿದು ಬರುತ್ತಿದ್ದು, ಜೋಕ್ ಆಫ್ ದಿ ಡೇ, ಪಿಜೆ ಆಫ್ ದಿ ಸೆಂಚುರಿ ಎಂದು ಗೇಲಿ ಮಾಡುತ್ತಿದ್ದಾರೆ.
|
ಜಯಂತಿ ಕಾಂಗ್ರೆಸ್ ಗೆ ದ್ರೋಹ ಬಗೆದಿದ್ದಾರೆ
ಜಯಂತಿ ಕಾಂಗ್ರೆಸ್ ಗೆ ದ್ರೋಹ ಬಗೆದಿದ್ದಾರೆ. ವಕ್ತಾರೆಯಾಗಿದ್ದು ಮೋದಿ ವಿರುದ್ಧ ಸ್ಕೂಪ್ ಗೇಟ್ ಪ್ರಕರಣದ ಬಗ್ಗೆ ಮಾತನಾಡಲು ನಿರಾಕರಿಸಿದ್ದೇಕೆ ಎಂದು ಅಭಿಷೇಕ್ ಸಿಂಘ್ವಿ ಪ್ರಶ್ನಿಸಿದ್ದಾರೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications