ಟ್ವಿಟರ್ನಲ್ಲಿ ಚುನಾವಣಾ ಕಾವು ಹೆಚ್ಚಿಸಿದ ಇಬ್ಬರು ಗೌಡರು!
Recommended Video

ಬೆಂಗಳೂರು, ಏಪ್ರಿಲ್ 11 : ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಮತ್ತು ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳ ನಡುವೆ ಟ್ವಿಟರ್ನಲ್ಲಿ ಮಾತಿನ ಸಮರ ನಡೆಯುತ್ತಿದೆ. ಏಪ್ರಿಲ್ 18ರಂದು ಬೆಂಗಳೂರು ಉತ್ತರ ಕ್ಷೇತ್ರದ ಚುನಾವಣೆ ನಡೆಯಲಿದೆ.
ಡಿ.ವಿ.ಸದಾನಂದ ಗೌಡ ಮತ್ತು ಕೃಷ್ಣ ಬೈರೇಗೌಡ ಅವರು ಟ್ವೀಟ್ಗಳನ್ನು ಮಾಡುವ ಮೂಲಕ ಚುನಾವಣಾ ಕಾವನ್ನು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಿಸಿದ್ದಾರೆ. ಡಿ.ವಿ.ಸದಾನಂದ ಗೌಡರು ಚರ್ಚೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಎಳೆದು ತಂದಿದ್ದಾರೆ.
'ಮಾನ್ಯ ಸಿದ್ದರಾಮಯ್ಯನವರೇ ನಿಮ್ಮ ಸಾಂದರ್ಭಿಕ ಅಭ್ಯರ್ಥಿ ಕೇಳಿದ ಪ್ರಶ್ನೆಗೆ ನಾನು ಉತ್ತರ ಕೊಟ್ಟರೆ ಅವರು 'ಉತ್ತರ' ಬಿಟ್ಟು ಹೋಗುವ ಸ್ಥಿತಿಯಲ್ಲಿ ಇದ್ದಾರೆ. ನಿಮ್ಮ ಮುಂದಿನ 'ಉತ್ತರ' ಪ್ರವಾಸ ಯಾವಾಗ?' ಎಂದು ಡಿ.ವಿ.ಸದಾನಂದ ಗೌಡರು ಪ್ರಶ್ನೆ ಮಾಡಿದ್ದಾರೆ.
'ತಾವು ಚರ್ಚೆಗೆ ಗೈರಾದಿರಿ. ಕಳೆದ ಐದು ವರ್ಷಗಳಿಂದ ತಾವು ಕ್ಷೇತ್ರದಿಂದ ಗೈರಾದದ್ದು ಗೊತ್ತಿರುವಂತದ್ದೇ, ಆದರೆ ತಾವು ಇಂದು ಚರ್ಚೆಗಾದರೂ ಬರಬಹುದು ಎಂದು ನಿರೀಕ್ಷಿಸಿದ್ದೆ' ಎಂದು ಕೃಷ್ಣ ಬೈರೇಗೌಡ ಅವರು ಸದಾನಂದ ಗೌಡರಿಗೆ ತಿರುಗೇಟು ನೀಡಿದ್ದಾರೆ....
|
ಸದಾನಂದ ಗೌಡರಿಗೆ ಟಾಂಗ್
ಐದು ವರ್ಷಗಳಿಂದ ತಾವು ಕ್ಷೇತ್ರದಿಂದ ಗೈರಾದದ್ದು ಗೊತ್ತಿರುವಂತದ್ದೇ, ಆದರೆ ತಾವು ಇಂದು ಚರ್ಚೆಗಾದರೂ ಬರಬಹುದು ಎಂದು ನಿರೀಕ್ಷಿಸಿದ್ದೆ ಎಂದು ಕೃಷ್ಣ ಬೈರೇಗೌಡ ಟ್ವೀಟ್ ಮಾಡಿದ್ದಾರೆ.
|
ತಿರುಗೇಟು ಕೊಟ್ಟ ಡಿವಿಎಸ್
ಮಾನ್ಯ ಕೃಷ್ಣ ಬೈರೇ ಗೌಡರೇ ಅದ್ಯಾಕೆ ಮತ್ತೆ ತಪ್ಪು ಮಾಹಿತಿ ನೀಡ್ತೀರಾ ? ಇದು ನಿಮ್ಮ ಜಾಯಮಾನವೋ ? ಅಥವಾ ಚುನಾವಣಾ ಗಿಮಿಕೊ? ನಾವು ಮುಖಾಮುಖಿಯಾಗಿದ್ದು ಮರೆತು ಹೋಯಿತೇ ಎಂದು ಸದಾನಂದ ಗೌಡರು ಪ್ರಶ್ನೆ ಮಾಡಿದ್ದಾರೆ.
|
ನನಗೆ ನಿರಾಸೆ ಉಂಟು ಮಾಡಿದೆ
ಬಿ ಪ್ಯಾಕ್ನಂತಹ ಪ್ರತಿಷ್ಠಿತ ಸಂಸ್ಥೆ ಕ್ಷೇತ್ರಕ್ಕೆ ಸಂಬಂದಿಸಿದ ವಿಚಾರಗಳನ್ನು ಚರ್ಚಿಸಲು ವೇದಿಕೆಯನ್ನು ನಿರ್ಮಿಸಿದಾಗ ತಾವು ಕ್ಷೇತ್ರಕ್ಕೆ ಕೊಟ್ಟ ಕೊಡುಗೆಗಳನ್ನು ತಿಳಿಸಲು ಬರುತ್ತಿರಿ ಎಂದು ಭಾವಿಸಿದ್ದೆ ಎಂದು ಕೃಷ್ಣ ಬೈರೇಗೌಡ ಟ್ವೀಟ್ ಮಾಡಿದ್ದಾರೆ.
|
ಸತ್ಯ ಒಪ್ಪಿಕೊಂಡಿದ್ದಕ್ಕೆ ಸಂತಸ
ಒಂದು ಸತ್ಯ ಒಪ್ಪಿಕೊಂಡಿರಿ ಸಂತೋಷವಾಯಿತು. ಭೇಟಿನೇ ಆಗಿಲ್ಲ ಚರ್ಚೆನೇ ಆಗಿಲ್ಲ ಅನ್ನೋ ಅಪವಾದ ಸುಳ್ಳು ಅನ್ನೋದು ಮತದಾರರಿಗೆ ಗೊತ್ತಾಯಿತು ಎಂದು ಸದಾನಂದ ಗೌಡರು ಟ್ವೀಟ್ ಮಾಡಿದ್ದಾರೆ
|
ಸಿದ್ದರಾಮಯ್ಯಗೆ ಪ್ರಶ್ನೆ
ಚರ್ಚೆಗೆ ಸಿದ್ದರಾಮಯ್ಯ ಅವರನ್ನು ಎಳೆದು ತರಲಾಗಿದೆ. 'ಮಾನ್ಯ ಸಿದ್ದರಾಮಯ್ಯನವರೇ ನಿಮ್ಮ ಸಾಂದರ್ಭಿಕ ಅಭ್ಯರ್ಥಿ ಕೇಳಿದ ಪ್ರಶ್ನೆಗೆ ನಾನು ಉತ್ತರ ಕೊಟ್ಟರೆ ಅವರು 'ಉತ್ತರ' ಬಿಟ್ಟು ಹೋಗುವ ಸ್ಥಿತಿಯಲ್ಲಿ ಇದ್ದಾರೆ. ನಿಮ್ಮ ಮುಂದಿನ 'ಉತ್ತರ' ಪ್ರವಾಸ ಯಾವಾಗ?' ಎಂದು ಡಿ.ವಿ.ಸದಾನಂದ ಗೌಡರು ಪ್ರಶ್ನೆ ಮಾಡಿದ್ದಾರೆ.
-
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications