ಟ್ವಿಟರ್ನಲ್ಲಿ ಚುನಾವಣಾ ಕಾವು ಹೆಚ್ಚಿಸಿದ ಇಬ್ಬರು ಗೌಡರು!
Recommended Video

ಬೆಂಗಳೂರು, ಏಪ್ರಿಲ್ 11 : ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಮತ್ತು ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳ ನಡುವೆ ಟ್ವಿಟರ್ನಲ್ಲಿ ಮಾತಿನ ಸಮರ ನಡೆಯುತ್ತಿದೆ. ಏಪ್ರಿಲ್ 18ರಂದು ಬೆಂಗಳೂರು ಉತ್ತರ ಕ್ಷೇತ್ರದ ಚುನಾವಣೆ ನಡೆಯಲಿದೆ.
ಡಿ.ವಿ.ಸದಾನಂದ ಗೌಡ ಮತ್ತು ಕೃಷ್ಣ ಬೈರೇಗೌಡ ಅವರು ಟ್ವೀಟ್ಗಳನ್ನು ಮಾಡುವ ಮೂಲಕ ಚುನಾವಣಾ ಕಾವನ್ನು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಿಸಿದ್ದಾರೆ. ಡಿ.ವಿ.ಸದಾನಂದ ಗೌಡರು ಚರ್ಚೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಎಳೆದು ತಂದಿದ್ದಾರೆ.
'ಮಾನ್ಯ ಸಿದ್ದರಾಮಯ್ಯನವರೇ ನಿಮ್ಮ ಸಾಂದರ್ಭಿಕ ಅಭ್ಯರ್ಥಿ ಕೇಳಿದ ಪ್ರಶ್ನೆಗೆ ನಾನು ಉತ್ತರ ಕೊಟ್ಟರೆ ಅವರು 'ಉತ್ತರ' ಬಿಟ್ಟು ಹೋಗುವ ಸ್ಥಿತಿಯಲ್ಲಿ ಇದ್ದಾರೆ. ನಿಮ್ಮ ಮುಂದಿನ 'ಉತ್ತರ' ಪ್ರವಾಸ ಯಾವಾಗ?' ಎಂದು ಡಿ.ವಿ.ಸದಾನಂದ ಗೌಡರು ಪ್ರಶ್ನೆ ಮಾಡಿದ್ದಾರೆ.
'ತಾವು ಚರ್ಚೆಗೆ ಗೈರಾದಿರಿ. ಕಳೆದ ಐದು ವರ್ಷಗಳಿಂದ ತಾವು ಕ್ಷೇತ್ರದಿಂದ ಗೈರಾದದ್ದು ಗೊತ್ತಿರುವಂತದ್ದೇ, ಆದರೆ ತಾವು ಇಂದು ಚರ್ಚೆಗಾದರೂ ಬರಬಹುದು ಎಂದು ನಿರೀಕ್ಷಿಸಿದ್ದೆ' ಎಂದು ಕೃಷ್ಣ ಬೈರೇಗೌಡ ಅವರು ಸದಾನಂದ ಗೌಡರಿಗೆ ತಿರುಗೇಟು ನೀಡಿದ್ದಾರೆ....
|
ಸದಾನಂದ ಗೌಡರಿಗೆ ಟಾಂಗ್
ಐದು ವರ್ಷಗಳಿಂದ ತಾವು ಕ್ಷೇತ್ರದಿಂದ ಗೈರಾದದ್ದು ಗೊತ್ತಿರುವಂತದ್ದೇ, ಆದರೆ ತಾವು ಇಂದು ಚರ್ಚೆಗಾದರೂ ಬರಬಹುದು ಎಂದು ನಿರೀಕ್ಷಿಸಿದ್ದೆ ಎಂದು ಕೃಷ್ಣ ಬೈರೇಗೌಡ ಟ್ವೀಟ್ ಮಾಡಿದ್ದಾರೆ.
|
ತಿರುಗೇಟು ಕೊಟ್ಟ ಡಿವಿಎಸ್
ಮಾನ್ಯ ಕೃಷ್ಣ ಬೈರೇ ಗೌಡರೇ ಅದ್ಯಾಕೆ ಮತ್ತೆ ತಪ್ಪು ಮಾಹಿತಿ ನೀಡ್ತೀರಾ ? ಇದು ನಿಮ್ಮ ಜಾಯಮಾನವೋ ? ಅಥವಾ ಚುನಾವಣಾ ಗಿಮಿಕೊ? ನಾವು ಮುಖಾಮುಖಿಯಾಗಿದ್ದು ಮರೆತು ಹೋಯಿತೇ ಎಂದು ಸದಾನಂದ ಗೌಡರು ಪ್ರಶ್ನೆ ಮಾಡಿದ್ದಾರೆ.
|
ನನಗೆ ನಿರಾಸೆ ಉಂಟು ಮಾಡಿದೆ
ಬಿ ಪ್ಯಾಕ್ನಂತಹ ಪ್ರತಿಷ್ಠಿತ ಸಂಸ್ಥೆ ಕ್ಷೇತ್ರಕ್ಕೆ ಸಂಬಂದಿಸಿದ ವಿಚಾರಗಳನ್ನು ಚರ್ಚಿಸಲು ವೇದಿಕೆಯನ್ನು ನಿರ್ಮಿಸಿದಾಗ ತಾವು ಕ್ಷೇತ್ರಕ್ಕೆ ಕೊಟ್ಟ ಕೊಡುಗೆಗಳನ್ನು ತಿಳಿಸಲು ಬರುತ್ತಿರಿ ಎಂದು ಭಾವಿಸಿದ್ದೆ ಎಂದು ಕೃಷ್ಣ ಬೈರೇಗೌಡ ಟ್ವೀಟ್ ಮಾಡಿದ್ದಾರೆ.
|
ಸತ್ಯ ಒಪ್ಪಿಕೊಂಡಿದ್ದಕ್ಕೆ ಸಂತಸ
ಒಂದು ಸತ್ಯ ಒಪ್ಪಿಕೊಂಡಿರಿ ಸಂತೋಷವಾಯಿತು. ಭೇಟಿನೇ ಆಗಿಲ್ಲ ಚರ್ಚೆನೇ ಆಗಿಲ್ಲ ಅನ್ನೋ ಅಪವಾದ ಸುಳ್ಳು ಅನ್ನೋದು ಮತದಾರರಿಗೆ ಗೊತ್ತಾಯಿತು ಎಂದು ಸದಾನಂದ ಗೌಡರು ಟ್ವೀಟ್ ಮಾಡಿದ್ದಾರೆ
|
ಸಿದ್ದರಾಮಯ್ಯಗೆ ಪ್ರಶ್ನೆ
ಚರ್ಚೆಗೆ ಸಿದ್ದರಾಮಯ್ಯ ಅವರನ್ನು ಎಳೆದು ತರಲಾಗಿದೆ. 'ಮಾನ್ಯ ಸಿದ್ದರಾಮಯ್ಯನವರೇ ನಿಮ್ಮ ಸಾಂದರ್ಭಿಕ ಅಭ್ಯರ್ಥಿ ಕೇಳಿದ ಪ್ರಶ್ನೆಗೆ ನಾನು ಉತ್ತರ ಕೊಟ್ಟರೆ ಅವರು 'ಉತ್ತರ' ಬಿಟ್ಟು ಹೋಗುವ ಸ್ಥಿತಿಯಲ್ಲಿ ಇದ್ದಾರೆ. ನಿಮ್ಮ ಮುಂದಿನ 'ಉತ್ತರ' ಪ್ರವಾಸ ಯಾವಾಗ?' ಎಂದು ಡಿ.ವಿ.ಸದಾನಂದ ಗೌಡರು ಪ್ರಶ್ನೆ ಮಾಡಿದ್ದಾರೆ.
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ












Click it and Unblock the Notifications