ಬೆಂಗಳೂರು ragging ಪ್ರಕರಣ, ವಿದ್ಯಾರ್ಥಿ ಬಂಧನ

raggingಗೆ ಒಳಗಾರ ಜೆಮ್ಷೆಡ್ಪುರ ಮೂಲದ ಸುಧೀಶ್ ಕುಮಾರ್ ಮೊಂಡಲ್ ಹಾಗೂ ಭೂಪಾಲ್ನ ಸೀಮಂತ್ ದುಬೇ ನೀಡಿದ ದೂರಿನ ಅನ್ವಯ, ಮತ್ತು ಹರೀಶ್ ಎಂಬ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತಲೆ ಮರಿಸಿಕೊಂಡಿರುವ ವರುಣ್ ಗಾಗಿ ಹುಡುಕಾಟ ಪ್ರಾರಂಭವಾಗಿದೆ.
ಭಾನುವಾರ ವರುಣ್ ಹಾಗೂ ಹರೀಶ್, ಸೀಮಂತ್ ಮತ್ತು ಸುಧೀಶ್ ಕುಮಾರ್ ಅವರನ್ನು ಮತ್ತಿಕೆರೆಯಲ್ಲಿರುವ ಪೇಯಿಂಗ್ ಗೆಸ್ಟ್ಗೆ ಕರೆದೊಯ್ದ. ವಿವಸ್ತ್ರಗೊಳಿಸಿ ನರ್ತಿಸುವಂತೆ ಹೇಳಿದರು. ನಿರಾಕರಿಸಿದ್ದರಿಂದ ಹಲ್ಲೆ ನಡೆಸಿದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಹಿರಿಯ ವಿದ್ಯಾರ್ಥಿಗಳ ಹಲ್ಲೆಯಿಂದ ಗಾಯಗೊಂಡಿರುವ ಸೀಮಂತ್ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸುಧೀಶ್ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ. ಘಟನೆ ಬಗ್ಗೆ ವಿವರಣೆ ನೀಡುವಂತೆ ಕಾಲೇಜಿನ ಆಡಳಿತ ಮಂಡಳಿಗೆ ಪೊಲೀಸರು ಸೂಚನೆ ನೀಡಿದ್ದಾರೆ.
ವಿದ್ಯಾರ್ಥಿಗಳ ವಿರುದ್ಧ ಕಾನೂನು ಬಾಹಿರವಾಗಿ ಬಂಧಿಸಿಡುವುದು (ಐಪಿಸಿ 341 ಮತ್ತು 342), ಹಲ್ಲೆ (ಐಪಿಸಿ 323), ಉದ್ದೇಶ ಪೂರ್ವಕವಾಗಿ ಶಾಂತಿ ಕದಡಿದ ಆರೋಪದ (ಐಪಿಸಿ 504) ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಸದಾಶಿವನಗರ ಪೊಲೀಸರು ಹೇಳಿದ್ದಾರೆ.
ಬೆಂಗಳೂರು ವಿವಿ ಕುಲಪತಿ ಡಾ.ಬಿ.ತಿಮ್ಮೇಗೌಡ ಸೋಮವಾರ ಸಂಜೆ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ, ಸೀಮಂತ್ ಯೋಗಕ್ಷೇಮ ವಿಚಾರಿಸಿದರು. ಘಟನೆಯ ಕುರಿತು ಕಾಲೇಜು ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳವುದಾಗಿ ಅವರು ಹೇಳಿದ್ದಾರೆ.
ಘಟನೆಯ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಶ್ರೀಕಾಂತ್ ಎಂಬ ವಿದ್ಯಾರ್ಥಿಯನ್ನು ಅಮಾನತುಗೊಳಿಸಿದ್ದ ಆದೇಶವನ್ನು ಹಿಂಪಡೆಯುವಂತೆ ಕಾಲೇಜಿನ ಆಡಳಿತ ಮಂಡಳಿಗೆ ಸೂಚಿಸಲಾಗುವುದು ಎಂದು ತಿಳಿಸಿದರು. (ಎಂಎಸ್ ರಾಮಯ್ಯ ಕಾಲೇಜಿನಲ್ಲಿ ragging)
ಎಂ.ಎಸ್.ರಾಮಯ್ಯ ಕಾಲೇಜಿನ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹೆಚ್ಚುವರಿ ಪೊಲೀಸ್ ಕಮೀಷನರ್ ಕಮಲ್ ಪಂಥ್, ವಿದ್ಯಾರ್ಥಿಗಳು ಹಲ್ಲೆ ನಡೆದಿರುವ ಬಗ್ಗೆ ದೂರಿನಲ್ಲಿ ತಿಳಿಸಿದ್ದಾರೆ. ragging ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ. ಈ ಕುರಿತು ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications