ಬಿಬಿಎಂಪಿ: ಕಳಪೆ ಕಾಮಗಾರಿ ಕಾರಣಕ್ಕೆ ಇಬ್ಬರು ಅಧಿಕಾರಿಗಳು ಅಮಾನತು
ಬೆಂಗಳೂರು, ಸೆಪ್ಟಂಬರ್ 30: ನ್ಯೂ ಬಿಇಎಲ್ ರಸ್ತೆಯಲ್ಲಿ ಕಳಪೆ ಕಾಮಗಾರಿ ನಡೆದಿದ್ದು, ಕರ್ತವ್ಯ ಲೋಪದ ಹಿನ್ನೆಲೆ ಇಬ್ಬರು ಬಿಬಿಎಂಪಿ ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಒಳಚರಂಡಿ ಹೂಳು ತೆಗೆಯುವಲ್ಲಿ ವಿಫಲವಾದ ಕಾರಣಕ್ಕೆ ಬಿಬಿಎಂಪಿ ರಸ್ತೆ ಮೂಲಸೌಕರ್ಯ ವಿಭಾಗದ ಮುಖ್ಯ ಎಂಜಿನಿಯರ್ ಬಿ.ಎಸ್.ಪ್ರಹ್ಲಾದ್ ಅವರು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎಂ.ಸಿ.ಕೃಷ್ಣೇಗೌಡ ಮತ್ತು ಸಹಾಯಕ ಎಂಜಿನಿಯರ್ ವಿಷಕಂಠ ಮೂರ್ತಿ ಅವರನ್ನು ಅಮಾನತುಗೊಳಿಸಿದ್ದಾರೆ.
ಈ ಹಿಂದೆಯೇ ನ್ಯೂ ಬಿಇಎಲ್ ರಸ್ತೆಯಲ್ಲಿನ ಗುಂಡಿಗಳನ್ನು ನಿಗದಿತ ಸಮಯಕ್ಕೆ ಸರಿಪಡಿಸಲು ಸೂಚಿಸಲಾಗಿತ್ತು. ಅದರಂತೆ ಕಾಮಗಾರಿ ನಡೆಸಿದ ಪಾಲಿಕೆ ಅಧಿಕಾರಿ ಮತ್ತು ಸಿಬ್ಬಂದಿಯು ಒಳಚರಂಡಿಯಲ್ಲಿನ ಹೂಳು ತೆಗೆಯುವುದು, ರಸ್ತೆಗುಂಡಿಗಳನ್ನು ಮುಚ್ಚುವ ಕೆಲಸ ಮಾಡಿತ್ತು. ಆದರೆ ಈ ಕೆಲದಲ್ಲಿ ಗುಣಮಟ್ಟ ಕಾಯ್ದುಕೊಳ್ಳದ ಹಿನ್ನೆಲೆ ಕಳಪೆ ಕಾಮಗಾರಿ ಸಾಬೀತಾಗಿತ್ತು.

ಇದಾದ ಬಳಿಕ ನಡೆದ ಕಳೆದ ತಿಂಗಳ ವಿವಿಧ ಇಲಾಖೆಗಳ ಸಮನ್ವಯ ಸಮಿತಿ ಸಭೆಯಲ್ಲಿ ಬೆಂಗಳೂರು ಸಂಚಾರ ವಿಭಾಗದ ಹೆಚ್ಚುವರಿ ಆಯುಕ್ತ ಬಿ.ಆರ್.ರವಿಕಾಂತೇಗೌಡ ಅವರು ಕಳೆಪೆ ಕಾಮಗಾರಿ ನಡೆದಿದೆ ಎಂದು ದೂರು ನೀಡಿದ್ದರು.
ಸ್ಥಳಕ್ಕೆ ಭೇಟಿ ದುರಸ್ತಿಗೆ ಸೂಚನೆ
ಈಗಾಗಲೇ ಜನರು ಅಧಿಕಾರಿಗಳ ನಿರ್ಲಕ್ಷ್ಯ, ರಾಜಕಾಲುವೆ ಒತ್ತುವರಿ , ಪ್ರವಾಹ ಮುಂತಾದ ಕಾರಣಗಳಿಗಾಗಿ ಬಿಬಿಎಂಪಿಯನ್ನು ದೂರುತ್ತಿದ್ದಾರೆ. ಈ ಮಧ್ಯೆ ಪೊಲೀಸ್ ಅಧಿಕಾರಿಗಳಿಂದಲೇ ಬಂದ ದೂರನ್ನ ಬಿಬಿಎಂಪಿ ಗಂಭೀರವಾಗಿ ಪರಿಗಣಿಸಿದೆ. ಅದರನ್ವಯ ಕಳಪೆ ಕೆಲಸಕ್ಕೆ ಕಾರಣರಾದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎಂ.ಸಿ.ಕೃಷ್ಣೇಗೌಡ ಮತ್ತು ಸಹಾಯಕ ಎಂಜಿನಿಯರ್ ವಿಷಕಂಠ ಮೂರ್ತಿ ಅವರನ್ನು ಅಮಾನತು ಮಾಡಲಾಗಿದೆ.
ನಂತರ ಮುಖ್ಯ ಎಂಜಿನಿಯರ್ ಪ್ರಹ್ಲಾದ್ ಅವರು ಉನ್ನತ ಅಧಿಕಾರಿಗಳ ಜತೆಗೆ ನ್ಯೂ ಬಿಇಎಲ್ ರಸ್ತೆಯ ಪ್ರದೇಶದ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಶೋಲ್ಡರ್ ಡ್ರೈನ್ಗಳ ಹೂಳು ತೆರವು ಮಾಡಬೇಕು, ನಂತರ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಆದೇಶಿಸಿದರು ಎಂದು ಬಿಬಿಎಂಪಿ ಆಡಳಿತ ವಿಭಾಗದ ಉಪ ಆಯುಕ್ತ ಯೋಗೇಶ್ ತಿಳಿಸಿದರು.

1,051 ರಸ್ತೆಗುಂಡಿ ಮುಚ್ಚಲು ಸೂಚನೆ
ಬಿಬಿಎಂಪಿಯಿಂದ ಗುರುವಾರ ನಡೆದ ಅಕ್ಟೋಬರ್ ತಿಂಗಳ ವಿವಿಧ ಇಲಾಖೆಗಳ ಸಮನ್ವಯ ಸಮಿತಿ ಸಭೆಯಲ್ಲಿ
ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಬಿಬಿಎಂಪಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಇದೇ ವೇಳೆ ಪೊಲೀಸ್ ಇಲಾಖೆ ಗುರುತಿಸಿರುವ 4,545 ಗುಂಡಿಗಳ ಪೈಕಿ ಬಾಕಿ ಇರುವ 1,051 ಗುಂಡಿಗಳನ್ನು ಮುಚ್ಚಿ ದುರಸ್ತಿಗೊಳಿಸುವಂತೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದರು.
ಜೊತೆಗೆ ಬೆಂಗಳೂರಿನ ಎಂಟು ಪ್ರಮುಖ ರಸ್ತೆ ಜಂಕ್ಷನ್ಗಳಾದ ಸಿಲ್ಕ್ ಬೋರ್ಡ್, ಜಯದೇವ, ಎಂ.ಎಂ ಟೆಂಪಲ್ (ಟಿನ್ ಫ್ಯಾಕ್ಟರಿ), ಹೆಬ್ಬಾಳ, ಗೊರಗುಂಟೆಪಾಳ್ಯ, ಸಾರಕ್ಕಿ, ಕೆ.ಎಸ್ ಲೇಔಟ್ ಮತ್ತು ಬನಶಂಕರಿಯ ರಸ್ತೆ ಜಂಕ್ಷನ್ಗಳ ಸಂಚಾರ ದಟ್ಟಣೆ ಕಡಿಮೆ ಮಾಡಿ. ಅದಕ್ಕಾಗಿ ಬಾಕಿ ಕಾಮಗಾರಿ ಕೆಲಸಗಳನ್ನು ಪೂರ್ಣಗೊಳಿಸಲು ಅವರು ತಿಳಿಸಿದರು.
-
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications