ಬಿಬಿಎಂಪಿ: ಕಳಪೆ ಕಾಮಗಾರಿ ಕಾರಣಕ್ಕೆ ಇಬ್ಬರು ಅಧಿಕಾರಿಗಳು ಅಮಾನತು
ಬೆಂಗಳೂರು, ಸೆಪ್ಟಂಬರ್ 30: ನ್ಯೂ ಬಿಇಎಲ್ ರಸ್ತೆಯಲ್ಲಿ ಕಳಪೆ ಕಾಮಗಾರಿ ನಡೆದಿದ್ದು, ಕರ್ತವ್ಯ ಲೋಪದ ಹಿನ್ನೆಲೆ ಇಬ್ಬರು ಬಿಬಿಎಂಪಿ ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಒಳಚರಂಡಿ ಹೂಳು ತೆಗೆಯುವಲ್ಲಿ ವಿಫಲವಾದ ಕಾರಣಕ್ಕೆ ಬಿಬಿಎಂಪಿ ರಸ್ತೆ ಮೂಲಸೌಕರ್ಯ ವಿಭಾಗದ ಮುಖ್ಯ ಎಂಜಿನಿಯರ್ ಬಿ.ಎಸ್.ಪ್ರಹ್ಲಾದ್ ಅವರು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎಂ.ಸಿ.ಕೃಷ್ಣೇಗೌಡ ಮತ್ತು ಸಹಾಯಕ ಎಂಜಿನಿಯರ್ ವಿಷಕಂಠ ಮೂರ್ತಿ ಅವರನ್ನು ಅಮಾನತುಗೊಳಿಸಿದ್ದಾರೆ.
ಈ ಹಿಂದೆಯೇ ನ್ಯೂ ಬಿಇಎಲ್ ರಸ್ತೆಯಲ್ಲಿನ ಗುಂಡಿಗಳನ್ನು ನಿಗದಿತ ಸಮಯಕ್ಕೆ ಸರಿಪಡಿಸಲು ಸೂಚಿಸಲಾಗಿತ್ತು. ಅದರಂತೆ ಕಾಮಗಾರಿ ನಡೆಸಿದ ಪಾಲಿಕೆ ಅಧಿಕಾರಿ ಮತ್ತು ಸಿಬ್ಬಂದಿಯು ಒಳಚರಂಡಿಯಲ್ಲಿನ ಹೂಳು ತೆಗೆಯುವುದು, ರಸ್ತೆಗುಂಡಿಗಳನ್ನು ಮುಚ್ಚುವ ಕೆಲಸ ಮಾಡಿತ್ತು. ಆದರೆ ಈ ಕೆಲದಲ್ಲಿ ಗುಣಮಟ್ಟ ಕಾಯ್ದುಕೊಳ್ಳದ ಹಿನ್ನೆಲೆ ಕಳಪೆ ಕಾಮಗಾರಿ ಸಾಬೀತಾಗಿತ್ತು.

ಇದಾದ ಬಳಿಕ ನಡೆದ ಕಳೆದ ತಿಂಗಳ ವಿವಿಧ ಇಲಾಖೆಗಳ ಸಮನ್ವಯ ಸಮಿತಿ ಸಭೆಯಲ್ಲಿ ಬೆಂಗಳೂರು ಸಂಚಾರ ವಿಭಾಗದ ಹೆಚ್ಚುವರಿ ಆಯುಕ್ತ ಬಿ.ಆರ್.ರವಿಕಾಂತೇಗೌಡ ಅವರು ಕಳೆಪೆ ಕಾಮಗಾರಿ ನಡೆದಿದೆ ಎಂದು ದೂರು ನೀಡಿದ್ದರು.
ಸ್ಥಳಕ್ಕೆ ಭೇಟಿ ದುರಸ್ತಿಗೆ ಸೂಚನೆ
ಈಗಾಗಲೇ ಜನರು ಅಧಿಕಾರಿಗಳ ನಿರ್ಲಕ್ಷ್ಯ, ರಾಜಕಾಲುವೆ ಒತ್ತುವರಿ , ಪ್ರವಾಹ ಮುಂತಾದ ಕಾರಣಗಳಿಗಾಗಿ ಬಿಬಿಎಂಪಿಯನ್ನು ದೂರುತ್ತಿದ್ದಾರೆ. ಈ ಮಧ್ಯೆ ಪೊಲೀಸ್ ಅಧಿಕಾರಿಗಳಿಂದಲೇ ಬಂದ ದೂರನ್ನ ಬಿಬಿಎಂಪಿ ಗಂಭೀರವಾಗಿ ಪರಿಗಣಿಸಿದೆ. ಅದರನ್ವಯ ಕಳಪೆ ಕೆಲಸಕ್ಕೆ ಕಾರಣರಾದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎಂ.ಸಿ.ಕೃಷ್ಣೇಗೌಡ ಮತ್ತು ಸಹಾಯಕ ಎಂಜಿನಿಯರ್ ವಿಷಕಂಠ ಮೂರ್ತಿ ಅವರನ್ನು ಅಮಾನತು ಮಾಡಲಾಗಿದೆ.
ನಂತರ ಮುಖ್ಯ ಎಂಜಿನಿಯರ್ ಪ್ರಹ್ಲಾದ್ ಅವರು ಉನ್ನತ ಅಧಿಕಾರಿಗಳ ಜತೆಗೆ ನ್ಯೂ ಬಿಇಎಲ್ ರಸ್ತೆಯ ಪ್ರದೇಶದ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಶೋಲ್ಡರ್ ಡ್ರೈನ್ಗಳ ಹೂಳು ತೆರವು ಮಾಡಬೇಕು, ನಂತರ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಆದೇಶಿಸಿದರು ಎಂದು ಬಿಬಿಎಂಪಿ ಆಡಳಿತ ವಿಭಾಗದ ಉಪ ಆಯುಕ್ತ ಯೋಗೇಶ್ ತಿಳಿಸಿದರು.

1,051 ರಸ್ತೆಗುಂಡಿ ಮುಚ್ಚಲು ಸೂಚನೆ
ಬಿಬಿಎಂಪಿಯಿಂದ ಗುರುವಾರ ನಡೆದ ಅಕ್ಟೋಬರ್ ತಿಂಗಳ ವಿವಿಧ ಇಲಾಖೆಗಳ ಸಮನ್ವಯ ಸಮಿತಿ ಸಭೆಯಲ್ಲಿ
ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಬಿಬಿಎಂಪಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಇದೇ ವೇಳೆ ಪೊಲೀಸ್ ಇಲಾಖೆ ಗುರುತಿಸಿರುವ 4,545 ಗುಂಡಿಗಳ ಪೈಕಿ ಬಾಕಿ ಇರುವ 1,051 ಗುಂಡಿಗಳನ್ನು ಮುಚ್ಚಿ ದುರಸ್ತಿಗೊಳಿಸುವಂತೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದರು.
ಜೊತೆಗೆ ಬೆಂಗಳೂರಿನ ಎಂಟು ಪ್ರಮುಖ ರಸ್ತೆ ಜಂಕ್ಷನ್ಗಳಾದ ಸಿಲ್ಕ್ ಬೋರ್ಡ್, ಜಯದೇವ, ಎಂ.ಎಂ ಟೆಂಪಲ್ (ಟಿನ್ ಫ್ಯಾಕ್ಟರಿ), ಹೆಬ್ಬಾಳ, ಗೊರಗುಂಟೆಪಾಳ್ಯ, ಸಾರಕ್ಕಿ, ಕೆ.ಎಸ್ ಲೇಔಟ್ ಮತ್ತು ಬನಶಂಕರಿಯ ರಸ್ತೆ ಜಂಕ್ಷನ್ಗಳ ಸಂಚಾರ ದಟ್ಟಣೆ ಕಡಿಮೆ ಮಾಡಿ. ಅದಕ್ಕಾಗಿ ಬಾಕಿ ಕಾಮಗಾರಿ ಕೆಲಸಗಳನ್ನು ಪೂರ್ಣಗೊಳಿಸಲು ಅವರು ತಿಳಿಸಿದರು.
-
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications