ಕರ್ನಾಟಕದ ಪ್ರಮುಖರ ಹತ್ಯೆ ಸಂಚಿನಲ್ಲಿ ಬೆಂಗಳೂರಿನ ವೈದ್ಯರು!
ಬೆಂಗಳೂರು, ಡಿಸೆಂಬರ್ 22 : ಕರ್ನಾಟಕದಲ್ಲಿನ ಪತ್ರಕರ್ತರು ಮತ್ತು ಕೆಲವು ರಾಜಕೀಯ ಮುಖಂಡರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ಬೆಂಗಳೂರಿನ ಇಬ್ಬರು ವೈದ್ಯರು ಭಾಗಿಯಾಗಿದ್ದರು ಎಂಬ ಅಂಶ ಬೆಳಕಿಗೆ ಬಂದಿದೆ. ರಾಷ್ಟ್ರೀಯ ತನಿಖಾ ದಳ ಈ ಕೊಲೆ ಸಂಚಿನ ಪ್ರಕರಣದ ತನಿಖೆ ನಡೆಸುತ್ತಿದೆ.
ಈ ಕೊಲೆ ಸಂಚಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ನ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಲಷ್ಕರ್ ಉಗ್ರ ಅಸಾದುಲ್ಲಾ ಖಾನ್ನನ್ನು ವಿಚಾರಣೆ ನಡೆಸುತ್ತಿದ್ದು, ಸಂಚಿನಲ್ಲಿ ಭಾಗಿಯಾದ ವ್ಯಕ್ತಿಗಳ ಮಾಹಿತಿಯನ್ನು ಸಂಗ್ರಹಣೆ ಮಾಡುತ್ತಿದ್ದಾರೆ. [ಉಗ್ರ ಅಸಾದುಲ್ಲಾನನ್ನು ಬೆಂಗಳೂರಿಗೆ]

ಬೆಂಗಳೂರಿನ ಸಿಸಿಬಿ ಪೊಲೀಸರು 12 ಆರೋಪಿಗಳನ್ನು ಬಂಧಿಸುವ ಮೂಲಕ ಕೊಲೆ ಸಂಚನ್ನು ಮೊದಲು ಬಹಿರಂಗಪಡಿಸಿದ್ದರು. ನಂತರ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಈ ಪ್ರಕರಣದ ತನಿಖೆಯನ್ನು ನಡೆಸುತ್ತಿದೆ. ಮಹಾರಾಷ್ಟ್ರ ಮತ್ತು ತೆಲಂಗಾಣದ ಕೆಲವು ವ್ಯಕ್ತಿಗಳು ಈ ಸಂಚಿನಲ್ಲಿ ಭಾಗಿಯಾಗಿದ್ದಾರೆ ಎಂದು ಎನ್ಐಎ ಶಂಕೆ ವ್ಯಕ್ತಪಡಿಸಿದೆ. [ಖಾನ್ ಬಂಧನದಿಂದ ಕೊಲೆ ಸಂಚಿನ ಪ್ರಕರಣಕ್ಕೆ ಮಿಂಚಿನ ವೇಗ]
ಡಿಸೆಂಬರ್ 9ರಂದು ಅಸಾದುಲ್ಲಾ ಖಾನ್ನನ್ನು ಬೆಂಗಳೂರಿಗೆ ಕರೆತಂದ ಎನ್ಐಎ ಅಧಿಕಾರಿಗಳು ಆತನ ವಿಚಾರಣೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಖಾನ್ ಬೆಂಗಳೂರಿನ ಇಬ್ಬರು ವೈದ್ಯರು, ಒಬ್ಬರು ಇಂಜಿನಿಯರ್ ಈ ಸಂಚಿನಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ನೀಡಿದ್ದಾನೆ. ಬೆಂಗಳೂರಿನ ಕೆಲವು ಯುವಕರ ಮೇಲೆಯೂ ಎನ್ಐಎ ಕಣ್ಣಿಟ್ಟಿದೆ.
ದ್ವೇಷಕ್ಕಾಗಿ ಕೊಲೆ ಮಾಡಲು ಸಂಚು : ಬೆಂಗಳೂರಿನ ಇಬ್ಬರು ವೈದ್ಯರು ಕೊಲೆ ಸಂಚಿನ ಬಗ್ಗೆ 2012ರಲ್ಲಿ ಸೌದಿ ಅರೇಬಿಯಾದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದರು ಎಂದು ಅಸಾದುಲ್ಲಾ ಖಾನ್ ವಿಚಾರಣೆ ವೇಳೆ ಹೇಳಿದ್ದಾನೆ. ಕೊಲೆ ಮಾಡಬೇಕಾದ ಹಿಂದೂ ಸಂಘಟನೆಗಳ ನಾಯಕರ ಮತ್ತು ಪತ್ರಕರ್ತರ ಬಗ್ಗೆ ವೈದ್ಯರು ಸಭೆಯಲ್ಲಿ ಮಾಹಿತಿ ನೀಡಿದ್ದರು.
ಮುಸ್ಲಿಂಮರ ವಿರುದ್ಧ ಮಾತನಾಡುವ ಮತ್ತು ಬರೆಯುವ ಹಿಂದೂ ನಾಯಕರು ಹಾಗೂ ಪತ್ರಕರ್ತರನ್ನು ದ್ವೇಷದ ಉದ್ದೇಶಕ್ಕಾಗಿ ಕೊಲ್ಲಲು ಸಂಚು ರೂಪಿಸಲಾಗಿತ್ತು. ಮೊಹಮದ್ ಫೈಸಲ್ ಎಂಬ ಇಂಜಿನಿಯರ್ ಸಹ ಸೌದಿಗೆ ಆಗಮಿಸಿದ್ದ ಎಂದು ಖಾನ್ ವಿಚಾರಣೆ ವೇಳೆ ಹೇಳಿದ್ದಾನೆ. ಎನ್ಐಎ ತನಿಖೆ ಮುಂದುವರೆದಿದೆ.
-
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ











Click it and Unblock the Notifications