ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ ರದ್ದು

|
Google Oneindia Kannada News

ಬೆಂಗಳೂರು, ಆಗಸ್ಟ್ 02: ನಿನ್ನೆಯಷ್ಟೆ ವರ್ಗಾವಣೆ ಮಾಡಿದ್ದ ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆಯನ್ನು ಇಂದು ರಾಜ್ಯ ಸರ್ಕಾರ ರದ್ದು ಮಾಡಿ ಆದೇಶ ಹೊರಡಿಸಿದೆ.

ಎಸಿಬಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಐಪಿಎಸ್ ಅಧಿಕಾರಿಗಳಾದ ರವಿಕಾಂತೇಗೌಡ, ಉಮೇಶ್ ಕುಮಾರ್ ಅವರನ್ನು ನಿನ್ನೆ ರಾಜ್ಯ ಸರ್ಕಾರ ವರ್ಗಾವಣೆ ಮಾಡಿತ್ತು. ಆದರೆ ಇಂದು ವರ್ಗಾವಣೆಯನ್ನು ರದ್ದು ಮಾಡಿದೆ.

ಐಪಿಎಸ್ ಅಧಿಕಾರಿಗಳ ಮೇಲೆ ಮತ್ತೆ ಸರ್ಕಾರದ ಕಣ್ಣು: 6 ಮಂದಿ ವರ್ಗಾವಣೆ ಐಪಿಎಸ್ ಅಧಿಕಾರಿಗಳ ಮೇಲೆ ಮತ್ತೆ ಸರ್ಕಾರದ ಕಣ್ಣು: 6 ಮಂದಿ ವರ್ಗಾವಣೆ

ನಿನ್ನೆ ಈ ಇಬ್ಬರೂ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತಾದರೂ ಯಾವುದೇ ಸ್ಥಳ ನಿಯೋಜನೆ ಮಾಡಿರಲಿಲ್ಲ. ಇಂದು ವರ್ಗಾವಣೆ ರದ್ದಾಗಿರುವ ಕಾರಣ ಇಬ್ಬರೂ ಅಧಿಕಾರಿಗಳು ಎಸಿಬಿಯಲ್ಲಿಯೇ ಮುಂದುವರೆಯಲಿದ್ದಾರೆ. ಇಬ್ಬರೂ ಅಧಿಕಾರಿಗಳು ಅತ್ಯಂತ ಪ್ರಮುಖ ಪ್ರಕ್ರಣಗಳ ತನಿಖೆ ನಡೆಸುತ್ತಿದ್ದರು.

Two IPS officers transfer has been cancelled by government

ರವಿಕಾಂತೇಗೌಡ ಅವರು, ಐಎಂಎ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ತಂಡದ ನೇತೃತ್ವ ವಹಿಸಿಕೊಂಡಿದ್ದಾರೆ. ಉಮೇಶ್ ಕುಮಾರ್ ಅವರೂ ಸಹ ಹಲವು ಪ್ರಮುಖ ಪ್ರಕರಣಗಳ ತನಿಖೆ ನಡೆಸುತ್ತಿದ್ದಾರೆ.

47 ದಿನದಲ್ಲೇ ವರ್ಗಾವಣೆ: ಸರ್ಕಾರದ ವಿರುದ್ಧ ಕೋರ್ಟ್‌ ಮೆಟ್ಟಿಲೇರಲಿರುವ ಅಲೋಕ್ ಕುಮಾರ್47 ದಿನದಲ್ಲೇ ವರ್ಗಾವಣೆ: ಸರ್ಕಾರದ ವಿರುದ್ಧ ಕೋರ್ಟ್‌ ಮೆಟ್ಟಿಲೇರಲಿರುವ ಅಲೋಕ್ ಕುಮಾರ್

ನಿನ್ನೆಯಿಂದ ಹಲವು ಐಪಿಎಸ್ ಅಧಿಕಾರಿಗಳನ್ನು ಯಡಿಯೂರಪ್ಪ ಅವರ ಸರ್ಕಾರವು ವರ್ಗಾವಣೆ ಮಾಡಿದ್ದು, ಪ್ರಮುಖವಾಗಿ ಇಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಅಲೋಕ್ ಕುಮಾರ್ ಅವರನ್ನು ವರ್ಗಾವಣೆ ಮಾಡಿ ಆ ಸ್ಥಾನಕ್ಕೆ ಭಾಸ್ಕರ ರಾವ್ ಅವರನ್ನು ನೇಮಿಸಲಾಗಿದೆ. ಅಲೋಕ್ ಕುಮಾರ್ ಅವರು ಬೆಂಗಳೂರು ಆಯುಕ್ತರಾಗಿ ನೇಮಕಗೊಂಡು ಕೇವಲ 47 ದಿನಗಳಷ್ಟೆ ಆಗಿತ್ತು.

English summary
Two IPS officers Ravikanthe Gowda and Umesh Kumar's tranfer has been cancelled by state government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X