ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು : ರಾಜಾಕಾಲುವೆ ಮಣ್ಣು ಕುಸಿದು, ಇಬ್ಬರ ಸಾವು

|
Google Oneindia Kannada News

ಬೆಂಗಳೂರು, ಏಪ್ರಿಲ್ 14 : ರಾಜಾಕಾಲುವೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಾಲ್ವರು ಘಟನೆಯಲ್ಲಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪುಲಿಕೇಶಿ ನಗರ ಮುಖ್ಯ ರಸ್ತೆಯ ಬಿಜಿ ಗಾರ್ಡನ್ ಸಮೀಪ ಶನಿವಾರ ಸಂಜೆ ಈ ಘಟನೆ ನಡೆದಿದೆ. ಮೃತಪಟ್ಟವರನ್ನು ಸುದರ್ಶನ್ ಮತ್ತು ಶಫೀಕ್ ಎಂದು ಗುರುತಿಸಲಾಗಿದೆ. ಈ ಇಬ್ಬರೂ ಜಾರ್ಖಂಡ್ ಮೂಲದವರು.

ಒಟ್ಟು 8 ಕಾರ್ಮಿಕರು ರಾಜಾಕಾಲುವೆಯ ಮಣ್ಣನ್ನು ತೆಗೆಯುವ ಕೆಲಸ ಮಾಡುತ್ತಿದ್ದರು. ಆಗ ಮಣ್ಣು ಕುಸಿದು ಬಿದ್ದಿದೆ. ಸುದರ್ಶನ್ ಮತ್ತು ಶಫೀಕ್ ಮಣ್ಣಿನಡಿ ಸಿಲುಕಿದ್ದರು. ತಕ್ಷಣ ಅವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Two killed due to landslide in Bengaluru

ಸುದರ್ಶನ್ ಮತ್ತು ಶಫೀಕ್ ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ಸಾಗಿಸಲಾಗಿದೆ. ಇಂದು ಮರಣೋತ್ತರ ಪರೀಕ್ಷೆ ನಡೆಸಿ, ಶವಗಳನ್ನು ಕುಟುಂಬದವರಿಗೆ ಹಸ್ತಾಂತರ ಮಾಡಲಾಗುತ್ತದೆ.

English summary
Two killed, four injured due to landslide in Raja Kaluve near Pulikeshi Nagar, Bengaluru. Dead body shifted to Bowring hospital.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X