ಬಸ್ ಡಿಕ್ಕಿ ಹೊಡದು ಬೈಕ್ ಸವಾರ ಮೃತ; ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು
ಬೆಂಗಳೂರು, ಜ. 24: ಬೆಂಗಳೂರಿನಲ್ಲಿ ಸಂಭವಿಸಿದ ಮೂರು ಪ್ರತ್ಯೇಕ ಅವಘಡಗಳಲ್ಲಿ ಇಬ್ಬರು ಮೃತಪಟ್ಟಿದ್ದು, ಒಂದು ಕಾರು ಸುಟ್ಟು ಕರಕಲಾಗಿದೆ.
ಬಿಎಂಟಿಸಿ ಬಸ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮಲ್ಲೇಶ್ವರದ ಕೆ.ಸಿ. ಜನರಲ್ ಆಸ್ಪತ್ರೆ ಬಳಿ ಸಂಭವಿಸಿದೆ. ಸುರೇಶ್ ಬಾಬು ಮೃತಪಟ್ಟ ದುರ್ದೈವಿ. ಜೆ.ಸಿ. ಜನರಲ್ ಆಸ್ಪತ್ರೆ ಬಳಿ ಚಲಿಸುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಬೈಕ್ಗೆ ಡಿಕ್ಕಿ ಹೊಡೆದಿದೆ. ಬೈಕ್ನಿಂದ ಕೆಳಗೆ ಬಿದ್ದ ಸುರೇಶ್ ಬಾಬು ತಲೆಗೆ ಪೆಟ್ಟಾಗಿದ್ದು, ಕೂಡಲೇ ಕೆ.ಸಿ. ಜನರಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಷ್ಟರಲ್ಲಿ ಆತ ಸಾವನ್ನಪ್ಪಿದ್ದು, ಮಲ್ಲೇಶ್ವರದ ಸಂಚಾರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ಕೆಂಗೇರಿ: ಕುಡಿದ ಅಮಲಿನಲ್ಲಿ ತೆಂಗಿನ ಮರದ ಏರಿದ್ದ ವ್ಯಕ್ತಿ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಗೌತಮ್ ಬರ್ಮನ್ ಮೃತಪಟ್ಟವ. ಹಳೇ ತಗಡು ಸಂಗ್ರಹ ಗೋಡನ್ನಲ್ಲಿ ಕೆಲಸ ಮಾಡುತ್ತಿದ್ದ ಗೌತಮ್ ಭಾನುವಾರ ರಾತ್ರಿ ಕಂಠಪೂರ್ತಿ ಕುಡಿದು ತೆಂಗಿನ ಮರ ಏರಿದ್ದಾನೆ. ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ.

ನೈಸ್ ರಸ್ತೆಯಲ್ಲಿ ಕಾರು ಧಗಧಗ: ಶಾರ್ಟ್ ಸರ್ಕೂಟ್ನಿಂದ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟು ಕರಕಲಾಗಿರುವ ಘಟನೆ ನೈಸ್ ರಸ್ತೆಯಲ್ಲಿ ನಡೆದಿದೆ. ಬನ್ನೇರುಘಟ್ಟದಿಂದ ಎಲೆಕ್ಟ್ರಾನಿಕ್ ಸಿಟಿ ಕಡೆ ತೆರಲಿದ್ದ ಕಾರು ಸುಟ್ಟು ಕರಕಲಾಗಿದ್ದು, ಖಾಸಗಿ ಕಂಪನಿ ಉದ್ಯೋಗಿ ಸುಧಾಕರ್ ಅವರಿಗೆ ಸೇರಿದೆ ಎನ್ನಲಾಗಿದೆ. ಸುಧಾಕರ್ ಎಂದಿನಂತೆ ಕಾರು ಚಲಾವಣೆ ಮಾಡುವಾಗ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡು ಅವಘಡ ಸಂಭವಿಸಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳ ತೆರಳಿ ಬೆಂಕಿ ನಂದಿಸಿದೆ. ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications