ವಿಬ್ ಗಯಾರ್ ಬಳಿ ಚಿರತೆ ಪ್ರತ್ಯಕ್ಷ, ವದಂತಿ ತಂದ ಆತಂಕ
ಬೆಂಗಳೂರು, ಫೆಬ್ರವರಿ 09 : ವರ್ತೂರಿನಲ್ಲಿರುವ ವಿಬ್ ಗಯಾರ್ ಶಾಲೆಗೆ ಚಿರತೆ ನುಗ್ಗಿದ ಎರಡೇ ದಿನಗಳಲ್ಲಿ ಶಾಲೆಯ ಹಿಂಬದಿಯಲ್ಲಿರುವ ನೀಲಗಿರಿ ತೋಪಿನ ಬಳಿ ಮತ್ತೆರಡು ಚಿರತೆಗಳು ಕಾಡಿನಿಂದ ಬಂದಿರುವ ವದಂತಿ ನಾಗರಿಕರಲ್ಲಿ ಭಾರೀ ಭಯವನ್ನು ಹುಟ್ಟುಹಾಕಿತ್ತು.
ಪೊದೆಯೊಂದರಿಂದ ಪ್ರಾಣಿಯೊಂದು ಓಡಿಹೋದದ್ದನ್ನು ನೋಡಿದ ನಾಗರಿಕರೊಬ್ಬರು ಚಿರತೆ ಇರಬಹುದೆಂದು ತಿಳಿದು ಸುದ್ದಿ ಹಬ್ಬಿಸಿದ್ದಾರೆ. ಆದರೆ, ಸುದ್ದಿ ಕಾಳ್ಗಿಚ್ಚಿನಂತೆ ಹಬ್ಬಿ ಸುತ್ತಲಿನ ನಿವಾಸಿಗಳಲ್ಲಿ ಆತಂಕ ಮೂಡಿಸಿತ್ತು. ಭಾನುವಾರ ಚಿರತೆ ಬಂದಿದ್ದ ಹಿನ್ನೆಲೆಯಲ್ಲಿ ಜನರಲ್ಲಿ ಮತ್ತೆ ಬರಬಹುದೆಂಬ ಆತಂಕ ಸಹಜವಾಗಿ ಸೃಷ್ಟಿಯಾಗಿದೆ.
ವಿಬ್ ಗಯಾರ್ ಶಾಲೆಯ ಹಿಂಬದಿಯ ಅಪಾರ್ಟ್ಮೆಂಟ್ಗೆ ಚಿರತೆಗಳೆರಡು ನುಗ್ಗಲು ಯತ್ನಿಸುತ್ತಿವೆ ಎಂದು ತಿಳಿದುಬಂದಿತ್ತು. ಇದರಿಂದ ಕಂಗಾಲಾಗಿರುವ ನಾಗರಿಕರು ಚೀರುತ್ತ, ಕೂಗಾಡುತ್ತ ಮತ್ತು ಪಟಾಕಿ ಹಾರಿಸುತ್ತ ಚಿರತೆಗಳನ್ನು ಓಡಿಸಲು ಯತ್ನಿಸುತ್ತಿದ್ದರು. [ಚಿತ್ರಗಳು : ಬೆಂಗಳೂರು ಶಾಲೆಗೆ ಲಗ್ಗೆ ಹಾಕಿದ ಚಿರತೆ]

ಪೊಲೀಸರು ಮತ್ತು ಅರಣ್ಯಾಧಿಕಾರಿಗಳು ಸ್ಥಳಕ್ಕೆ ಕೂಡಲೆ ಧಾವಿಸಿದ್ದು ಚಿರತೆಗಳನ್ನು ಮತ್ತೆ ಕಾಡಿಗಟ್ಟಲು ಅಥವಾ ಹಿಡಿಯಲು ಪ್ರಯತ್ನ ನಡೆಸಿದರು. ಆದರೆ, ಸಾಕಷ್ಟು ಹುಡುಕಾಟ ನಡೆಸಿದ ನಂತರ ಯಾವುದೇ ಚಿರತೆಗಳು ಕಂಡುಬಂದಿಲ್ಲ. ಚಿರತೆಯ ಭಯ ಜನರಲ್ಲಿ ಮೂಡಿದ್ದರಿಂದ ಇಂಥ ವದಂತಿ ಹಬ್ಬಿರಬಹುದು ಎಂದು ಅವರು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ವಿಬ್ ಗಯಾರ್ ಶಾಲೆಗೆ ಪ್ರಾಂಶುಪಾಲ ರೋಶನ್ ಡಿಸೋಜಾ ಅವರು ಬುಧವಾರ ರಜಾ ಘೋಷಿಸಿದ್ದಾರೆ. ಈ ಮೊದಲು ಶಾಲೆಯೊಳಗೆ ಚಿರತೆ ನುಗ್ಗಿದ್ದಾಗ ಅದೃಷ್ಟವಶಾತ್ ರಜಾ ಇದ್ದಿದ್ದರಿಂದ ಭಾರೀ ಅನಾಹುತ ತಪ್ಪಿತ್ತು.
ಭಾನುವಾರ ಶಾಲೆಗೆ ಬಂದಿದ್ದ ಚಿರತೆ : ಕಳೆದ ಭಾನುವಾರ ವಿಬ್ ಗಯಾರ್ ಶಾಲೆಯೊಳಗೆ ಚಿರತೆಯೊಂದು ನುಗ್ಗಿ ಭಾರೀ ಹಾವಳಿ ಎಬ್ಬಿಸಿತ್ತು. ಅರವಳಿಕೆ ಮದ್ದು ನೀಡಲು ಬಂದಿದ್ದ ಸಿಬ್ಬಂದಿಯ ಮೇಲೆಯೇ ದಾಳಿ ಮಾಡಿ ಮೂವರನ್ನು ಗಾಯಗೊಳಿಸಿತ್ತು. ಭಾರೀ ಹರಸಾಹಸಪಟ್ಟನಂತರ ಸಂಜೆ 8 ಗಂಟೆ ಸುಮಾರಿಗೆ ಚಿರತೆಯನ್ನು ಹಿಡಿಯಲಾಗಿತ್ತು. [ಶಾಲೆಗೆ ಮತ್ತೆ ಬಂದ ಚಿರತೆ, ಮೂವರ ಮೇಲೆ ದಾಳಿ]
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್












Click it and Unblock the Notifications