ವಾಟ್ಸಪ್ ನಲ್ಲಿ ಪಿಯು ನಕಲಿ ಪ್ರಶ್ನೆ ಪತ್ರಿಕೆ ಹರಿಬಿಟ್ಟವರ ಬಂಧನ
ಬೆಂಗಳೂರು, ಏ.11: ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆ ಎಂದು ವಾಟ್ಸಪ್ ನಲ್ಲಿ 2017ರ ಪ್ರಶ್ನೆಪತ್ರಿಕೆ ಹರಿಬಿಟ್ಟವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
2017ನೇ ಸಾಲಿನ ದ್ವಿತೀಯ ವರ್ಷದ ಪಿ.ಯು.ಸಿ ಕನ್ನಡ ಪ್ರಶ್ನೆಪತ್ರಿಕೆಯನ್ನು 2019 ರ ದ್ವಿತೀಯ ವರ್ಷದ ಪಿ.ಯು.ಸಿ. ಪ್ರಶ್ನೆ ಪ್ರತ್ರಿಕೆ ಎಂದು ವಾಟ್ಸಪ್ ನಲ್ಲಿ ಕಳುಹಿಸಿದ ಆರೋಪಿಗಳನ್ನು ಬೆಂಗಳೂರು ನಗರ ಸೈಬರ್ ಅಪರಾಧ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಯಾದಗಿರಿಯ ಮಂಜುನಾಥ ಬಿನ್ ಮರೆಪ್ಪ, ಕಾನೂನು ಸಂಘರ್ಷಕ್ಕೊಳಗಾದ ಬಾಲಕ. ಮಾರ್ಚ್ 16ರಂದು ರಂದು ಸಾಮಾಜಿಕ ಜಾಲತಾಣಗಳು ಹಾಗೂ ವಾಟ್ಸ್ಅಪ್ಗಳಲ್ಲಿ2019ನೇ ಸಾಲಿನ ದ್ವಿತೀಯ ವರ್ಷದ ಪಿ.ಯು.ಸಿ. ಪ್ರಶ್ನೆಪತ್ರಿಕೆಯು ಪರೀಕ್ಷೆ ನಡೆಯುವ ಮುನ್ನವೇ ಹರಿದಾಡುತ್ತಿತ್ತು.

ಈ ಪ್ರಶ್ನೆಪತ್ರಿಕೆಯು ನಕಲಿ ಎಂದು ತಿಳಿದ ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿಯು ಈ ಸಂಬಂಧ ಬೆಂಗಳೂರು ನಗರ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ ಮೇರೆಗೆ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
ಪ್ರಕರಣದ ತನಿಖಾ ಕಾಲದಲ್ಲಿ ಸುಮಾರು 30 ಜನರನ್ನು ವಿಚಾರಣೆಗೊಳಪಡಿಸಲಾಯಿತು. ನಂತರ ಕೃತ್ಯವನ್ನು ಯಾದಗಿರಿ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ. ಓದುತ್ತಿದ್ದಂತಹ ವಿದ್ಯಾರ್ಥಿಗಳು ಮಾಡಿರಬಹುದಾಗಿ ಬಂದ ಮಾಹಿತಿಯ ಮೇರೆಗೆ ಮಂಜುನಾಥ ಹಾಗೂ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ವಶಕ್ಕೆ ಪಡೆದು ವಿಚಾರ ಮಾಡಲಾಗಿದೆ.
ಇವರಿಬ್ಬರು ದ್ವಿತೀಯ ವರ್ಷದ ಪಿ.ಯು.ಸಿ. ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಆತಂಕವನ್ನು ಸೃಷ್ಟಿ ಮಾಡುವ ಉದ್ದೇಶದಿಂದ 2017ನೇ ಸಾಲಿನ ದ್ವಿತೀಯ ಪಿ.ಯು.ಸಿ. ಪರೀಕ್ಷೆಯ ಕನ್ನಡ ಪತ್ರಿಕೆಯನ್ನು ಸ್ಕ್ಯಾನ್ ಮಾಡಿಕೊಂಡು 2019ನೇ ಸಾಲಿನ ದ್ವಿತೀಯ ಪಿ.ಯು.ಸಿ.ಯ ಅರ್ಥಶಾಸ್ತ್ರ ಪತ್ರಿಕೆಯ ಮೇಲಿದ್ದಂತಹ ಕೋಡ್ಗಳನ್ನು ಕಟ್ ಮಾಡಿ ಮೊಬೈಲ್ ಆಪ್ ಅನ್ನು ಬಳಸಿ ಯಾರಿಗೂ ಗೊತ್ತಾಗದ ರೀತಿಯಲ್ಲಿ ಅದನ್ನು ಅಂಟಿಸಿದ್ದರು.
ನಂತರ ಇಬ್ಬರೂ ಅವರಿಗೆ ಪರಿಚಯವಿರುವಂತಹ ವಿದ್ಯಾರ್ಥಿಗಳಿಗೆ ವಾಟ್ಸಪ್ನಲ್ಲಿ ಹಂಚಿಕೆ ಮಾಡಿ ಸದರಿ ಪ್ರಶ್ನೆ ಪತ್ರಿಕೆಯು ನೈಜ ಪ್ರಶ್ನೆಪತ್ರಿಕೆಯೆಂದು ನಂಬಿಸಿ ಸಾರ್ವಜನಿಕರಲ್ಲಿ ಆತಂಕವನ್ನು ಸೃಷ್ಟಿಮಾಡಿರುವ ವಿಚಾರವು ತನಿಖೆಯಿಂದ ತಿಳಿದುಬಂದಿದೆ.
ಆರೋಪಿ ಮಂಜುನಾಥನನ್ನು ನ್ಯಾಯಾಂಗ ಬಂಧನಕ್ಕೆ ಹಾಗೂ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಸರ್ಕಾರಿ ವೀಕ್ಷಣಾಲಯಕ್ಕೆ ಕಳುಹಿಸಲಾಗಿದೆ.
ಈ ಪ್ರಕರಣದ ಪತ್ತೆ ಕಾರ್ಯಕ್ಕೆ ಆಲೋಕ್ ಕುಮಾರ್ ಐಪಿಎಸ್, ಅಪರ ಪೊಲೀಸ್ ಆಯುಕ್ತರು, ಅಪರಾಧ, ಬೆಂಗಳೂರು ನಗರ ಹಾಗೂ ಗಿರೀಶ್.ಎಸ್. ಐಪಿಎಸ್, ಉಪ ಪೊಲೀಸ್ ಆಯುಕ್ತರು, ಅಪರಾಧ, ಬೆಂಗಳೂರು ನಗರ ರವರ ಮಾರ್ಗದರ್ಶನದಲ್ಲಿ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಪಿ.ಐ, ಚಂದ್ರಪ್ಪ ಎಸ್.ಎಂ., ಪಿ.ಎಸ್.ಐ ಸಂತೋಷ್ ರಾಮ್, ಎ.ಎಸ್.ಐ ಕುಮಾರಸ್ವಾಮಿ ಹಾಗೂ ಸಿಬ್ಬಂದಿಗಳಾದ ಸತೀಶ್.ಆರ್, ಸದಾಶಿವ.ಸಿ, ವಿಜಯಕುಮಾರ್.ವೈ.ಎಸ್. ಮತ್ತು ಗುಣಶೀಲ ಕೈಗೊಂಡಿದ್ದರು.
-
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ












Click it and Unblock the Notifications