ಬೆಂಗಳೂರು ಎಸ್‌ಟಿಪಿ ದುರಂತ: BWSSB ತ್ಯಾಜ್ಯ ನೀರು ಸಂಸ್ಕರಣಾ ಘಟಕದಲ್ಲಿ ಇಬ್ಬರು ಕಾರ್ಮಿಕರು ನಾಪತ್ತೆ, ಶೋಧ ಕಾರ್ಯ ಚುರುಕು

ಬೆಂಗಳೂರು: ರಾಜಧಾನಿ ಬೆಂಗಳೂರಿನ ವರ್ತೂರು ಸಮೀಪದ ಬೆಳ್ಳಗೆರೆಯಲ್ಲಿರುವ ಬೆಂಗಳೂರು ಜಲಮಂಡಳಿಯ ತ್ಯಾಜ್ಯ ನೀರು ಸಂಸ್ಕರಣಾ ಘಟಕದಲ್ಲಿ ಭಾರಿ ದುರಂತವೊಂದು ಸಂಭವಿಸಿದೆ. ಗುರುವಾರ ಸಂಜೆ ಕೊಳಚೆ ನೀರು ಸಂಸ್ಕರಣಾ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಜಲಸಮಾಧಿಯಾಗಿರುವ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದ ತಕ್ಷಣವೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಹಾಗೂ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ನಾಪತ್ತೆಯಾಗಿರುವ ಕಾರ್ಮಿಕರಿಗಾಗಿ ತೀವ್ರ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ.

ಎಸ್‌ಟಿಪಿ ಟ್ಯಾಂಕ್ ದುರಂತದ ಹಿನ್ನೆಲೆ

ಪೊಲೀಸ್ ಮೂಲಗಳು ನೀಡಿರುವ ಮಾಹಿತಿಯ ಪ್ರಕಾರ, ಗುರುವಾರ ಸಂಜೆ ಸುಮಾರು 6.30ರ ಸುಮಾರಿಗೆ ವರ್ತೂರು ಸಮೀಪದ ಬೆಳ್ಳಗೆರೆಯ ತ್ಯಾಜ್ಯ ನೀರು ಸಂಸ್ಕರಣಾ ಘಟಕದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ನಾಪತ್ತೆಯಾಗಿರುವ ಕಾರ್ಮಿಕರನ್ನು ತಮಿಳುನಾಡು ಮೂಲದ ಅಗಿಲನ್ ಮೋಹನ್ ಮತ್ತು ಬಿಹಾರ ಮೂಲದ ಬ್ರಿಜೇಶ್ ಕುಮಾರ್ ಎಂದು ಗುರುತಿಸಲಾಗಿದೆ.

Two Workers

ಈ ಇಬ್ಬರು ಕಾರ್ಮಿಕರ ಜೊತೆಗಿದ್ದ ಮತ್ತೊಬ್ಬ ಕಾರ್ತಿಕ್ ಎಂಬಾತ ಅದೃಷ್ಟವಶಾತ್ ಟ್ಯಾಂಕ್‌ನಿಂದ ಪ್ರಾಣಾಪಾಯದಿಂದ ಪಾರಾಗಿ ಹೊರಬರುವಲ್ಲಿ ಯಶಸ್ವಿಯಾಗಿದ್ದಾನೆ. ಆತನೇ ತಕ್ಷಣ ಘಟಕದ ಇತರ ಸಿಬ್ಬಂದಿಗೆ ಮಾಹಿತಿ ನೀಡಿದ್ದಾನೆ. ರಕ್ಷಿಸಲ್ಪಟ್ಟ ಕಾರ್ತಿಕ್‌ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಧಿಕಾರಿಗಳ ಪ್ರಕಾರ, ತ್ಯಾಜ್ಯ ನೀರು ಸಂಸ್ಕರಣಾ ವ್ಯವಸ್ಥೆಯಲ್ಲಿನ ಮೂರು ಗೇಟ್‌ಗಳನ್ನು ದುರಸ್ತಿ ಮಾಡುವ ಉದ್ದೇಶದಿಂದ ಈ ಕಾರ್ಮಿಕರು ಸುಮಾರು 60 ಅಡಿ ಆಳದ ಕೊಳಚೆ ನೀರಿನ ಟ್ಯಾಂಕ್‌ಗೆ ಇಳಿದಿದ್ದರು. ಈ ಟ್ಯಾಂಕ್ ಅನ್ನು ತ್ಯಾಜ್ಯ ನೀರು ಸಂಸ್ಕರಿಸಲು ಮತ್ತು ಪ್ರಕ್ರಿಯೆಗೊಳಿಸಲು ಬಳಸಲಾಗುತ್ತದೆ. ದುರಸ್ತಿ ಕಾರ್ಯದಲ್ಲಿ ತೊಡಗಿದ್ದಾಗ ಈ ಆಕಸ್ಮಿಕ ದುರ್ಘಟನೆ ಸಂಭವಿಸಿದೆ.

ಎನ್‌ಡಿಆರ್‌ಎಫ್ ಕಾರ್ಯಾಚರಣೆ

ಕಾರ್ಮಿಕರು ಟ್ಯಾಂಕ್‌ಗೆ ಬಿದ್ದಿರುವ ಮಾಹಿತಿ ಲಭ್ಯವಾದ ಕೂಡಲೇ ಎನ್‌ಡಿಆರ್‌ಎಫ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಜಂಟಿ ಕಾರ್ಯಾಚರಣೆಗೆ ಇಳಿದಿದ್ದಾರೆ. ರಾತ್ರಿಯಿಡೀ ಶೋಧ ಕಾರ್ಯಾಚರಣೆ ನಡೆಸಿದರೂ, ಟ್ಯಾಂಕ್‌ನೊಳಗಿನ ಪರಿಸ್ಥಿತಿ ಅತ್ಯಂತ ಕಠಿಣವಾಗಿರುವುದರಿಂದ ರಕ್ಷಣಾ ಕಾರ್ಯಕ್ಕೆ ತೀವ್ರ ಅಡಚಣೆಯಾಗುತ್ತಿದೆ.

"ಕಾರ್ತಿಕ್ ಎಂಬಾತ ಟ್ಯಾಂಕ್‌ನಿಂದ ಹೊರಬಂದು, ಒಳಗೆ ಏನಾಯಿತು ಎಂಬುದನ್ನು ವಿವರಿಸಿದ್ದಾನೆ. ಟ್ಯಾಂಕ್‌ನ ಸ್ವರೂಪ ಮತ್ತು ಘಟನೆ ನಡೆದು ಹಲವು ಗಂಟೆಗಳು ಕಳೆದಿರುವುದರಿಂದ, ನಾಪತ್ತೆಯಾಗಿರುವ ಕಾರ್ಮಿಕರು ಬದುಕುಳಿಯುವ ಸಾಧ್ಯತೆಗಳು ತೀರಾ ಕಡಿಮೆಯಿದೆ" ಎಂದು ಅಗ್ನಿಶಾಮಕ ದಳದ ಹಿರಿಯ ಅಧಿಕಾರಿಯೊಬ್ಬರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ವರ್ತೂರು ಪೊಲೀಸರು ಬಿಡಬ್ಲ್ಯುಎಸ್‌ಎಸ್‌ಬಿ ಅಧಿಕಾರಿಗಳ ವಿರುದ್ಧ ಇನ್ನೂ ಅಧಿಕೃತವಾಗಿ ಯಾವುದೇ ಪ್ರಕರಣ ದಾಖಲಿಸಿಕೊಂಡಿಲ್ಲ.

ಜಲಮಂಡಳಿ ತನಿಖಾ ಸಮಿತಿ ರಚನೆ

ವರ್ತೂರಿನ ಬೆಳ್ಳಗೆರೆ ಪ್ರದೇಶದಲ್ಲಿರುವ ಬೆಳ್ಳಂದೂರು ಎಸ್‌ಟಿಪಿ ಘಟಕದಲ್ಲಿ ನಡೆದಿರುವ ಈ ಭಾರಿ ದುರಂತದ ಕುರಿತು ಸಮಗ್ರ ತನಿಖೆ ನಡೆಸಲು ಬೆಂಗಳೂರು ಜಲಮಂಡಳಿಯು ಹಿರಿಯ ಅಧಿಕಾರಿಗಳನ್ನೊಳಗೊಂಡ ತ್ರಿಸದಸ್ಯ ತನಿಖಾ ಸಮಿತಿಯನ್ನು ರಚಿಸಿದೆ. ಶುಕ್ರವಾರ ಹೊರಡಿಸಲಾದ ಅಧಿಕೃತ ಪತ್ರದ ಪ್ರಕಾರ, ಬಿಡಬ್ಲ್ಯುಎಸ್‌ಎಸ್‌ಬಿ ನಿರ್ವಹಿಸುತ್ತಿರುವ 90 ಎಂಎಲ್‌ಡಿ ಸಾಮರ್ಥ್ಯದ ಬೆಳ್ಳಂದೂರು ಎಸ್‌ಟಿಪಿಯ 40 ಅಡಿ ಆಳದ ಕೊಳಚೆ ನೀರು ಪಂಪಿಂಗ್ ವೆಟ್ ವೆಲ್‌ನಲ್ಲಿ ಮೂವರು ಕಾರ್ಮಿಕರು ಬಿದ್ದ ಹಿನ್ನೆಲೆಯಲ್ಲಿ ಈ ತನಿಖೆಗೆ ಆದೇಶಿಸಲಾಗಿದೆ.

ಈ ತ್ರಿಸದಸ್ಯ ತನಿಖಾ ಸಮಿತಿಯಲ್ಲಿ ಮುಖ್ಯ ಇಂಜಿನಿಯರ್ ಕೆ.ಎನ್. ರಾಜೀವ್, ಹೆಚ್ಚುವರಿ ಮುಖ್ಯ ಇಂಜಿನಿಯರ್ ಕೆ.ಎಸ್. ರೇಣುಕುಮಾರ್ ಮತ್ತು ಉಪ ಮುಖ್ಯ ಇಂಜಿನಿಯರ್ ವಿನುತಾ ಡಿ.ಎಸ್. ಅವರನ್ನು ನೇಮಿಸಲಾಗಿದೆ. ಘಟನೆಗೆ ಕಾರಣವಾದ ನಿಖರ ಸನ್ನಿವೇಶಗಳನ್ನು ಪರಿಶೀಲಿಸುವುದು, ಲೋಪವೆಸಗಿದವರನ್ನು ಗುರುತಿಸುವುದು ಹಾಗೂ ಜೂನ್ 20 ರ ಮಧ್ಯಾಹ್ನ 12 ಗಂಟೆಯೊಳಗೆ ಬಿಡಬ್ಲ್ಯುಎಸ್‌ಎಸ್‌ಬಿ ಅಧ್ಯಕ್ಷರಿಗೆ ವಿವರವಾದ ವರದಿಯನ್ನು ಸಲ್ಲಿಸುವಂತೆ ಸಮಿತಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಸಮಿತಿಯ ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವ ನಿರೀಕ್ಷೆಯಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+