ಕ್ಷುಲ್ಲಕ ಕಾರಣಕ್ಕೆ ಎನ್ಆರ್ಐ ಮೇಲೆ ಊಬರ್ ಚಾಲಕನಿಂದ ಹಲ್ಲೆ
ಬೆಂಗಳೂರು, ಜೂನ್ 22: ಕ್ಷುಲ್ಲಕ ಕಾರಣಕ್ಕೆ ಊಬರ್ ಚಾಲಕ ಎನ್ಆರ್ಐ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಚಾಲಕನನ್ನು ಬಂಧಿಸಲಾಗಿದೆ.
ಹಲ್ಲೆಗೊಳಗಾದ ದುಬೈ ಮೂಲದ ಎಂಜಿನಿಯರ್ನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆಗೊಳಗಾದ ಎಂಜಿನಿಯರ್ ಎಂಜಿ ರಸ್ತೆಯಿಂದ ಇಂದಿರಾನಗರಕ್ಕೆ ಊಬರ್ನಲ್ಲಿ ಪ್ರಯಾಣಿಸಿದ್ದಾರೆ. ಇಂದಿರಾನಗರದ ಬಳಿ ಐದನೇ ಮುಖ್ಯ ಜಂಕ್ಷನ್ ಬಳಿ ಬಿಡಲು ಚಾಲಕನಿಗೆ ತಿಳಿಸಿದ್ದಾರೆ
ಇದ್ದಕ್ಕಿದ್ದಂತೆ ಸಿಟ್ಟಾದ ಚಾಲಕ ಜಿಪಿಎಸ್ನಲ್ಲಿ ತೋರಿಸುತ್ತಿರುವ ಜಾಗಕ್ಕೆ ನಿಮ್ಮನ್ನು ಕರೆದೊಯ್ಯುತ್ತೇನೆ ಅಲ್ಲಿಯೇ ಬಿಡುತ್ತೇನೆ ಎಂದು ಹೇಳಿದ್ದಾನೆ.

ಆದರೆ ಎನ್ಆರ್ಐ ಕಮಲ್ ಮೆನನ್ ತಾನು ಹೇಳಿದ ಕಡೆಯೇ ಬಿಡಬೇಕು ಎಂದು ವಾದ ಮಾಡಿದ್ದಾನೆ. ತಾವು ಇಳಿಯಬೇಕಿದ್ದ ಸ್ಥಳ ಇದು ಎಂದು ಇಳಿಯಲು ಹೋದಾಗ ಡೋರ್ ಓಪನ್ ಮಾಡಿ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ.
ಈ ಘಟನೆ ಬಳಿಕ ಸಿಟ್ಟಾದ ಮತ್ತೊಂದು ಕಾರಿನ ಮಾಲೀಕ ಪೊಲೀಸರಿಗೆ ದೂರು ನೀಡುವುದಾಗಿ ಗದರಿ ಅವರನ್ನು ತಳ್ಳಿದ್ದಾನೆ. ಅವರೊಂದಿಗೆ ಸೇರಿಕೊಂಡ ಉಬರ್ ಚಾಲಕ ರಘು ದುಬೈ ಮೂಲದ ಎಂಜಿನಿಯರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಾಲಕನನ್ನು ಬಂಧಿಸಲಾಗಿದೆ. ಘಟನೆಗೆ ಸಂಬಂಧಪಟ್ಟಂತೆ ಕೆಲ ಪುರಾವೆಗಳನ್ನು ಸಹ ದೂರುದಾರರು ನೀಡಿದ್ದಾರೆ. ಇನ್ನು, ಉಬರ್ ಕಂಪನಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಪೊಲೀಸ್ ತನಿಖೆಗೆ ಸಹಕಾರ ನೀಡೋದಾಗಿ ಭರವಸೆ ನೀಡಿದ್ದು, ಪೊಲೀಸ್ ತನಿಖೆ ಮುಂದುವರಿದಿದೆ.
ಕಾರಿನಲ್ಲಿದ್ದ ಪೈಪ್ನಿಂದಲೂ ತನ್ನ ಕಾಲಿಗೆ ಹಲ್ಲೆ ನಡೆಸಿದ್ದಾನೆ ಎಂದು ಮೆನನ್ ಪೊಲೀಸರಿಗೆ ಹೇಳಿದ್ದು, ತಾನು ವಾಪಸ್ ಅವನಿಗೆ ಹೊಡೆದಿಲ್ಲ ಎಂದು ಹೇಳಿಕೊಂಡಿದ್ದಾರೆ. ಸದ್ಯ, ಮೆನನ್ಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ












Click it and Unblock the Notifications