ಬೆಂಗಳೂರು ವಿವಿ ವ್ಯಾಪ್ತಿಯ ಎಲ್ಲಾ ಪದವಿ ಕಾಲೇಜುಗಳು ಜು.2ಕ್ಕೆ ಆರಂಭ
ಬೆಂಗಳೂರು, ಜೂನ್ 28: ಬೆಂಗಳೂರು ವಿಶ್ವವಿದ್ಯಾಲಯ, ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ಹಾಗೂ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಪದವಿ ಕಾಲೇಜುಗಳಲ್ಲಿ ಜು.2ರ ಸೋಮವಾರದಿಂದ ತರಗತಿಗಳು ಆರಂಭವಾಗಲಿದೆ.
ಅನೇಕ ಕಾರಣಗಳಿಂದಾಗಿ ಎರಡು ಬಾರಿ ಈ ಮೂರು ವಿಶ್ವವಿದ್ಯಾಲಯಗಳ ವ್ಯಾಪ್ತಿಯ ಪದವಿ ಕಾಲೇಜುಗಳ ಪ್ರಾರಂಭದ ದಿನಾಂಕವನ್ನು ಮುಂದೂಡಲಾಗಿತ್ತು. ಇದೀಗ ಜು.2ರಿಂದ ತರಗತಿಗಳನ್ನು ಆರಂಭಿಸಲಾಗುವುದು ಎಂದು ವಿಶ್ವವಿದ್ಯಾಲಯಗಳು ಅಧಿಸೂಚನೆ ಹೊರಡಿಸಿದೆ.
ಬೆಂಗಳೂರು ಕೇಂದ್ರ ವಿದ್ಯಾಳಯವು ಈ ಸಂಬಂಧ ಸ್ಪಷ್ಟ ನಿರ್ಧಾರಕ್ಕೆ ಬಂದಿರಲಿಲ್ಲ ಇದರಿಂದ ವಿದ್ಯಾರ್ಥಿಗಳು ಅಧ್ಯಾಪಕರಲ್ಲಿ ಗೊಂದಲ ಉಂಟಾಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ಕುಲಪತಿ ಪ್ರೊ. ಜಾಫೆಟ್, ತಮ್ಮ ವಿಶ್ವವಿದ್ಯಾಲಯಕ್ಕೆ ಸೇರಿದ ಪದವಿ ಕಾಲೇಜುಗಳ ತರಗತಿಗಳನ್ನು ಜು.2ರಿಂದ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯ ತ್ರಿಭಜನೆಗೊಂಡ ನಂತರ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ಹಾಗೂ ಬೆಂಗಳೂರು ಉತ್ತರ ವಿಶ್ವವಿದ್ಯಾಲಯಗಳಲ್ಲಿ 2018-19ನೇ ಸಾಲಿನಿಲಿಂದ ಬಿ.ಎ, ಬಿಎಸ್ಇ, ಬಿ.ಕಾಂ, ಬಿಬಿಎಂ, ಬಿಸಿಎ, ಬಿಎಚ್ಎಂ ಕೋರ್ಸ್ಗಳ ಪ್ರಥಮ ಸೆಮಿಸ್ಟರ್ನ ತರಗತಿಗಳು ಆರಂಭವಾಗಲಿದೆ.
ಆದರೆ ಮೂರು ವಿಶ್ವವಿದ್ಯಾಲಯಗಳ ವ್ಯಾಪ್ತಿಯ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 3,4,5 ಹಾಗೂ 6ನೇ ಸೆಮಿಸ್ಟರ್ ನ ವಿದ್ಯಾರ್ಥಿಗಳು ಸಂಪೂರ್ಣವಾಗಿ ಬೆಂಗಳೂರು ವಿಶ್ವವಿದ್ಯಾಲಯದ ನಿಯಂತ್ರಣಕ್ಕೆ ಒಳಪಡಲಿವೆ.
ಹಾಗಾಗಿ ಇನ್ನು ಎರಡು ವರ್ಷಗಳ ಕಾಲ ಬೆಂಗಳೂರು ವಿಶ್ವವಿದ್ಯಾಲಯ ತೆಗೆದುಕೊಳ್ಳುವ ಎಲ್ಲಾ ನಿರ್ಧಾರಗಳನ್ನು ಮೂರು ವಿಶ್ವವಿದ್ಯಾಲಯಗಳಲ್ಲಿರುವ ವಿದ್ಯಾರ್ಥಿಗಳು ಪಾಲಿಸಬೇಕು.
ಆದರೆ ಇದೀಗ ಜು.2ರಿಂದಲೇ ತರಗತಿಗಳನ್ನು ಪ್ರಾರಂಭಿಸಲು ಮುಂದಾಗಿರುವುದರಿಂದ ಎಲ್ಲಾ ಗೊಂದಲಕ್ಕೂ ತೆರೆಬಿದ್ದಂತಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications