KEA UGAyush: ಸ್ಟ್ರೇ ವೆಕೆನ್ಸಿ ಸುತ್ತಿಗೆ ಅರ್ಜಿ ಸಲ್ಲಿಕೆಯ ವೇಳಾಪಟ್ಟಿ ಪ್ರಕಟ, ಡಿಸೆಂಬರ್ 05 ಕೊನೆ ದಿನ
ಬೆಂಗಳೂರು, ಡಿಸೆಂಬರ್ 03: UGNEET 2025 ಆಯುಷ್ ಕೋರ್ಸ್ ಗಳ ಸ್ಟ್ರೇ ವೇಕೆನ್ಸಿ 3ನೇ ಸುತ್ತಿನ ಸೀಟು ಹಂಚಿಕೆಗೆ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಹೊಸದಾಗಿ ಅರ್ಜಿ ಸಲ್ಲಿಸುವವರಿಗೆ ಡಿಸೆಂಬರ್ 5 ಶುಕ್ರವಾರ ಕೊನೆಯ ದಿನವಾಗಿದೆ ಎಂದು ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ತಿಳಿಸಿದ್ದಾರೆ.
ಯುಜಿ ಆಯುಷ್ ಕೋರ್ಸ್ ಗಳ ಪ್ರವೇಶಕ್ಕೆ ಎನ್ ಸಿ ಐ ಎಸ್ ಎಂ, ಡಿಸೆಂಬರ್ 10ರವರೆಗೆ ಅವಕಾಶ ನೀಡಲಾಗಿದೆ. ಈ ಕಾರಣದಿಂದ ಯುಜಿ ಆಯುಷ್ ಕೋರ್ಸ್ಗಳ 3ನೇ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಮಾಡಲಾಗುತ್ತಿದೆ. ಹೊಸದಾಗಿ ಅರ್ಜಿ ಸಲ್ಲಿಸುವವರಿಗೆ ಅವಕಾಶ ನೀಡಲಾಗಿದೆ. ನೀಟ್ ರೋಲ್ ನಂಬರ್ ಲಿಂಕ್ ಮಾಡಿಕೊಳ್ಳಲು (ವೈ ಕ್ಲಾಸ್ ಮಾತ್ರ) ಡಿಸೆಂಬರ್ 3 ರಿಂದ 5ರವವರೆಗೆ ಅವಕಾಶ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಹೊಸದಾಗಿ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಇಂದು ಡಿಸೆಂಬರ್ 3ರ ಸಂಜೆ 6ರಿಂದ ಡಿಸೆಂಬರ್ 5ರ ಶುಕ್ರವಾರ ಮಧ್ಯಾಹ್ನ 1ಗಂಟೆವರೆಗೆ ಅವಕಾಶ ನೀಡಲಾಗಿದೆ. ಡಿಸೆಂಬರ್ 5ರ ಸಂಜೆ 6 ಗಂಟೆ ನಂತರ ತಾತ್ಕಾಲಿಕ ಫಲಿತಾಂಶ ಬಿಡುಗಡೆ ಮಾಡಲಾಗುವುದು. ನಂತರ ಮರುದಿನ ಡಿಸೆಂಬರ್ 6ರಂದು ಮಧ್ಯಾಹ್ನ 2 ಗಂಟೆ ನಂತರ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದರು.
ಶುಲ್ಕ ಪಾವತಿ ಡಿಸೆಂಬರ್ 9 ಕೊನೆ ದಿನ
ಇನ್ನೂ ಯುಜಿ ಆಯುಷ್ ಕೋರ್ಸ್ಗಳಿಗೆ ಸೀಟು ಹಂಚಿಕೆ ಆದವರು ಡಿಸೆಂಬರ್ 6 ರಿಂದ 9ರವರೆಗೆ ಶುಲ್ಕ ಪಾವತಿಸಬೇಕು. ಸೀಟು ಖಾತರಿ ಚೀಟಿ ಡೌನ್ಲೋಡ್ ಮಾಡಿಕೊಂಡು ಸಂಬಂಧಪಟ್ಟ ಕಾಲೇಜುಗಳಲ್ಲಿ ಪ್ರವೇಶ ಪಡೆಯಬೇಕು ಎಂದು ಅವರು ತಿಳಿಸಿದ್ದಾರೆ.
ಅಭ್ಯರ್ಥಿಗಳು ಗಮನಿಸಬೇಕಾದ ವಿಷಯವೇನೆಂದರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅಧಿಕೃತ ವೆಬ್ಸೈಟ್ನಲ್ಲಿ https://cetonline.karnataka.gov.in/kea/kahvs ಪ್ರಕಟಿಸಲಾದ ನವೆಂಬರ್ 25ರ ಪ್ರಕಟಣೆ ಓದಿಕೊಳ್ಳಬೇಕು. ಅದರಲ್ಲಿನ ಸೂಚನೆ ಮತ್ತು ಮಾರ್ಗಸೂಚಿಗಳು ಎಲ್ಲ ಸುತ್ತಿನ ಸೀಟು ಹಂಚಿಕೆಗಳಿಗೆ ಅನ್ವಯವಾಗುತ್ತವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕಾಲೇಜು ಪ್ರವೇಶಕ್ಕೆ ಕೆಇಎ ಸೂಚನೆ
ಇನ್ನೂ UGAyush ಎರಡನೇ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಬಿಡುಗಡೆ ಬೆನ್ನಲ್ಲೆ ಶುಲ್ಕ ಪಾವತಿಗೆ ಡಿಸೆಂಬರ್ 3ರತನಕ ಅವಕಾಶ ನೀಡಲಾಗಿತ್ತು. ಮೂಲ ದಾಖಲೆಗಳ ಸಮೇತ ಡಿಸೆಂಬರ್ 4ರೊಳಗೆ ಕಾಲೇಜುಗಳಲ್ಲಿ ಪ್ರವೇಶ ಪಡೆಯಬೇಕೆಂದು ಈಗಾಗಲೇ ಪ್ರಾಧಿಕಾರ ಸೂಚಿಸಿದೆ.
ಅದೇ ರೀತಿ PGNEET 2025 ಆಯುಷ್ ಕೋರ್ಸ್ ಗಳ ಪ್ರವೇಶಕ್ಕೆ ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆಯಾದವರು ಶುಲ್ಕ ಪಾವತಿಸಿ, ಕಾಲೇಜಿಗೆ ವರದಿ ಮಾಡಿಕೊಳ್ಳಲು ಡಿಸೆಂಬರ್ 3ರವರೆಗೆ ದಿನಾಂಕ ವಿಸ್ತರಿಸಲಾಗಿದೆ. ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಾಧಿಕಾರ ಮಾಹಿತಿ ನೀಡಿದೆ.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications