Flower Price: ಬರದ ಯುಗಾದಿ ಬಲು ದುಬಾರಿ: ಹೂವು-ಹಣ್ಣುಗಳ ದರ ಹೇಗಿದೆ ಗೊತ್ತಾ..?
ಬೆಂಗಳೂರು, ಏಪ್ರಿಲ್ 06: ನಾಡಿನೆಲ್ಲಡೆ ಯುಗಾದಿ ಸಂಭ್ರಮ ಮನೆ ಮಾಡುತ್ತಿದೆ. ಈ ಬಾರಿ ಯುಗಾದಿ ದುಬಾರಿಯಾದರೂ ಸಹ ಹಬ್ಬದ ಖರೀದಿ ಜೋರಾಗಿ ನಡೆಯುತ್ತಿದೆ. ಕೆ.ಆರ್ ಮಾರುಕಟ್ಟೆ ಸೇರಿದಂತೆ ಬೆಂಗಳೂರಿನ ಮಾರುಕಟ್ಟೆಗಳು ಜನರಿಂದ ತುಂಬಿ ತುಳುಕುತ್ತಿದೆ. ಹಿಂದೂಗಳ ಹೊಸ ವರ್ಷ ಯುಗಾದಿ ಹಬ್ಬಕ್ಕೆ ಮೂರು ದಿನವಿದ್ದು, ಹಬ್ಬದ ಸಿದ್ಧತೆ ಜೋರಾಗಿದೆ.
ಮಾರುಕಟ್ಟೆಗಳಲ್ಲಿ ಯುಗಾದಿ ಹಬ್ಬದ ವ್ಯಾಪಾರ ವಹಿವಾಟು ಜೋರಾಗಿದ್ದು, ಬೇವು ಬೆಲ್ಲದ ಹಬ್ಬಕ್ಕೆ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಮಾರುಕಟ್ಟೆಗಳಲ್ಲಿ ಹೂವು ಮತ್ತು ಹಣ್ಣುಗಳ ದರ ಗಗನಕ್ಕೇರಿದೆ. ಒಂದು ವಾರದ ಹಿಂದೆ ಇದ್ದ ಬೆಲೆಗಿಂತ ಇದೀಗ ಹೂವು ಮತ್ತು ಹಣ್ಣುಗಳ ದರ ದುಪಟ್ಟಾಗಿದೆ.

ಸದ್ಯ ಮಾರುಕಟ್ಟೆಗಳಲ್ಲಿ ಹೂವುಗಳ ದರ ವಿವರ ಇಲ್ಲಿದೆ.
ಈ ಹಿಂದೆ 100 ರೂಪಾಯಿ ಇದ್ದ 1 ಕೆಜಿ ಗುಲಾಬಿ 400 ರೂಪಾಯಿ ಆಗಿದೆ. ಒಂದು ಕೆಜಿಗೆ 300 ರೂಪಾಯಿ ಇದ್ದ ಸೇವಂತಿ 600 ರಿಂದ 900 ರೂಪಾಯಿಗೆ ಏರಿಕೆಯಾಗಿದೆ. ಚೆಂಡೂ ಹೂ 50 ರೂಪಾಯಿಯಿಂದ 100 ರೂಪಾಯಿ ಆಗಿದ್ದು, ಸುಗಂಧರಾಜದ ಬೆಲೆ 50 ರೂಪಾಯಿಯಿಂದ 160 ರೂಪಾಯಿ ಆಗಿದೆ. ಹಾಗೂ ಕನಕಾಂಬರಿ 600 ರೂಪಾಯಿಯಿಂದ 800 ರೂಪಾಯಿಗೆ ಏರಿಕೆ ಕಂಡಿದೆ.
ಇನ್ನು ಹಣ್ಣಿನ ದರದಲ್ಲೂ ಏರಿಕೆ ಕಂಡಿದೆ. ಕಳೆದ ಕೆಲ ದಿನಗಳ ಹಿಂದೆ ಹೋಲಿಸಿದರೆ ಪ್ರಸ್ತುತ ಕೆಲವು ಹಣ್ಣಿನ ದರ ದುಪಟ್ಟು ಹೆಚ್ಚಾಗಿದೆ. ಸದ್ಯ ಕಿತ್ತಾಳೆ ಹಣ್ಣಿಗೆ ಭಾರೀ ಬೆಡಿಕೆ ಇದ್ದು, ಈ ಹಿಂದೆ ಕೆ.ಜಿ.ಗೆ 70 ರೂಪಾಯಿಗಳಿದ್ದ ಕಿತ್ತಳೆ ಹಣ್ಣಿನ ಬೆಲೆ ಇದೀಗ 120-150 ರೂಪಾಯಿ ಆಗಿದೆ. ಪಪ್ಪಾಯ ಹಣ್ಣಿನ ಬೆಲೆ 50 ರೂಪಾಯಿಂದ 70 ರೂಪಾಯಿಗೆ ಏರಿಕೆ ಆಗಿದೆ. ಮಾವಿನ ಹಣ್ಣಿನ ದರ 150 ರೂಪಾಯಿಯಿದ್ದು, ಇತರ ಹಣ್ಣುಗಳ ಬೆಲೆ ಕೂಡ ಏರಿಕೆ ಕಂಡಿದೆ. ಇನ್ನು ಪೂಜೆಗೆ ಬೇಕಾದ ತೆಂಗಿನ ಕಾಯಿ, ಬಾಳೆ ಹಣ್ಣು, ತೋರಣ, ಬೇವು ಹಾಗೂ ನಿಂಬೆ ಹಣ್ಣುಗಳ ಬೆಲೆ ಕೂಡ ಹೆಚ್ಚಾಗಿದೆ.
ಈ ಬಾರಿ ರಾಜ್ಯದಲ್ಲಿ ಬರ ಆವರಿಸಿದ್ದು, ಹೂವು ಬೆಳೆಗಾರರು ಬೆಳೆ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ನೀರಿನ ಸಮಸ್ಯೆ ಹಾಗೂ ತಾಪಮಾನ ಗರಿಷ್ಠ ಏರಿಕೆಯಿಂದ ಎಲ್ಲಾ ಬೆಳೆಗಳು ಹಾಳಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹೂವು ಹಣ್ಣುಗಳ ಬೆಲೆ ಹಬ್ಬದ ಸಮಯದಲ್ಲಿ ಗಗನಕ್ಕೇರಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications