ಬೆಂಗಳೂರು ವಿವಿಯಲ್ಲಿ ULC ಮಾದರಿ ವಿಶ್ವಸಂಸ್ಥೆ ಕಲಾಪ 2020
ಬೆಂಗಳೂರು, ಅಕ್ಟೋಬರ್ 05:ಅಮೆರಿಕವು ಮಹಾತ್ಮ ಗಾಂಧಿ ಅವರ ಬಗ್ಗೆ ವಿಶೇಷ ಗೌರವ ಹೊಂದಿದೆ. ಅವರ ಮೌಲ್ಯಗಳು ಸಮಾಜದ ಮೇಲೆ ಅಗಾಧ ಪ್ರಭಾವ ಬೀರಿವೆ ಎಂದು ಚೆನ್ನೈನಲ್ಲಿನ ಅಮೆರಿಕ ದೂತಾವಾಸದ ಪಬ್ಲಿಕ್ ಅಫೇರ್ಸ್ ಆಫೀಸರ್ ಆನ್ ಲೀ ಶೇಷಾದ್ರಿ ಹೇಳಿದರು.
ಬೆಂಗಳೂರು ವಿಶ್ವ ವಿದ್ಯಾಲಯದ ಕಾನೂನು ಕಾಲೇಜು ಆಯೋಜಿಸಿದ್ದ "ಮಾಡೆಲ್ ಯುನೈಟೆಡ್ ನೇಷನ್ಸ್" ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅಮೆರಿಕ- ಭಾರತದ ನಡುವಿನ ಸಂಬಂಧ ಅತ್ಯಂತ ಮಹತ್ವದ್ದು ಎಂದರು.
"ಮಾಡೆಲ್ ಯುನೈಟೆಡ್ ನೇಷನ್ಸ್ ಕಾರ್ಯಕ್ರಮವು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಅನುವು ಮಾಡಿಕೊಡುತ್ತದೆ. ವಿದ್ಯಾರ್ಥಿಗಳಿಗೆ ಇಂಥ ಅವಕಾಶ ಒದಗಿಸಿಕೊಟ್ಟ ಕಾಲೇಜಿನ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.
.

ನ್ಯಾಷನಲ್ ಬುಕ್ ಟ್ರಸ್ಟ್ ನ ನಿರ್ದೇಶಕ ಲೆಫ್ಟಿನೆಂಟ್ ಕರ್ನಲ್ ಯುವರಾಜ್ ಮಲಿಕ್ ಮಾತನಾಡಿ, 'ಅಂತಾರಾಷ್ಟ್ರೀಯ ಹಂತದಲ್ಲಿ ಸಹಭಾಗಿತ್ವದ ಅಗತ್ಯವಿದೆ. ಹಾಗೆಯೇ ವಿಶ್ವಸಂಸ್ಥೆ ಹಾಗೂ ಇತರೆ ರಾಷ್ಟ್ರಗಳು ನಿಶಸ್ತ್ರೀಕರಣದತ್ತ ಗಮನ ನೀಡಬೇಕಿದೆ' ಎಂದು ಹೇಳಿದರು.
ವಿಶ್ವಸಂಸ್ಥೆ ವಿಶೇಷ ಅಧಿಕಾರಿ ಸಮರ್ಥ್ ಪಾಠಕ್ ಮಾತನಾಡಿ, ಯುವಕರು ವಿಶ್ವದ ಭವಿಷ್ಯವಾಗಿದ್ದು, ಸಾಮಾಜಿಕ ಭದ್ರತೆ ಬಗ್ಗೆ ಗಮನ ನೀಡಬೇಕಾಗಿದೆ, ಸಮಾಜದ ಸರ್ವತೋಮುಖ ಏಳಿಗೆಗಾಗಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕಿದೆ.
ವಿಶ್ವಸಂಸ್ಥೆ ಮಾನವ ಹಕ್ಕುಗಳ ಅಧಿಕಾರಿ ಕಿರಿ ಅತ್ರಿ ಮಾತನಾಡಿ, ವಲಸಿಗರು ಹಾಗೂ ನಿರಾಶ್ರಿತರ ಬಗ್ಗೆ ಎಲ್ಲಾ ಸರ್ಕಾರಗಳು ಆಸಕ್ತಿ ವಹಿಸಬೇಕಿದೆ,ಅವರ ಪುನರ್ವಸತಿ ಬಗ್ಗೆಯೂ ಹೆಚ್ಚಿನ ಒತ್ತು ನೀಡಬೇಕಿದೆ ಎಂದರು.
Recommended Video
ಬೆಂಗಳೂರು ವಿಶ್ವವಿದ್ಯಾಲಯ ಕುಲಪತಿ ಡಾ. ವೇಣುಗೋಪಾಲ್ ಮಾತನಾಡಿ, ಇಂದಿನ ಆಧುನಿಕ ಜಗತ್ತಿನಲ್ಲಿ ಪ್ರಜಾತಂತ್ರ ರಕ್ಷಣೆಗಾಗಿ ಮಾತುಕತೆಯು ಪ್ರಮುಖ ಪಾತ್ರವಹಿಸಲಿದೆ.
ಆದರೆ ಇಂದಿನ ಕೊವಿಡ್ 19 ಹಾಗೂ ಇತರೆ ಜಾಗತಿಕ ಸಮಸ್ಯೆಗಳಿಗೆ ಮಾತುಕತೆ ಮೂಕ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ. ಈ ನಿಟ್ಟಿನಲ್ಲಿ ವಿಶ್ವವಿದ್ಯಾಲಯವು ಇಂತಹ ವೇದಿಕೆಯನ್ನು ಸೃಷ್ಟಿಸಿಕೊಡುತ್ತಿದೆ.
-
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ












Click it and Unblock the Notifications