ಬಗೆಹರಿಯದ ಕಿಸ್ ಆಫ್ ಲವ್ ಆಯೋಜನೆ ಗೊಂದಲ
ಬೆಂಗಳೂರು, ನ.21 : ಬೆಂಗಳೂರಿನಲ್ಲಿ 'ಕಿಸ್ ಆಫ್ ಲವ್' ಆಯೋಜನೆ ಕುರಿತ ಗೊಂದಲಗಳು ಮುಂದುವರೆದಿದ್ದು, ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು ಎಂದು ಸಚಿವೆ ಉಮಾಶ್ರೀ ಅವರು ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ. 'ಕಿಸ್ ಆಫ್ ಲವ್' ಕಾರ್ಯಕ್ರಮಕ್ಕೆ ಅವಕಾಶ ನೀಡುವ ಕುರಿತು ಎರಡು ದಿನದಲ್ಲಿ ಪೊಲೀಸರು ತೀರ್ಮಾನ ಪ್ರಕಟಿಸುವ ಸಾಧ್ಯತೆ ಇದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಅವರು, ಗೃಹ ಸಚಿವ ಕೆ.ಜೆಜಾರ್ಜ್ ಅವರಿಗೆ ಪತ್ರ ಬರೆದಿದ್ದು, ಬೆಂಗಳೂರಿನಲ್ಲಿ 'ಕಿಸ್ ಆಫ್ ಲವ್' ನಡೆಸಲು ಅನುಮತಿ ನೀಡಬಾರದು ಎಂದು ಒತ್ತಾಯಿಸಿದ್ದಾರೆ. ಸಾರ್ವಜನಿಕವಾಗಿ ಯುವಕ-ಯುವತಿ ಚುಂಬಿಸುವುದು ನಮ್ಮ ಸಂಸ್ಕೃತಿಗೆ ವಿರುದ್ಧವಾಗಿದ್ದು, ಇಂತಹ ಪ್ರತಿಭಟನೆಗೆ ಅವಕಾಶ ಕೊಡಬೇಡಿ ಎಂದು ಆಗ್ರಹಿಸಿದ್ದಾರೆ.

'ಕಿಸ್ ಆಫ್ ಲವ್' ಕಾರ್ಯಕ್ರಮವನ್ನು ಮೊದಲಿನಿಂದಲೂ ವಿರೋಧಿಸುತ್ತಿರುವ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಸಂದೀಪ್ ಪಾಟೀಲ್ ಅವರನ್ನು ಗುರುವಾರ ಭೇಟಿ ಮಾಡಿ, ಇಂತಹ ಕಾರ್ಯಕ್ರಮಕ್ಕೆ ಅವಕಾಶ ನೀಡಬೇಡಿ ಎಂದು ಮನವಿ ಮಾಡಿದ್ದಾರೆ. [ಕಿಸ್ ಆಫ್ ಲವ್, ವಿದ್ಯಾರ್ಥಿಗಳು ಏನಂತಾರೆ?]
ಕೇರಳದಲ್ಲಿ ನೈತಿಕ ಪೊಲೀಸ್ಗಿರಿ ಹೆಸರಿನಲ್ಲಿ ನಡೆಯುವ ದೌರ್ಜನ್ಯದ ವಿರುದ್ಧ ಪ್ರತಿಭಟಿಸಲು 'ಕಿಸ್ ಆಫ್ ಲವ್' ಕಾರ್ಯಕ್ರಮವನ್ನು ಆಯೋಜಿಸಲು ರಚಿತಾ ತನೇಜಾ ಮುಂದಾಗಿದ್ದಾರೆ. ನ.30ರಂದು ಕಾರ್ಯಕ್ರಮ ನಡೆಸಲು ಅನುಮತಿ ನೀಡಬೇಕೆಂದು ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ.

ಪೊಲೀಸರು ಪ್ರತಿಭಟನೆ ಉದ್ದೇಶದ ಬಗ್ಗೆ ರಚಿತಾ ತನೇಜಾ ಅವರಿಗೆ ಹಲವು ಸ್ಪಷ್ಟನೆಗಳನ್ನು ಕೇಳಿದ್ದು, ಈ ಬಗ್ಗೆ ಅವರು ಉತ್ತರ ನೀಡಿದ ನಂತರ ಪೊಲೀಸರು ಅನುಮತಿ ನೀಡಲಿದ್ದಾರೆಯೇ? ಎಂಬ ಬಗ್ಗೆ ನಿರ್ಧಾರ ಹೊರಬೀಳಲಿದೆ. ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಕೆ.ಜೆ.ಜಾರ್ಜ್ ಕಾನೂನು ಪರಿಮಿತಿಯಲ್ಲಿ ಪ್ರತಿಭಟನೆ ನಡೆಸಬಹುದು ಎಂದು ಹೇಳಿದ್ದಾರೆ. [ಕಿಸ್ ಆಫ್ ಲವ್ ವಿರುದ್ಧ ಒನಕೆ ಚಳವಳಿ]
ಎರಡು ದಿನದಲ್ಲಿ ನಿರ್ಧಾರ : 'ಕಿಸ್ ಆಫ್ ಲವ್' ಕಾರ್ಯಕ್ರಮ ಆಯೋಜಿಸಲು ಅನುಮತಿ ನೀಡಬೇಕೆಂದು ಮನವಿ ಬಂದಿದೆ. ಸುಮಾರು 150 ಜನರು ಇದರಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮ ಆಯೋಜನೆಗೆ ಅನುಮತಿ ನೀಡುವ ಕುರಿತು ಎರಡು ದಿನದಲ್ಲಿ ತೀರ್ಮಾನಿಸಲಾಗುವುದು ಎಂದು ಕೇಂದ್ರ ವಿಭಾಗದ ಡಿಸಿಪಿ ಸಂದೀಪ್ ಪಾಟೀಲ್ ತಿಳಿಸಿದ್ದಾರೆ. [ಬೆಂಗಳೂರಿಗೂ ಬಂತು 'ಕಿಸ್ ಆಫ್ ಲವ್'!]
-
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ












Click it and Unblock the Notifications