ರಾಜೀನಾಮೆ ಸ್ವೀಕರಿಸಿ, ಇಲ್ಲವೆ ಕಾನೂನು ಕ್ರಮ ಎದುರಿಸಿ: ಉಮೇಶ್ ಜಾಧವ್
ಬೆಂಗಳೂರು, ಮಾರ್ಚ್ 14: ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಉಮೇಶ್ ಜಾಧವ್ ಅವರ ರಾಜೀನಾಮೆ ಇನ್ನೂ ಅಂಗೀಕಾರಗೊಂಡಿಲ್ಲ.
ಉಮೇಶ್ ಜಾಧವ್ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸರ್ವ ತಯಾರಿ ಮಾಡಿಕೊಂಡಿದ್ದು, ಶಾಸಕ ಸ್ಥಾನಕ್ಕೆ ಸಲ್ಲಿಸಿರುವ ರಾಜೀನಾಮೆ ಇನ್ನೂ ಅಂಗೀಕಾರ ಆಗಿಲ್ಲದಿರುವುದು ಅವರಿಗೆ ಆತಂಕ ತಂದಿದೆ.
ನನ್ನ ರಾಜೀನಾಮೆ ಅಂಗೀಕಾರವನ್ನು ಉದ್ದೇಶಪೂರ್ವಕವಾಗಿ ತಡೆಹಿಡಿದಿರುವ ಸಾಧ್ಯದೆ ಇದ್ದು, ಅದೊಂದು ವೇಳೆ ಸತ್ಯವಾಗಿದ್ದರೆ ನಾನೂ ಕಾನೂನು ಹೋರಾಟಕ್ಕೆ ಮುಂದಾಗುತ್ತೇನೆ ಎಂದು ಉಮೇಶ್ ಜಾಧವ್ ಹೇಳಿದ್ದಾರೆ.

ಉಮೇಶ್ ಜಾಧವ್ ಅವರು ಕಲಬುರಗಿ ಕ್ಷೇತ್ರದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧವಾಗಿ ಬಿಜೆಪಿಯಿಂದ ಲೋಕಸಭೆ ಚುನಾವಣೆಗೆ ಕಣಕ್ಕೆ ಇಳಿಯಲಿದ್ದು, ರಾಜೀನಾಮೆ ಅಂಗೀಕಾರವಾಗದೆ ಸಭಾಧ್ಯಕ್ಷರು ಉಮೇಶ್ ಜಾಧವ್ ವಿರುದ್ಧ ವಿಚಾರಣೆ ಅಥವಾ ಅವರ ಶಾಸಕತ್ವ ರದ್ದು ಮಾಡಿದರೆ ಜಾಧವ್ ಅವರಿಗೆ ಸಮಸ್ಯೆ ಆಗಲಿದೆ.
ಉಮೇಶ್ ಜಾಧವ್ ವಿರುದ್ಧ ಪಕ್ಷಾಂತರ ನಿಷೇಧ ಕಾಯ್ದೆ ಅಡಿ ಕಾಂಗ್ರೆಸ್ ಪಕ್ಷವು ದೂರು ದಾಖಲಿಸಿತ್ತು. ದೂರು ದಾಖಲಿಸಿದ ಕೆಲವು ದಿನಗಳ ನಂತರ ಜಾಧವ್ ರಾಜೀನಾಮೆ ನೀಡಿದ್ದರು. ರಾಜೀನಾಮೆ ಅಂಗೀಕಾರ ಮಾಡದ ಸ್ಪೀಕರ್ ಅವರು ಇದೇ ತಿಂಗಳ 12ರಂದು ಅವರನ್ನು ವಿಚಾರಣೆಗೆ ಕರೆದಿದ್ದರು. ಆದರೆ ಚುನಾವಣೆ ನೀತಿ ಸಂಹಿತೆ ಘೋಷಣೆ ಆದ ಕಾರಣ ವಿಚಾರಣೆ ಮುಂದೂಡಲಾಯಿತು.
ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆ ಅಂಗೀಕಾರ ಆಗದಿದ್ದರೂ ಸಹ ಜಾಧವ್ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಬಹುದಾಗಿದೆ. ಆದರೆ ಪಕ್ಷಾಂತರ ನಿಷೇಧದ ಅನ್ವಯ ಶಿಕ್ಷೆಯಾದರೆ ಅವರು ಗೆದ್ದ ಸ್ಥಾನವನ್ನೂ ಕಳೆದುಕೊಳ್ಳಲಿದ್ದಾರೆ. ಆರು ವರ್ಷ ಯಾವುದೇ ಚುನಾವಣೆಯನ್ನೂ ಎದುರಿಸಲು ಸಾಧ್ಯವಾಗುವುದಿಲ್ಲ.
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ












Click it and Unblock the Notifications